ಹೊಸಕೋಟೆಯ 38 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಸೆಪ್ಟೆಂಬರ್ 30 ರ ಒಳಗಾಗಿ ಮೊದಲ ಹಂತದ (FIRST PHASE) ಕಾಮಗಾರಿ ಪೂರೈಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್ ಭೋಸರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಂದು ಹೊಸಕೋಟೆಯ ರಾಷ್ಟ್ರೀಯ ಹೆದ್ದಾರಿ 75 ರ ಪಕ್ಕದಲ್ಲಿ ಸಾಗುವ ಎರಡು ಕಿಲೋಮೀಟರ್ ಪೈಪ್ ಲೈನ್ ಮತ್ತು ಎಲೆ ಮಲ್ಲಪ್ಪ ಶೆಟ್ಟಿ ಕೆರೆ ನೀರು ಸಂಸ್ಕರಣಾ ಘಟಕಕ್ಕೆ ಶಾಸಕ ಶರತ್ ಬಚ್ಚೇಗೌಡ ಅವರೊಂದಿಗೆ ಭೇಟಿ ನೀಡಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಅವರು, 38 ಕೆರೆಗಳಿಗೆ ಶೀಘ್ರದಲ್ಲೇ ಸಂಸ್ಕರಿಸಿದ ನೀರು ತುಂಬಿಸುವ ಕಾರ್ಯವನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಅಗತ್ಯ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಕಾಮಗಾರಿ ಅಂತಿಮ ಹಂತದಲ್ಲಿದ್ದು, ಬಾಕಿ ಇರುವ ಕಾಮಗಾರಿಗಳನ್ನ ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಎರಡನೇ ಹಂತದ ಸಂಸ್ಕರಿಸಿದ ನೀರು ಜಿಲ್ಲೆಯಲ್ಲಿ ಅಂತರ್ಜಲ ಹೆಚ್ಚಳಕ್ಕೆ ದಾರಿ ಮಾಡಲಿದೆ. ಇದರಿಂದ ರೈತರಿಗೆ ಬಹಳ ಉಪಯೋಗವಾಗಲಿದೆ ಎಂದು ಹೇಳಿದರು.
ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರಕಾರ ರೈತ ಪರ ನಿಲುವನ್ನು ತೆಗೆದುಕೊಂಡಿದೆ. ರಾಜ್ಯ ಸರಕಾರ ತನ್ನ ವ್ಯಾಪ್ತಿಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಈ ನಿಟ್ಟಿನಲ್ಲಿ ದೆಹಲಿಯಲ್ಲೂ ಸಭೆ ನಡೆಸಿದ್ದಾರೆ. ಸರ್ವಪಕ್ಷಗಳ ಭೇಟಿಗೆ ಪ್ರಧಾನಿ ನರೇಂದ್ರ ಮೋದಿಯವರ ಸಮಯವನ್ನು ಕೇಳಿದ್ದಾರೆ. ತಜ್ಞರು, ಹಿರಿಯ ಅಧಿಕಾರಿಗಳು ಮತ್ತು ಹಿರಿಯ ನ್ಯಾಯವಾದಿಗಳೊಂದಿಗೆ ಸರ್ಕಾರ ನಿರಂತರವಾಗಿ ಸಂಪರ್ಕದಲ್ಲಿದೆ. ರಾಜ್ಯ ಸರಕಾರ ರೈತ ಪರ ನಿಲುವನ್ನು ತಗೆದುಕೊಳ್ಳುವಲ್ಲಿ ವಿಫಲವಾಗಿದೆ ಎನ್ನುವ ಆರೋಪ ಸತ್ಯಕ್ಕೆ ದೂರ. ರಾಜ್ಯ ಸರಕಾರ ರೈತರ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದರು.
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…