ಸೇವಾ ಮನೋಭಾವದಿಂದ ಬದಲಾವಣೆ ಸಂಕಲ್ಪ ಸಾಕಾರ-ಎನ್‌ಸಿಸಿ ಅಧಿಕಾರಿ ಪ್ರವೀಣ್

ದೊಡ್ಡಬಳ್ಳಾಪುರ: ಸೇವಾ ಮನೋಭಾವವನ್ನು ಎಲ್ಲ ಹಂತಗಳಲ್ಲಿ ರೂಢಿಸಿಕೊಂಡಾಗ ಮಾತ್ರ ರಾಷ್ಟ್ರೀಯ ಸೇವಾ ಯೋಜನೆಯ ನೈಜ ಉದ್ದೇಶಗಳು ಸಾಕಾರಗೊಳ್ಳುತ್ತವೆ ಎಂದು ಕೊಂಗಾಡಿಯಪ್ಪ ಕಾಲೇಜಿನ ಎನ್‌ಸಿಸಿ ಅಧಿಕಾರಿ ಲೆಫ್ಟಿನೆಂಟ್ ಪ್ರವೀಣ್‌ ಹೇಳಿದರು.

ತಾಲೂಕಿನ ತಳಗವಾರ ಗ್ರಾಮದಲ್ಲಿ ಶ್ರೀ ದೇವರಾಜ್‌ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ನಡೆಯುತ್ತಿರುವ ವಿಶೇಷ ಯುವಜನ ಸೇವಾ ಶಿಬಿರದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಷ್ಟ್ರೀಯ ಐಕ್ಯತೆಯನ್ನು ಪ್ರಧಾನ ಆದ್ಯತೆಯಾಗಿಟ್ಟುಕೊಂಡು, ಜಾತಿ, ಮತ, ಧರ್ಮಗಳನ್ನು ಮೀರಿದ ಮನುಷ್ಯತ್ವದ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸುವುದು ಎಲ್ಲರ ಕರ್ತವ್ಯವಾಗಬೇಕು. ಸೇವೆ ಎಂಬುದು ಕೇವಲ ನೆಪಮಾತ್ರಕ್ಕೆ ಸೀಮಿತವಾಗದೆ ಶ್ರೇಷ್ಠ ಮೌಲ್ಯಗಳನ್ನು ಒಳಗೊಂಡಿರಬೇಕು. ಬದಲಾವಣೆಯನ್ನು ಬಯಸುವವರು ಮೊದಲ ಬದಲಾಗುವ ಸಂಕಲ್ಪ ಮಾಡಬೇಕು. ಆಗ ಮಾತ್ರ ಪರಿಪೂರ್ಣ ಪ್ರಗತಿ ಸಾಧ್ಯವಾಗುತ್ತದೆ ಎಂದರು.

ಆರ್.ಎಲ್.ಜಾಲಪ್ಪ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ನರಸಿಂಹರೆಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಗ್ರಾಮೀಣ ಜನಜೀವನದ ಒಳಹುಗಳನ್ನು ಅರಿತು, ಸುಧಾರಣೆಯ ಮಹತ್ವವನ್ನು ತಿಳಿದುಕೊಳ್ಳಬೇಕು. ಸಾಮಾಜಿಕ ಬದಲಾವಣೆಯಿಂದ ಮಾತ್ರ ಪ್ರಗತಿಯ ವೇಗ ಹೆಚ್ಚುತ್ತದೆ. ಧನಾತ್ಮಕ ಆಲೋಚನೆಗಳು ವ್ಯಕ್ತಿತ್ವವನ್ನು ರೂಪಿಸುತ್ತವೆ ಎಂದರು.

ಐಕ್ಯೂಎಸಿ ಸಂಯೋಜಕ ಪ್ರೊ.ಕೆ.ಆರ್.ರವಿಕಿರಣ್, ಕನ್ನಡ ವಿಭಾಗ ಮುಖ್ಯಸ್ಥ ಡಾ.ಎಂ.ಚಿಕ್ಕಣ್ಣ, ನಿರ್ವಹಣಾ ವಿಭಾಗ ಮುಖ್ಯಸ್ಥೆ ಪಿ.ಚೈತ್ರ, ಉದ್ಯೋಗಾಧಿಕಾರಿ ಬಾಬುಸಾಬಿ, ಎನ್‌ಎಸ್‌ಎಸ್‌ ಸಹಾಯಕ ಅಧಿಕಾರಿಗಳಾದ ವೆಂಕಟೇಶ್, ಪೂಜಾ, ಉಪನ್ಯಾಸಕರಾದ ಭಾನುಶ್ರೀ, ಮಧುಶ್ರೀ, ರಮ್ಯಶ್ರೀ, ಸಂಧ್ಯಾ, ದೀಪಾ, ನಯನ ಮತ್ತಿತರರು ಉಪನ್ಯಾಸ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮಧುಮೇಹ ತಪಾಸಣೆ:

ಇದೇ ವೇಳೆ ಗ್ರಾಮೀಣ ಜನರಿಗಾಗಿ ದೊಡ್ಡಬಳ್ಳಾಪುರದ ಲಯನ್ಸ್‌ ಕ್ಲಬ್‌ ಆಫ್‌ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌, ಲಯನ್ಸ್‌ ಕ್ಲಬ್‌ ಆಫ್ ಆರ್ಯಭಟ ಸಹಯೋಗದಲ್ಲಿ ಮಧುಮೇಹ, ರಕ್ತದೊತ್ತಡ ತಪಾಸಣೆ ಶಿಬಿರ ನಡೆಯಿತು. 100ಕ್ಕೂ ಹೆಚ್ಚು ಜನರಿಗೆ ತಪಾಸಣೆ ನಡೆಸಿ ವೈದ್ಯಕೀಯ ಸಲಹೆ ನೀಡಲಾಯಿತು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

18 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago