ಸೆ. 30 ರ ಒಳಗಾಗಿ ಹೊಸಕೋಟೆ ಮೊದಲ ಹಂತದ ಏತ ನೀರಾವರಿ ಯೋಜನೆ ಪ್ರಾರಂಭಿಸಲು ಅಗತ್ಯ ಕ್ರಮ: ಸಚಿವ ಎನ್.ಎಸ್ ಭೋಸರಾಜು ಸೂಚನೆ

ಹೊಸಕೋಟೆಯ 38 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಸೆಪ್ಟೆಂಬರ್ 30 ರ ಒಳಗಾಗಿ ಮೊದಲ ಹಂತದ (FIRST PHASE) ಕಾಮಗಾರಿ ಪೂರೈಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್ ಭೋಸರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ಹೊಸಕೋಟೆಯ ರಾಷ್ಟ್ರೀಯ ಹೆದ್ದಾರಿ 75 ರ ಪಕ್ಕದಲ್ಲಿ ಸಾಗುವ ಎರಡು ಕಿಲೋಮೀಟರ್ ಪೈಪ್ ಲೈನ್ ಮತ್ತು ಎಲೆ ಮಲ್ಲಪ್ಪ ಶೆಟ್ಟಿ ಕೆರೆ ನೀರು ಸಂಸ್ಕರಣಾ ಘಟಕಕ್ಕೆ ಶಾಸಕ ಶರತ್ ಬಚ್ಚೇಗೌಡ ಅವರೊಂದಿಗೆ ಭೇಟಿ ನೀಡಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.

ನಂತರ ಮಾತನಾಡಿದ ಅವರು, 38 ಕೆರೆಗಳಿಗೆ ಶೀಘ್ರದಲ್ಲೇ ಸಂಸ್ಕರಿಸಿದ ನೀರು ತುಂಬಿಸುವ ಕಾರ್ಯವನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಅಗತ್ಯ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಕಾಮಗಾರಿ ಅಂತಿಮ ಹಂತದಲ್ಲಿದ್ದು, ಬಾಕಿ ಇರುವ ಕಾಮಗಾರಿಗಳನ್ನ ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಎರಡನೇ ಹಂತದ ಸಂಸ್ಕರಿಸಿದ ನೀರು ಜಿಲ್ಲೆಯಲ್ಲಿ ಅಂತರ್ಜಲ ಹೆಚ್ಚಳಕ್ಕೆ ದಾರಿ ಮಾಡಲಿದೆ. ಇದರಿಂದ ರೈತರಿಗೆ ಬಹಳ ಉಪಯೋಗವಾಗಲಿದೆ ಎಂದು ಹೇಳಿದರು.

ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರಕಾರ ರೈತ ಪರ ನಿಲುವು:

ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರಕಾರ ರೈತ ಪರ ನಿಲುವನ್ನು ತೆಗೆದುಕೊಂಡಿದೆ. ರಾಜ್ಯ ಸರಕಾರ ತನ್ನ ವ್ಯಾಪ್ತಿಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಈ ನಿಟ್ಟಿನಲ್ಲಿ ದೆಹಲಿಯಲ್ಲೂ ಸಭೆ ನಡೆಸಿದ್ದಾರೆ. ಸರ್ವಪಕ್ಷಗಳ ಭೇಟಿಗೆ ಪ್ರಧಾನಿ ನರೇಂದ್ರ ಮೋದಿಯವರ ಸಮಯವನ್ನು ಕೇಳಿದ್ದಾರೆ. ತಜ್ಞರು, ಹಿರಿಯ ಅಧಿಕಾರಿಗಳು ಮತ್ತು ಹಿರಿಯ ನ್ಯಾಯವಾದಿಗಳೊಂದಿಗೆ  ಸರ್ಕಾರ ನಿರಂತರವಾಗಿ ಸಂಪರ್ಕದಲ್ಲಿದೆ. ರಾಜ್ಯ ಸರಕಾರ ರೈತ ಪರ ನಿಲುವನ್ನು ತಗೆದುಕೊಳ್ಳುವಲ್ಲಿ ವಿಫಲವಾಗಿದೆ ಎನ್ನುವ ಆರೋಪ ಸತ್ಯಕ್ಕೆ ದೂರ. ರಾಜ್ಯ ಸರಕಾರ ರೈತರ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದರು.

Ramesh Babu

Journalist

Recent Posts

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

26 minutes ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

50 minutes ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

8 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

19 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago