ಸೆ. 30 ರ ಒಳಗಾಗಿ ಹೊಸಕೋಟೆ ಮೊದಲ ಹಂತದ ಏತ ನೀರಾವರಿ ಯೋಜನೆ ಪ್ರಾರಂಭಿಸಲು ಅಗತ್ಯ ಕ್ರಮ: ಸಚಿವ ಎನ್.ಎಸ್ ಭೋಸರಾಜು ಸೂಚನೆ

ಹೊಸಕೋಟೆಯ 38 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಸೆಪ್ಟೆಂಬರ್ 30 ರ ಒಳಗಾಗಿ ಮೊದಲ ಹಂತದ (FIRST PHASE) ಕಾಮಗಾರಿ ಪೂರೈಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್ ಭೋಸರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ಹೊಸಕೋಟೆಯ ರಾಷ್ಟ್ರೀಯ ಹೆದ್ದಾರಿ 75 ರ ಪಕ್ಕದಲ್ಲಿ ಸಾಗುವ ಎರಡು ಕಿಲೋಮೀಟರ್ ಪೈಪ್ ಲೈನ್ ಮತ್ತು ಎಲೆ ಮಲ್ಲಪ್ಪ ಶೆಟ್ಟಿ ಕೆರೆ ನೀರು ಸಂಸ್ಕರಣಾ ಘಟಕಕ್ಕೆ ಶಾಸಕ ಶರತ್ ಬಚ್ಚೇಗೌಡ ಅವರೊಂದಿಗೆ ಭೇಟಿ ನೀಡಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.

ನಂತರ ಮಾತನಾಡಿದ ಅವರು, 38 ಕೆರೆಗಳಿಗೆ ಶೀಘ್ರದಲ್ಲೇ ಸಂಸ್ಕರಿಸಿದ ನೀರು ತುಂಬಿಸುವ ಕಾರ್ಯವನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಅಗತ್ಯ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಕಾಮಗಾರಿ ಅಂತಿಮ ಹಂತದಲ್ಲಿದ್ದು, ಬಾಕಿ ಇರುವ ಕಾಮಗಾರಿಗಳನ್ನ ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಎರಡನೇ ಹಂತದ ಸಂಸ್ಕರಿಸಿದ ನೀರು ಜಿಲ್ಲೆಯಲ್ಲಿ ಅಂತರ್ಜಲ ಹೆಚ್ಚಳಕ್ಕೆ ದಾರಿ ಮಾಡಲಿದೆ. ಇದರಿಂದ ರೈತರಿಗೆ ಬಹಳ ಉಪಯೋಗವಾಗಲಿದೆ ಎಂದು ಹೇಳಿದರು.

ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರಕಾರ ರೈತ ಪರ ನಿಲುವು:

ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರಕಾರ ರೈತ ಪರ ನಿಲುವನ್ನು ತೆಗೆದುಕೊಂಡಿದೆ. ರಾಜ್ಯ ಸರಕಾರ ತನ್ನ ವ್ಯಾಪ್ತಿಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಈ ನಿಟ್ಟಿನಲ್ಲಿ ದೆಹಲಿಯಲ್ಲೂ ಸಭೆ ನಡೆಸಿದ್ದಾರೆ. ಸರ್ವಪಕ್ಷಗಳ ಭೇಟಿಗೆ ಪ್ರಧಾನಿ ನರೇಂದ್ರ ಮೋದಿಯವರ ಸಮಯವನ್ನು ಕೇಳಿದ್ದಾರೆ. ತಜ್ಞರು, ಹಿರಿಯ ಅಧಿಕಾರಿಗಳು ಮತ್ತು ಹಿರಿಯ ನ್ಯಾಯವಾದಿಗಳೊಂದಿಗೆ  ಸರ್ಕಾರ ನಿರಂತರವಾಗಿ ಸಂಪರ್ಕದಲ್ಲಿದೆ. ರಾಜ್ಯ ಸರಕಾರ ರೈತ ಪರ ನಿಲುವನ್ನು ತಗೆದುಕೊಳ್ಳುವಲ್ಲಿ ವಿಫಲವಾಗಿದೆ ಎನ್ನುವ ಆರೋಪ ಸತ್ಯಕ್ಕೆ ದೂರ. ರಾಜ್ಯ ಸರಕಾರ ರೈತರ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದರು.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

7 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

9 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

9 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

10 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

14 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

15 hours ago