ಸೇನಾ ಪಡೆಗೆ ನೀಡುವ ಸೌಲಭ್ಯ ಅರೆಸೇನಾ ಪಡೆಗೂ ಒದಗಿಸಿ- ರಾಜ್ಯಾಧ್ಯಕ್ಷ ನರಸಿಂಹ ರೆಡ್ಡಿ ಎಂ.ಪಿ

ಸಿ ಆರ್ ಪಿ ಎಫ್ ಸಂಘ ಸ್ಥಾಪನೆಯ ಮುಖ್ಯ ಉದ್ದೇಶ ಅರೆಸೇನಾ ಪಡೆಗಳ ಹಿತರಕ್ಷಣೆ ಕಾಪಾಡುವ ಉದ್ದೇಶ ಆಗಿದೆ. ನಮ್ಮಲ್ಲಿ 1700ಕ್ಕಿಂತಲೂ ಅಧಿಕ ನಿವೃತ್ತಿ ಹೊಂದಿರುವ ಸಿಬ್ಬಂದಿ ಇದ್ದು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ನಮ್ಮ ನ್ಯಾಯಕ್ಕಾಗಿ ಈ ಸಂಘಟನೆ ರೂಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಅರೆಸೇನಾ ಪಡೆಗಳ ಮಾಜಿ ಯೋಧರ ಕ್ಷೇಮಾಭಿವೃದ್ಧಿ ಸಂಘ ರಾಜ್ಯಾಧ್ಯಕ್ಷ ನರಸಿಂಹ ರೆಡ್ಡಿ ಎಂ.ಪಿ ತಿಳಿಸಿದರು.

ಕರ್ನಾಟಕ ರಾಜ್ಯ ಅರೆಸೇನಾ ಪಡೆಗಳ ಮಾಜಿ ಯೋಧರ ಕ್ಷೇಮಾಭಿವೃದ್ಧಿ ಸಂಘ ರಾಜ್ಯ ಕೇಂದ್ರ ಕಚೇರಿಯಲ್ಲಿ ಇಂದು ಸಂಘದ  ರಾಜ್ಯ ಸಮಿತಿ ಸಭೆಯನ್ನು  ಆಯೋಜಿಸಿ ಮಾತನಾಡಿದ ಅವರು, ದೇಶಕ್ಕೆ ಸೇನಾ ಪಡೆಗಳು ಹೇಗೆ ಸೇವೆ ಸಲ್ಲಿಸುತ್ತಿವಿಯೋ ಅದೇರೀತಿ ಅರೆಸೇನೇ ಪಡೆಗಳು ಸಹ ಅಷ್ಟೇ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತಿವೆ. ಆದ್ದರಿಂದ ಸೇನಾ ಪಡೆಗಳಿಗೆ ಸಿಗುವ ಸೌಲಭ್ಯ ನಮಗೂ ಸಿಗಬೇಕು‌ ಎಂದು ಒತ್ತಾಯಿಸಿದರು.

ನಂತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಗೋಪಾಲ್ ಮಾತನಾಡಿ, ದೇಶ ಸೇವೆಯಲ್ಲಿ ನಮ್ಮ ಅರೆಸೇನಾ ಪಡೆಗಳು ಸೇನಾಪಡೆಗಳಂತೆ ಶ್ರಮಿಸುತ್ತೇವೆ ಆದರೆ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಈ ತಾರತಮ್ಯವೇಕೆ. ನಮ್ಮನ್ನು ಸೇನಾ ಪಡೆಗಳಂತೆ ಪರಿಗಣಿಸಿ ಸರ್ಕಾರಿ ಸೌಲಭ್ಯಗಳನ್ನು ಕಲ್ಪಿಸಿ ಎಂದು ಆಗ್ರಹಿಸಿದರು.

ಸಂಘದ ರಾಜ್ಯ ಗೌರವಾಧ್ಯಕ್ಷರಾದ ಮಾಜಿ ಐಜಿ ಅರ್ಕೇಶ್ ಮಾತನಾಡಿ, ಸರ್ಕಾರಗಳು ಅರೆಸೇನಾ ಪಡೆಗಳ ಕಾರ್ಯ ವೈಖರಿ ಹಾಗೂ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ಶ್ರಮವನ್ನು ಗುರುತಿಸಿ ಸೇನಾಪಡೆಗಳಿಗೆ ನೀಡುತ್ತಿರುವ ಸೌಲಭ್ಯಗಳನ್ನು ನಮಗೂ ಕಲ್ಪಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಸಂಘದ ರಾಜ್ಯ ಸಮಿತಿಯ ಪದಾಧಿಕಾರಿಗಳು, ಹಲವು ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

5 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

5 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

6 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

7 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

10 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

10 hours ago