ಸೇವಾ ಮನೋಭಾವದಿಂದ ಬದಲಾವಣೆ ಸಂಕಲ್ಪ ಸಾಕಾರ-ಎನ್‌ಸಿಸಿ ಅಧಿಕಾರಿ ಪ್ರವೀಣ್

ದೊಡ್ಡಬಳ್ಳಾಪುರ: ಸೇವಾ ಮನೋಭಾವವನ್ನು ಎಲ್ಲ ಹಂತಗಳಲ್ಲಿ ರೂಢಿಸಿಕೊಂಡಾಗ ಮಾತ್ರ ರಾಷ್ಟ್ರೀಯ ಸೇವಾ ಯೋಜನೆಯ ನೈಜ ಉದ್ದೇಶಗಳು ಸಾಕಾರಗೊಳ್ಳುತ್ತವೆ ಎಂದು ಕೊಂಗಾಡಿಯಪ್ಪ ಕಾಲೇಜಿನ ಎನ್‌ಸಿಸಿ ಅಧಿಕಾರಿ ಲೆಫ್ಟಿನೆಂಟ್ ಪ್ರವೀಣ್‌ ಹೇಳಿದರು.

ತಾಲೂಕಿನ ತಳಗವಾರ ಗ್ರಾಮದಲ್ಲಿ ಶ್ರೀ ದೇವರಾಜ್‌ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ನಡೆಯುತ್ತಿರುವ ವಿಶೇಷ ಯುವಜನ ಸೇವಾ ಶಿಬಿರದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಷ್ಟ್ರೀಯ ಐಕ್ಯತೆಯನ್ನು ಪ್ರಧಾನ ಆದ್ಯತೆಯಾಗಿಟ್ಟುಕೊಂಡು, ಜಾತಿ, ಮತ, ಧರ್ಮಗಳನ್ನು ಮೀರಿದ ಮನುಷ್ಯತ್ವದ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸುವುದು ಎಲ್ಲರ ಕರ್ತವ್ಯವಾಗಬೇಕು. ಸೇವೆ ಎಂಬುದು ಕೇವಲ ನೆಪಮಾತ್ರಕ್ಕೆ ಸೀಮಿತವಾಗದೆ ಶ್ರೇಷ್ಠ ಮೌಲ್ಯಗಳನ್ನು ಒಳಗೊಂಡಿರಬೇಕು. ಬದಲಾವಣೆಯನ್ನು ಬಯಸುವವರು ಮೊದಲ ಬದಲಾಗುವ ಸಂಕಲ್ಪ ಮಾಡಬೇಕು. ಆಗ ಮಾತ್ರ ಪರಿಪೂರ್ಣ ಪ್ರಗತಿ ಸಾಧ್ಯವಾಗುತ್ತದೆ ಎಂದರು.

ಆರ್.ಎಲ್.ಜಾಲಪ್ಪ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ನರಸಿಂಹರೆಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಗ್ರಾಮೀಣ ಜನಜೀವನದ ಒಳಹುಗಳನ್ನು ಅರಿತು, ಸುಧಾರಣೆಯ ಮಹತ್ವವನ್ನು ತಿಳಿದುಕೊಳ್ಳಬೇಕು. ಸಾಮಾಜಿಕ ಬದಲಾವಣೆಯಿಂದ ಮಾತ್ರ ಪ್ರಗತಿಯ ವೇಗ ಹೆಚ್ಚುತ್ತದೆ. ಧನಾತ್ಮಕ ಆಲೋಚನೆಗಳು ವ್ಯಕ್ತಿತ್ವವನ್ನು ರೂಪಿಸುತ್ತವೆ ಎಂದರು.

ಐಕ್ಯೂಎಸಿ ಸಂಯೋಜಕ ಪ್ರೊ.ಕೆ.ಆರ್.ರವಿಕಿರಣ್, ಕನ್ನಡ ವಿಭಾಗ ಮುಖ್ಯಸ್ಥ ಡಾ.ಎಂ.ಚಿಕ್ಕಣ್ಣ, ನಿರ್ವಹಣಾ ವಿಭಾಗ ಮುಖ್ಯಸ್ಥೆ ಪಿ.ಚೈತ್ರ, ಉದ್ಯೋಗಾಧಿಕಾರಿ ಬಾಬುಸಾಬಿ, ಎನ್‌ಎಸ್‌ಎಸ್‌ ಸಹಾಯಕ ಅಧಿಕಾರಿಗಳಾದ ವೆಂಕಟೇಶ್, ಪೂಜಾ, ಉಪನ್ಯಾಸಕರಾದ ಭಾನುಶ್ರೀ, ಮಧುಶ್ರೀ, ರಮ್ಯಶ್ರೀ, ಸಂಧ್ಯಾ, ದೀಪಾ, ನಯನ ಮತ್ತಿತರರು ಉಪನ್ಯಾಸ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮಧುಮೇಹ ತಪಾಸಣೆ:

ಇದೇ ವೇಳೆ ಗ್ರಾಮೀಣ ಜನರಿಗಾಗಿ ದೊಡ್ಡಬಳ್ಳಾಪುರದ ಲಯನ್ಸ್‌ ಕ್ಲಬ್‌ ಆಫ್‌ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌, ಲಯನ್ಸ್‌ ಕ್ಲಬ್‌ ಆಫ್ ಆರ್ಯಭಟ ಸಹಯೋಗದಲ್ಲಿ ಮಧುಮೇಹ, ರಕ್ತದೊತ್ತಡ ತಪಾಸಣೆ ಶಿಬಿರ ನಡೆಯಿತು. 100ಕ್ಕೂ ಹೆಚ್ಚು ಜನರಿಗೆ ತಪಾಸಣೆ ನಡೆಸಿ ವೈದ್ಯಕೀಯ ಸಲಹೆ ನೀಡಲಾಯಿತು.

Ramesh Babu

Journalist

Recent Posts

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

2 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

6 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

8 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

10 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

1 day ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

1 day ago