ಸಿ ಆರ್ ಪಿ ಎಫ್ ಸಂಘ ಸ್ಥಾಪನೆಯ ಮುಖ್ಯ ಉದ್ದೇಶ ಅರೆಸೇನಾ ಪಡೆಗಳ ಹಿತರಕ್ಷಣೆ ಕಾಪಾಡುವ ಉದ್ದೇಶ ಆಗಿದೆ. ನಮ್ಮಲ್ಲಿ 1700ಕ್ಕಿಂತಲೂ ಅಧಿಕ ನಿವೃತ್ತಿ ಹೊಂದಿರುವ ಸಿಬ್ಬಂದಿ ಇದ್ದು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ನಮ್ಮ ನ್ಯಾಯಕ್ಕಾಗಿ ಈ ಸಂಘಟನೆ ರೂಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಅರೆಸೇನಾ ಪಡೆಗಳ ಮಾಜಿ ಯೋಧರ ಕ್ಷೇಮಾಭಿವೃದ್ಧಿ ಸಂಘ ರಾಜ್ಯಾಧ್ಯಕ್ಷ ನರಸಿಂಹ ರೆಡ್ಡಿ ಎಂ.ಪಿ ತಿಳಿಸಿದರು.
ಕರ್ನಾಟಕ ರಾಜ್ಯ ಅರೆಸೇನಾ ಪಡೆಗಳ ಮಾಜಿ ಯೋಧರ ಕ್ಷೇಮಾಭಿವೃದ್ಧಿ ಸಂಘ ರಾಜ್ಯ ಕೇಂದ್ರ ಕಚೇರಿಯಲ್ಲಿ ಇಂದು ಸಂಘದ ರಾಜ್ಯ ಸಮಿತಿ ಸಭೆಯನ್ನು ಆಯೋಜಿಸಿ ಮಾತನಾಡಿದ ಅವರು, ದೇಶಕ್ಕೆ ಸೇನಾ ಪಡೆಗಳು ಹೇಗೆ ಸೇವೆ ಸಲ್ಲಿಸುತ್ತಿವಿಯೋ ಅದೇರೀತಿ ಅರೆಸೇನೇ ಪಡೆಗಳು ಸಹ ಅಷ್ಟೇ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತಿವೆ. ಆದ್ದರಿಂದ ಸೇನಾ ಪಡೆಗಳಿಗೆ ಸಿಗುವ ಸೌಲಭ್ಯ ನಮಗೂ ಸಿಗಬೇಕು ಎಂದು ಒತ್ತಾಯಿಸಿದರು.
ನಂತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಗೋಪಾಲ್ ಮಾತನಾಡಿ, ದೇಶ ಸೇವೆಯಲ್ಲಿ ನಮ್ಮ ಅರೆಸೇನಾ ಪಡೆಗಳು ಸೇನಾಪಡೆಗಳಂತೆ ಶ್ರಮಿಸುತ್ತೇವೆ ಆದರೆ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಈ ತಾರತಮ್ಯವೇಕೆ. ನಮ್ಮನ್ನು ಸೇನಾ ಪಡೆಗಳಂತೆ ಪರಿಗಣಿಸಿ ಸರ್ಕಾರಿ ಸೌಲಭ್ಯಗಳನ್ನು ಕಲ್ಪಿಸಿ ಎಂದು ಆಗ್ರಹಿಸಿದರು.
ಸಂಘದ ರಾಜ್ಯ ಗೌರವಾಧ್ಯಕ್ಷರಾದ ಮಾಜಿ ಐಜಿ ಅರ್ಕೇಶ್ ಮಾತನಾಡಿ, ಸರ್ಕಾರಗಳು ಅರೆಸೇನಾ ಪಡೆಗಳ ಕಾರ್ಯ ವೈಖರಿ ಹಾಗೂ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ಶ್ರಮವನ್ನು ಗುರುತಿಸಿ ಸೇನಾಪಡೆಗಳಿಗೆ ನೀಡುತ್ತಿರುವ ಸೌಲಭ್ಯಗಳನ್ನು ನಮಗೂ ಕಲ್ಪಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಸಂಘದ ರಾಜ್ಯ ಸಮಿತಿಯ ಪದಾಧಿಕಾರಿಗಳು, ಹಲವು ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…