ದೊಡ್ಡಬಳ್ಳಾಪುರ: ಸೇವಾ ಮನೋಭಾವವನ್ನು ಎಲ್ಲ ಹಂತಗಳಲ್ಲಿ ರೂಢಿಸಿಕೊಂಡಾಗ ಮಾತ್ರ ರಾಷ್ಟ್ರೀಯ ಸೇವಾ ಯೋಜನೆಯ ನೈಜ ಉದ್ದೇಶಗಳು ಸಾಕಾರಗೊಳ್ಳುತ್ತವೆ ಎಂದು ಕೊಂಗಾಡಿಯಪ್ಪ ಕಾಲೇಜಿನ ಎನ್ಸಿಸಿ ಅಧಿಕಾರಿ ಲೆಫ್ಟಿನೆಂಟ್ ಪ್ರವೀಣ್ ಹೇಳಿದರು.
ತಾಲೂಕಿನ ತಳಗವಾರ ಗ್ರಾಮದಲ್ಲಿ ಶ್ರೀ ದೇವರಾಜ್ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ನಡೆಯುತ್ತಿರುವ ವಿಶೇಷ ಯುವಜನ ಸೇವಾ ಶಿಬಿರದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಷ್ಟ್ರೀಯ ಐಕ್ಯತೆಯನ್ನು ಪ್ರಧಾನ ಆದ್ಯತೆಯಾಗಿಟ್ಟುಕೊಂಡು, ಜಾತಿ, ಮತ, ಧರ್ಮಗಳನ್ನು ಮೀರಿದ ಮನುಷ್ಯತ್ವದ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸುವುದು ಎಲ್ಲರ ಕರ್ತವ್ಯವಾಗಬೇಕು. ಸೇವೆ ಎಂಬುದು ಕೇವಲ ನೆಪಮಾತ್ರಕ್ಕೆ ಸೀಮಿತವಾಗದೆ ಶ್ರೇಷ್ಠ ಮೌಲ್ಯಗಳನ್ನು ಒಳಗೊಂಡಿರಬೇಕು. ಬದಲಾವಣೆಯನ್ನು ಬಯಸುವವರು ಮೊದಲ ಬದಲಾಗುವ ಸಂಕಲ್ಪ ಮಾಡಬೇಕು. ಆಗ ಮಾತ್ರ ಪರಿಪೂರ್ಣ ಪ್ರಗತಿ ಸಾಧ್ಯವಾಗುತ್ತದೆ ಎಂದರು.
ಆರ್.ಎಲ್.ಜಾಲಪ್ಪ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ನರಸಿಂಹರೆಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಗ್ರಾಮೀಣ ಜನಜೀವನದ ಒಳಹುಗಳನ್ನು ಅರಿತು, ಸುಧಾರಣೆಯ ಮಹತ್ವವನ್ನು ತಿಳಿದುಕೊಳ್ಳಬೇಕು. ಸಾಮಾಜಿಕ ಬದಲಾವಣೆಯಿಂದ ಮಾತ್ರ ಪ್ರಗತಿಯ ವೇಗ ಹೆಚ್ಚುತ್ತದೆ. ಧನಾತ್ಮಕ ಆಲೋಚನೆಗಳು ವ್ಯಕ್ತಿತ್ವವನ್ನು ರೂಪಿಸುತ್ತವೆ ಎಂದರು.
ಐಕ್ಯೂಎಸಿ ಸಂಯೋಜಕ ಪ್ರೊ.ಕೆ.ಆರ್.ರವಿಕಿರಣ್, ಕನ್ನಡ ವಿಭಾಗ ಮುಖ್ಯಸ್ಥ ಡಾ.ಎಂ.ಚಿಕ್ಕಣ್ಣ, ನಿರ್ವಹಣಾ ವಿಭಾಗ ಮುಖ್ಯಸ್ಥೆ ಪಿ.ಚೈತ್ರ, ಉದ್ಯೋಗಾಧಿಕಾರಿ ಬಾಬುಸಾಬಿ, ಎನ್ಎಸ್ಎಸ್ ಸಹಾಯಕ ಅಧಿಕಾರಿಗಳಾದ ವೆಂಕಟೇಶ್, ಪೂಜಾ, ಉಪನ್ಯಾಸಕರಾದ ಭಾನುಶ್ರೀ, ಮಧುಶ್ರೀ, ರಮ್ಯಶ್ರೀ, ಸಂಧ್ಯಾ, ದೀಪಾ, ನಯನ ಮತ್ತಿತರರು ಉಪನ್ಯಾಸ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮಧುಮೇಹ ತಪಾಸಣೆ:
ಇದೇ ವೇಳೆ ಗ್ರಾಮೀಣ ಜನರಿಗಾಗಿ ದೊಡ್ಡಬಳ್ಳಾಪುರದ ಲಯನ್ಸ್ ಕ್ಲಬ್ ಆಫ್ ಆರ್.ಎಲ್.ಜಾಲಪ್ಪ ಇನ್ಸ್ಟಿಟ್ಯೂಷನ್ಸ್, ಲಯನ್ಸ್ ಕ್ಲಬ್ ಆಫ್ ಆರ್ಯಭಟ ಸಹಯೋಗದಲ್ಲಿ ಮಧುಮೇಹ, ರಕ್ತದೊತ್ತಡ ತಪಾಸಣೆ ಶಿಬಿರ ನಡೆಯಿತು. 100ಕ್ಕೂ ಹೆಚ್ಚು ಜನರಿಗೆ ತಪಾಸಣೆ ನಡೆಸಿ ವೈದ್ಯಕೀಯ ಸಲಹೆ ನೀಡಲಾಯಿತು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…