ಸೆ.7ರಂದು (ಭಾನುವಾರ) ಚಂದ್ರಗ್ರಹಣ: ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯ ಸಂಜೆ 4:30 ಗಂಟೆಗೆ ಬಂದ್

ಸೆಪ್ಟಂಬರ್ 7 ರಂದು ಭಾನುವಾರ ಮಧ್ಯರಾತ್ರಿ ಚಂದ್ರಗ್ರಹಣ ಗೋಚರಿಸಲಿರುವ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯವನ್ನ ಸಂಜೆ 4:30 ಗಂಟೆಗೆ ಬಂದ್‌ ಮಾಡಲಾಗುತ್ತಿದೆ.

ಪ್ರತಿ ದಿನವೂ ರಾತ್ರಿ 8:30ಕ್ಕೆ ಕ್ಲೋಸ್ ಮಾಡಲಾಗುತ್ತಿದ್ದ ದೇವಾಲಯದ ಬಾಗಿಲನ್ನ ಗ್ರಹಣದ ಅಂಗವಾಗಿ ಸಂಜೆ 4:30ಕ್ಕೆ ಮುಚ್ಚಲಾಗುತ್ತದೆ. ಇನ್ನೂ ಗ್ರಹಣದ ನಂತರ ಎಂದಿನಂತೆ ಮರುದಿನ ಬೆಳಿಗ್ಗೆ ಶುದ್ಧೀಕರಣ ಮಾಡಿ ಬಳಿಕ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಹೀಗಾಗಿ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

ಸುದೀರ್ಘ ಅವಧಿಯ ಅಪರೂಪದ ಚಂದ್ರಗ್ರಹಣ ಭಾರತದಾದ್ಯಂತ ಗೋಚರಿಸಲಿದೆ. ಸೆ.7 ಮತ್ತು 8 ರಂದು ಚಂದ್ರಗ್ರಹಣ ಸಂಭವಿಸಲಿದೆ.

ಸೆ.7ರ ರಾತ್ರಿ 9:57ರ ರಾತ್ರಿ ಸ್ಪರ್ಶಕಾಲ ಹಾಗೂ ಸೆ.8ರ ಮಧ್ಯರಾತ್ರಿ 1:26ಕ್ಕೆ ಮೋಕ್ಷಕಾಲ ಸಂಭವಿಸಲಿದೆ. ಚಂದ್ರಗ್ರಹಣದ ಪೂರ್ಣ ಪ್ರಭಾವದ ಆರಂಭವು ಮಧ್ಯರಾತ್ರಿ 12:28 ರಿಂದ 1:56ರ ವರೆಗೆ ಇರಲಿದೆ. ಸುದೀರ್ಘ ಅವಧಿ ಅಂದರೆ ಮೂರು ಗಂಟೆಗಳ ಕಾಲ ಸಂಭವಿಸಲಿದೆ. ಭಾರತದಲ್ಲಿ ಎಲ್ಲೆಡೆ ಗ್ರಹಣ ಗೋಚರವಾಗಲಿದೆ. ರಕ್ತವರ್ಣದಲ್ಲಿ ಚಂದಿರ ಗೋಚರಿಸಲಿದ್ದಾನೆ.

ಇದು ಪೂರ್ಣ ಚಂದ್ರಗ್ರಹಣ. ಇಡೀ ಚಂದ್ರ ಭೂಮಿಯ ದಟ್ಟವಾದ ನೆರಳನ್ನು ಪ್ರವೇಶಿಸುತ್ತದೆ. ಇದೊಂದು ಅಪರೂಪದ ವಿದ್ಯಮಾನ. ಖಗೋಳ ವಿಸ್ಮಯ ಎಂದು ನೆಹರೂ ತಾರಾಲಯದ ನಿರ್ದೇಶಕರು ತಿಳಿಸಿದ್ದಾರೆ.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

17 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

3 days ago