ಸೆ.8ಕ್ಕೆ 57ನೇ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ:ಅಗತ್ಯ ಸಿದ್ಧತೆ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್

ಸೆಪ್ಟೆಂಬರ್ 8ರಂದು 57ನೇ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಅಮರೇಶ್. ಹೆಚ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ಸಾಕ್ಷರತಾ ದಿನಾಚರಣೆಯನ್ನು ಆಚರಿಸುವ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

57ನೇ ಜಿಲ್ಲಾ ಮಟ್ಟದ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ಕೆ.ಪಿ.ಎಸ್.ಸಿ ವಿಶ್ವನಾಥಪುರ ಶಾಲೆಯಲ್ಲಿ ಆಚರಿಸಲು ಕ್ರಮ ವಹಿಸಿ, ಸಾಕ್ಷರತಾ ಜಾಥಾ ಮತ್ತು ಸಾಕ್ಷರತಾ ಧ್ವಜಾರೋಹಣ ಮತ್ತು ವೇದಿಕೆ ಕಾರ್ಯಕ್ರಮಗಳಿಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯವರಿಗೆ ಸೂಚಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಡಯಟ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುವಜನ ಕ್ರೀಡೆ, ವಾರ್ತಾ ಮತ್ತು ಪ್ರಚಾರ ಇಲಾಖೆ, ಕೃಷಿ ಇಲಾಖೆ, ನಗರಾಭಿವೃದ್ಧಿ ಕೋಶ ಹಾಗೂ ಇತರೆ ಎಲ್ಲಾ ಜಿಲ್ಲಾ ಮಟ್ಟದ ಇಲಾಖಾ ಅಧಿಕಾರಿಗಳ ಸಮನ್ವಯತೆ ಹಾಗೂ ಸಹಕಾರ ಕಾರ್ಯಕ್ರಮ ಯಶಸ್ವಿಗೆ ಕ್ರಮ ವಹಿಸಿ ಎಂದರು.

ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ತಾಲ್ಲೂಕು ಮಟ್ಟದಲ್ಲಿ, ಗ್ರಾಮ ಪಂಚಾಯತಿ ಹಂತದಲ್ಲಿ ಆಚರಿಸಲು ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಮೂಲಕ ನಿರ್ದೇಶಿಸುವಂತೆ ತಿಳಿಸಿದರು.

ಶಾಲಾ ಹಂತದಲ್ಲಿ ಆಚರಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರು ಜಿಲ್ಲೆಯ ಎಲ್ಲಾ ಶಾಲೆಗಳ ಮುಖ್ಯಸ್ಥರಿಗೆ ಸೂಚಿಸಲು ಹೇಳಿದರು.

ತಾಲ್ಲೂಕು ಹಾಗೂ ಗ್ರಾಮ ಪಂಚಾಯತಿ ಹಂತಗಳಲ್ಲಿ ಸಾಮಾಜಿಕ ಚೇತನ ಕೇಂದ್ರಗಳನ್ನು ಸೆಪ್ಟೆಂಬರ್ 8ರಂದು ಸ್ಥಾಪಿಸಲು ಕ್ರಮವಹಿಸಿ, ಪ್ರತಿ ಶಾಲೆಯಲ್ಲಿಯು ಸಮುದಾಯ ಸಂಚಲನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಕ್ತ ನಿರ್ದೇಶನ ನೀಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಲಾಯಿತು.

ಸಭೆಯಲ್ಲಿ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಶಶಿಕುಮಾರ್ ಎನ್.ಎಲ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

8 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

21 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

1 day ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

1 day ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago