ಸೆ.7ರಂದು (ಭಾನುವಾರ) ಚಂದ್ರಗ್ರಹಣ: ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯ ಸಂಜೆ 4:30 ಗಂಟೆಗೆ ಬಂದ್

ಸೆಪ್ಟಂಬರ್ 7 ರಂದು ಭಾನುವಾರ ಮಧ್ಯರಾತ್ರಿ ಚಂದ್ರಗ್ರಹಣ ಗೋಚರಿಸಲಿರುವ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯವನ್ನ ಸಂಜೆ 4:30 ಗಂಟೆಗೆ ಬಂದ್‌ ಮಾಡಲಾಗುತ್ತಿದೆ.

ಪ್ರತಿ ದಿನವೂ ರಾತ್ರಿ 8:30ಕ್ಕೆ ಕ್ಲೋಸ್ ಮಾಡಲಾಗುತ್ತಿದ್ದ ದೇವಾಲಯದ ಬಾಗಿಲನ್ನ ಗ್ರಹಣದ ಅಂಗವಾಗಿ ಸಂಜೆ 4:30ಕ್ಕೆ ಮುಚ್ಚಲಾಗುತ್ತದೆ. ಇನ್ನೂ ಗ್ರಹಣದ ನಂತರ ಎಂದಿನಂತೆ ಮರುದಿನ ಬೆಳಿಗ್ಗೆ ಶುದ್ಧೀಕರಣ ಮಾಡಿ ಬಳಿಕ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಹೀಗಾಗಿ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

ಸುದೀರ್ಘ ಅವಧಿಯ ಅಪರೂಪದ ಚಂದ್ರಗ್ರಹಣ ಭಾರತದಾದ್ಯಂತ ಗೋಚರಿಸಲಿದೆ. ಸೆ.7 ಮತ್ತು 8 ರಂದು ಚಂದ್ರಗ್ರಹಣ ಸಂಭವಿಸಲಿದೆ.

ಸೆ.7ರ ರಾತ್ರಿ 9:57ರ ರಾತ್ರಿ ಸ್ಪರ್ಶಕಾಲ ಹಾಗೂ ಸೆ.8ರ ಮಧ್ಯರಾತ್ರಿ 1:26ಕ್ಕೆ ಮೋಕ್ಷಕಾಲ ಸಂಭವಿಸಲಿದೆ. ಚಂದ್ರಗ್ರಹಣದ ಪೂರ್ಣ ಪ್ರಭಾವದ ಆರಂಭವು ಮಧ್ಯರಾತ್ರಿ 12:28 ರಿಂದ 1:56ರ ವರೆಗೆ ಇರಲಿದೆ. ಸುದೀರ್ಘ ಅವಧಿ ಅಂದರೆ ಮೂರು ಗಂಟೆಗಳ ಕಾಲ ಸಂಭವಿಸಲಿದೆ. ಭಾರತದಲ್ಲಿ ಎಲ್ಲೆಡೆ ಗ್ರಹಣ ಗೋಚರವಾಗಲಿದೆ. ರಕ್ತವರ್ಣದಲ್ಲಿ ಚಂದಿರ ಗೋಚರಿಸಲಿದ್ದಾನೆ.

ಇದು ಪೂರ್ಣ ಚಂದ್ರಗ್ರಹಣ. ಇಡೀ ಚಂದ್ರ ಭೂಮಿಯ ದಟ್ಟವಾದ ನೆರಳನ್ನು ಪ್ರವೇಶಿಸುತ್ತದೆ. ಇದೊಂದು ಅಪರೂಪದ ವಿದ್ಯಮಾನ. ಖಗೋಳ ವಿಸ್ಮಯ ಎಂದು ನೆಹರೂ ತಾರಾಲಯದ ನಿರ್ದೇಶಕರು ತಿಳಿಸಿದ್ದಾರೆ.

Ramesh Babu

Journalist

Recent Posts

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

29 minutes ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

10 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

11 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

13 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

15 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

17 hours ago