ಸೇವಾ ಮನೋಭಾವದಿಂದ ಬದಲಾವಣೆ ಸಂಕಲ್ಪ ಸಾಕಾರ-ಎನ್‌ಸಿಸಿ ಅಧಿಕಾರಿ ಪ್ರವೀಣ್

ದೊಡ್ಡಬಳ್ಳಾಪುರ: ಸೇವಾ ಮನೋಭಾವವನ್ನು ಎಲ್ಲ ಹಂತಗಳಲ್ಲಿ ರೂಢಿಸಿಕೊಂಡಾಗ ಮಾತ್ರ ರಾಷ್ಟ್ರೀಯ ಸೇವಾ ಯೋಜನೆಯ ನೈಜ ಉದ್ದೇಶಗಳು ಸಾಕಾರಗೊಳ್ಳುತ್ತವೆ ಎಂದು ಕೊಂಗಾಡಿಯಪ್ಪ ಕಾಲೇಜಿನ ಎನ್‌ಸಿಸಿ ಅಧಿಕಾರಿ ಲೆಫ್ಟಿನೆಂಟ್ ಪ್ರವೀಣ್‌ ಹೇಳಿದರು.

ತಾಲೂಕಿನ ತಳಗವಾರ ಗ್ರಾಮದಲ್ಲಿ ಶ್ರೀ ದೇವರಾಜ್‌ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ನಡೆಯುತ್ತಿರುವ ವಿಶೇಷ ಯುವಜನ ಸೇವಾ ಶಿಬಿರದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಷ್ಟ್ರೀಯ ಐಕ್ಯತೆಯನ್ನು ಪ್ರಧಾನ ಆದ್ಯತೆಯಾಗಿಟ್ಟುಕೊಂಡು, ಜಾತಿ, ಮತ, ಧರ್ಮಗಳನ್ನು ಮೀರಿದ ಮನುಷ್ಯತ್ವದ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸುವುದು ಎಲ್ಲರ ಕರ್ತವ್ಯವಾಗಬೇಕು. ಸೇವೆ ಎಂಬುದು ಕೇವಲ ನೆಪಮಾತ್ರಕ್ಕೆ ಸೀಮಿತವಾಗದೆ ಶ್ರೇಷ್ಠ ಮೌಲ್ಯಗಳನ್ನು ಒಳಗೊಂಡಿರಬೇಕು. ಬದಲಾವಣೆಯನ್ನು ಬಯಸುವವರು ಮೊದಲ ಬದಲಾಗುವ ಸಂಕಲ್ಪ ಮಾಡಬೇಕು. ಆಗ ಮಾತ್ರ ಪರಿಪೂರ್ಣ ಪ್ರಗತಿ ಸಾಧ್ಯವಾಗುತ್ತದೆ ಎಂದರು.

ಆರ್.ಎಲ್.ಜಾಲಪ್ಪ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ನರಸಿಂಹರೆಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಗ್ರಾಮೀಣ ಜನಜೀವನದ ಒಳಹುಗಳನ್ನು ಅರಿತು, ಸುಧಾರಣೆಯ ಮಹತ್ವವನ್ನು ತಿಳಿದುಕೊಳ್ಳಬೇಕು. ಸಾಮಾಜಿಕ ಬದಲಾವಣೆಯಿಂದ ಮಾತ್ರ ಪ್ರಗತಿಯ ವೇಗ ಹೆಚ್ಚುತ್ತದೆ. ಧನಾತ್ಮಕ ಆಲೋಚನೆಗಳು ವ್ಯಕ್ತಿತ್ವವನ್ನು ರೂಪಿಸುತ್ತವೆ ಎಂದರು.

ಐಕ್ಯೂಎಸಿ ಸಂಯೋಜಕ ಪ್ರೊ.ಕೆ.ಆರ್.ರವಿಕಿರಣ್, ಕನ್ನಡ ವಿಭಾಗ ಮುಖ್ಯಸ್ಥ ಡಾ.ಎಂ.ಚಿಕ್ಕಣ್ಣ, ನಿರ್ವಹಣಾ ವಿಭಾಗ ಮುಖ್ಯಸ್ಥೆ ಪಿ.ಚೈತ್ರ, ಉದ್ಯೋಗಾಧಿಕಾರಿ ಬಾಬುಸಾಬಿ, ಎನ್‌ಎಸ್‌ಎಸ್‌ ಸಹಾಯಕ ಅಧಿಕಾರಿಗಳಾದ ವೆಂಕಟೇಶ್, ಪೂಜಾ, ಉಪನ್ಯಾಸಕರಾದ ಭಾನುಶ್ರೀ, ಮಧುಶ್ರೀ, ರಮ್ಯಶ್ರೀ, ಸಂಧ್ಯಾ, ದೀಪಾ, ನಯನ ಮತ್ತಿತರರು ಉಪನ್ಯಾಸ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮಧುಮೇಹ ತಪಾಸಣೆ:

ಇದೇ ವೇಳೆ ಗ್ರಾಮೀಣ ಜನರಿಗಾಗಿ ದೊಡ್ಡಬಳ್ಳಾಪುರದ ಲಯನ್ಸ್‌ ಕ್ಲಬ್‌ ಆಫ್‌ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌, ಲಯನ್ಸ್‌ ಕ್ಲಬ್‌ ಆಫ್ ಆರ್ಯಭಟ ಸಹಯೋಗದಲ್ಲಿ ಮಧುಮೇಹ, ರಕ್ತದೊತ್ತಡ ತಪಾಸಣೆ ಶಿಬಿರ ನಡೆಯಿತು. 100ಕ್ಕೂ ಹೆಚ್ಚು ಜನರಿಗೆ ತಪಾಸಣೆ ನಡೆಸಿ ವೈದ್ಯಕೀಯ ಸಲಹೆ ನೀಡಲಾಯಿತು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

11 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

11 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

14 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

14 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

19 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

23 hours ago