ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ ( Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ.
ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳು ಇರುತ್ತವೆ, ಈ ಹಿನ್ನೆಲೆ ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳ ಕೆಲಸದ ಅವಧಿಯನ್ನು ಸೆ.23ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಕಾರ್ಯನಿರ್ವಹಿಸಲು ಕಚೇರಿ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ.
ಸೆಪ್ಟೆಂಬರ್ 23 ನಾಲ್ಕನೇ ಶನಿವಾರವದಂದೂ ಕೂಡ ಈ ಅವಧಿಯಲ್ಲಿ ಕಾರ್ಯ ನಿರ್ವಹಿಸಲಾಗುವುದು. ಈ ಕೆಲಸದ ಅವಧಿಯು ಸೆ.30 ರವರೆಗೆ ಮಾತ್ರ ಜಾರಿಯಲ್ಲಿರುತ್ತದೆ.
ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರಾದ ಬಿ.ಆರ್.ಮಮತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…