ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ- 2023 ರ ಪ್ರಯುಕ್ತ ಜಿಲ್ಲಾ ಮಟ್ಟದಲ್ಲಿ ಹಿರಿಯ ನಾಗರಿಕರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಆಯೋಜಿಸಲಾಗುತ್ತಿದೆ.
ಪ್ರತಿ ವರ್ಷದಂತೆ ಅಕ್ಟೋಬರ್-01 ರಂದು “ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2023” ಯನ್ನು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಆಚರಿಸಲಾಗುತ್ತಿದ್ದು, ದಿನಾಚರಣೆಯನ್ನು ಆಚರಿಸುವ ಸಂದರ್ಭದಲ್ಲಿ ಹಿರಿಯ ನಾಗರಿಕರು ಕ್ರೀಡಾ ಮನೋಭಾವ ಮತ್ತು ಕಲೆಯನ್ನು ತೋರ್ಪಡಿಸಲು ಅನುವಾಗುವಂತೆ ಜಿಲ್ಲಾ ಮಟ್ಟದಲ್ಲಿ ಪುರುಷರಿಗೆ ಮತ್ತು ಮಹಿಳೆಯರಿಗೆ ವಯಸ್ಸಿಗೆ ಅನುಗುಣವಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ದೊಡ್ಡಬಳ್ಳಾಪುರದ ಭಗತ್ಸಿಂಗ್ ಕ್ರೀಡಾಂಗಣದಲ್ಲಿ ಸೆ.22ರಂದು ಬೆಳಗ್ಗೆ-9ಕ್ಕೆ ಆಯೋಜಿಸಲಾಗಿದೆ.
ಸಾಂಸ್ಕೃತಿಕ ಸ್ಪರ್ಧೆಗಳು
60 ವರ್ಷದಿಂದ 80 ವರ್ಷ ಮೇಲ್ಪಟ್ಟ ಮಹಿಳೆಯರು, ಪುರುಷರಿಗೆ ಏಕಪಾತ್ರ ಅಭಿನಯ, ಗಾಯನ ಸ್ಫರ್ಧೆ, ಆಶುಭಾಷಣ ಸಾಂಸ್ಕೃತಿಕ ಸ್ಪರ್ಧೆಗಳನ್ನು ಎರ್ಪಡಿಸಲಾಗಿದೆ.
ಕ್ರೀಡಾ ಸ್ಪರ್ಧೆಗಳು
60 ವರ್ಷದಿಂದ 69 ವರ್ಷದ ಪುರುಷ ಹಾಗೂ ಮಹಿಳೆಯರಿಗೆ ಒಟ, ಜಾವಲಿನ್ ಮ್ಯೂಸಿಕಲ್ ಚೇರ್ ಕ್ರೀಡೆ ಸ್ಪರ್ಧೆ, 70 ರಿಂದ 79 ವರ್ಷ, 80 ವರ್ಷ ಮೇಲ್ಪಟ್ಟ ಪುರುಷ ಮಹಿಳೆಯರಿಗೆ ನಡಿಗೆ, ರಿಂಗ್ ನ್ನು ಬಕೆಟ್ ನಲ್ಲಿ ಎಸೆಯುವುದು, ಮ್ಯೂಸಿಕಲ್ ಚೇರ್ ಕ್ರೀಡಾ ಸ್ಪರ್ಧೆಗಳನ್ನು ಎರ್ಪಡಿಸಲಾಗಿದೆ.
ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಹಿರಿಯ ನಾಗರಿಕರು ಕಡ್ಡಾಯವಾಗಿ ವಯಸ್ಸಿಗೆ ಸಂಬಂಧಿಸಿದ ದಾಖಲಾತಿಗಳೊಂದಿಗೆ ಹಾಜರಾಗುವುದು ಹಾಗೂ ಒಬ್ಬ ವ್ಯಕ್ತಿಯು 02 ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶವಿರುತ್ತದೆ (02 ಕ್ರೀಡಾ ಸ್ಪರ್ಧೆಗಳಲ್ಲಿ ಆಗಬಹುದು, 02 ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಆಗಬಹುದು ಅಥವಾ 01 ಕ್ರೀಡೆ ಹಾಗೂ 01 ಸಾಂಸ್ಕೃತಿಕ ಸ್ಪರ್ಧೆ ಆಗಬಹುದು)ಅಧಿಕಾರಿಗಳು ವಿಧಿಸುವ ಷರತ್ತುಗಳಿಗೆ ಬದ್ದರಾಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ದೂರವಾಣಿ ಸಂಖ್ಯೆ 9980860605 ವಿಕಲಚೇತನರ ಸಹಾಯವಾಣಿ ಕೇಂದ್ರ ದೂರವಾಣಿ ಸಂಖ್ಯೆ-080-29787441 ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ದೂರವಾಣಿ ಸಂಖ್ಯೆ-08027622030 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…