ಸೆ.7ರಂದು (ಭಾನುವಾರ) ಚಂದ್ರಗ್ರಹಣ: ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯ ಸಂಜೆ 4:30 ಗಂಟೆಗೆ ಬಂದ್

ಸೆಪ್ಟಂಬರ್ 7 ರಂದು ಭಾನುವಾರ ಮಧ್ಯರಾತ್ರಿ ಚಂದ್ರಗ್ರಹಣ ಗೋಚರಿಸಲಿರುವ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯವನ್ನ ಸಂಜೆ 4:30 ಗಂಟೆಗೆ ಬಂದ್‌ ಮಾಡಲಾಗುತ್ತಿದೆ.

ಪ್ರತಿ ದಿನವೂ ರಾತ್ರಿ 8:30ಕ್ಕೆ ಕ್ಲೋಸ್ ಮಾಡಲಾಗುತ್ತಿದ್ದ ದೇವಾಲಯದ ಬಾಗಿಲನ್ನ ಗ್ರಹಣದ ಅಂಗವಾಗಿ ಸಂಜೆ 4:30ಕ್ಕೆ ಮುಚ್ಚಲಾಗುತ್ತದೆ. ಇನ್ನೂ ಗ್ರಹಣದ ನಂತರ ಎಂದಿನಂತೆ ಮರುದಿನ ಬೆಳಿಗ್ಗೆ ಶುದ್ಧೀಕರಣ ಮಾಡಿ ಬಳಿಕ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಹೀಗಾಗಿ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

ಸುದೀರ್ಘ ಅವಧಿಯ ಅಪರೂಪದ ಚಂದ್ರಗ್ರಹಣ ಭಾರತದಾದ್ಯಂತ ಗೋಚರಿಸಲಿದೆ. ಸೆ.7 ಮತ್ತು 8 ರಂದು ಚಂದ್ರಗ್ರಹಣ ಸಂಭವಿಸಲಿದೆ.

ಸೆ.7ರ ರಾತ್ರಿ 9:57ರ ರಾತ್ರಿ ಸ್ಪರ್ಶಕಾಲ ಹಾಗೂ ಸೆ.8ರ ಮಧ್ಯರಾತ್ರಿ 1:26ಕ್ಕೆ ಮೋಕ್ಷಕಾಲ ಸಂಭವಿಸಲಿದೆ. ಚಂದ್ರಗ್ರಹಣದ ಪೂರ್ಣ ಪ್ರಭಾವದ ಆರಂಭವು ಮಧ್ಯರಾತ್ರಿ 12:28 ರಿಂದ 1:56ರ ವರೆಗೆ ಇರಲಿದೆ. ಸುದೀರ್ಘ ಅವಧಿ ಅಂದರೆ ಮೂರು ಗಂಟೆಗಳ ಕಾಲ ಸಂಭವಿಸಲಿದೆ. ಭಾರತದಲ್ಲಿ ಎಲ್ಲೆಡೆ ಗ್ರಹಣ ಗೋಚರವಾಗಲಿದೆ. ರಕ್ತವರ್ಣದಲ್ಲಿ ಚಂದಿರ ಗೋಚರಿಸಲಿದ್ದಾನೆ.

ಇದು ಪೂರ್ಣ ಚಂದ್ರಗ್ರಹಣ. ಇಡೀ ಚಂದ್ರ ಭೂಮಿಯ ದಟ್ಟವಾದ ನೆರಳನ್ನು ಪ್ರವೇಶಿಸುತ್ತದೆ. ಇದೊಂದು ಅಪರೂಪದ ವಿದ್ಯಮಾನ. ಖಗೋಳ ವಿಸ್ಮಯ ಎಂದು ನೆಹರೂ ತಾರಾಲಯದ ನಿರ್ದೇಶಕರು ತಿಳಿಸಿದ್ದಾರೆ.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

14 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

15 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

21 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

1 day ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

1 day ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

1 day ago