ಸೆಪ್ಟಂಬರ್ 7 ರಂದು ಭಾನುವಾರ ಮಧ್ಯರಾತ್ರಿ ಚಂದ್ರಗ್ರಹಣ ಗೋಚರಿಸಲಿರುವ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯವನ್ನ ಸಂಜೆ 4:30 ಗಂಟೆಗೆ ಬಂದ್ ಮಾಡಲಾಗುತ್ತಿದೆ.
ಪ್ರತಿ ದಿನವೂ ರಾತ್ರಿ 8:30ಕ್ಕೆ ಕ್ಲೋಸ್ ಮಾಡಲಾಗುತ್ತಿದ್ದ ದೇವಾಲಯದ ಬಾಗಿಲನ್ನ ಗ್ರಹಣದ ಅಂಗವಾಗಿ ಸಂಜೆ 4:30ಕ್ಕೆ ಮುಚ್ಚಲಾಗುತ್ತದೆ. ಇನ್ನೂ ಗ್ರಹಣದ ನಂತರ ಎಂದಿನಂತೆ ಮರುದಿನ ಬೆಳಿಗ್ಗೆ ಶುದ್ಧೀಕರಣ ಮಾಡಿ ಬಳಿಕ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಹೀಗಾಗಿ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.
ಸುದೀರ್ಘ ಅವಧಿಯ ಅಪರೂಪದ ಚಂದ್ರಗ್ರಹಣ ಭಾರತದಾದ್ಯಂತ ಗೋಚರಿಸಲಿದೆ. ಸೆ.7 ಮತ್ತು 8 ರಂದು ಚಂದ್ರಗ್ರಹಣ ಸಂಭವಿಸಲಿದೆ.
ಸೆ.7ರ ರಾತ್ರಿ 9:57ರ ರಾತ್ರಿ ಸ್ಪರ್ಶಕಾಲ ಹಾಗೂ ಸೆ.8ರ ಮಧ್ಯರಾತ್ರಿ 1:26ಕ್ಕೆ ಮೋಕ್ಷಕಾಲ ಸಂಭವಿಸಲಿದೆ. ಚಂದ್ರಗ್ರಹಣದ ಪೂರ್ಣ ಪ್ರಭಾವದ ಆರಂಭವು ಮಧ್ಯರಾತ್ರಿ 12:28 ರಿಂದ 1:56ರ ವರೆಗೆ ಇರಲಿದೆ. ಸುದೀರ್ಘ ಅವಧಿ ಅಂದರೆ ಮೂರು ಗಂಟೆಗಳ ಕಾಲ ಸಂಭವಿಸಲಿದೆ. ಭಾರತದಲ್ಲಿ ಎಲ್ಲೆಡೆ ಗ್ರಹಣ ಗೋಚರವಾಗಲಿದೆ. ರಕ್ತವರ್ಣದಲ್ಲಿ ಚಂದಿರ ಗೋಚರಿಸಲಿದ್ದಾನೆ.
ಇದು ಪೂರ್ಣ ಚಂದ್ರಗ್ರಹಣ. ಇಡೀ ಚಂದ್ರ ಭೂಮಿಯ ದಟ್ಟವಾದ ನೆರಳನ್ನು ಪ್ರವೇಶಿಸುತ್ತದೆ. ಇದೊಂದು ಅಪರೂಪದ ವಿದ್ಯಮಾನ. ಖಗೋಳ ವಿಸ್ಮಯ ಎಂದು ನೆಹರೂ ತಾರಾಲಯದ ನಿರ್ದೇಶಕರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…