ಸಿ ಆರ್ ಪಿ ಎಫ್ ಸಂಘ ಸ್ಥಾಪನೆಯ ಮುಖ್ಯ ಉದ್ದೇಶ ಅರೆಸೇನಾ ಪಡೆಗಳ ಹಿತರಕ್ಷಣೆ ಕಾಪಾಡುವ ಉದ್ದೇಶ ಆಗಿದೆ. ನಮ್ಮಲ್ಲಿ 1700ಕ್ಕಿಂತಲೂ ಅಧಿಕ ನಿವೃತ್ತಿ ಹೊಂದಿರುವ ಸಿಬ್ಬಂದಿ ಇದ್ದು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ನಮ್ಮ ನ್ಯಾಯಕ್ಕಾಗಿ ಈ ಸಂಘಟನೆ ರೂಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಅರೆಸೇನಾ ಪಡೆಗಳ ಮಾಜಿ ಯೋಧರ ಕ್ಷೇಮಾಭಿವೃದ್ಧಿ ಸಂಘ ರಾಜ್ಯಾಧ್ಯಕ್ಷ ನರಸಿಂಹ ರೆಡ್ಡಿ ಎಂ.ಪಿ ತಿಳಿಸಿದರು.
ಕರ್ನಾಟಕ ರಾಜ್ಯ ಅರೆಸೇನಾ ಪಡೆಗಳ ಮಾಜಿ ಯೋಧರ ಕ್ಷೇಮಾಭಿವೃದ್ಧಿ ಸಂಘ ರಾಜ್ಯ ಕೇಂದ್ರ ಕಚೇರಿಯಲ್ಲಿ ಇಂದು ಸಂಘದ ರಾಜ್ಯ ಸಮಿತಿ ಸಭೆಯನ್ನು ಆಯೋಜಿಸಿ ಮಾತನಾಡಿದ ಅವರು, ದೇಶಕ್ಕೆ ಸೇನಾ ಪಡೆಗಳು ಹೇಗೆ ಸೇವೆ ಸಲ್ಲಿಸುತ್ತಿವಿಯೋ ಅದೇರೀತಿ ಅರೆಸೇನೇ ಪಡೆಗಳು ಸಹ ಅಷ್ಟೇ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತಿವೆ. ಆದ್ದರಿಂದ ಸೇನಾ ಪಡೆಗಳಿಗೆ ಸಿಗುವ ಸೌಲಭ್ಯ ನಮಗೂ ಸಿಗಬೇಕು ಎಂದು ಒತ್ತಾಯಿಸಿದರು.
ನಂತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಗೋಪಾಲ್ ಮಾತನಾಡಿ, ದೇಶ ಸೇವೆಯಲ್ಲಿ ನಮ್ಮ ಅರೆಸೇನಾ ಪಡೆಗಳು ಸೇನಾಪಡೆಗಳಂತೆ ಶ್ರಮಿಸುತ್ತೇವೆ ಆದರೆ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಈ ತಾರತಮ್ಯವೇಕೆ. ನಮ್ಮನ್ನು ಸೇನಾ ಪಡೆಗಳಂತೆ ಪರಿಗಣಿಸಿ ಸರ್ಕಾರಿ ಸೌಲಭ್ಯಗಳನ್ನು ಕಲ್ಪಿಸಿ ಎಂದು ಆಗ್ರಹಿಸಿದರು.
ಸಂಘದ ರಾಜ್ಯ ಗೌರವಾಧ್ಯಕ್ಷರಾದ ಮಾಜಿ ಐಜಿ ಅರ್ಕೇಶ್ ಮಾತನಾಡಿ, ಸರ್ಕಾರಗಳು ಅರೆಸೇನಾ ಪಡೆಗಳ ಕಾರ್ಯ ವೈಖರಿ ಹಾಗೂ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ಶ್ರಮವನ್ನು ಗುರುತಿಸಿ ಸೇನಾಪಡೆಗಳಿಗೆ ನೀಡುತ್ತಿರುವ ಸೌಲಭ್ಯಗಳನ್ನು ನಮಗೂ ಕಲ್ಪಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಸಂಘದ ರಾಜ್ಯ ಸಮಿತಿಯ ಪದಾಧಿಕಾರಿಗಳು, ಹಲವು ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…