ಸೇವಾ ಮನೋಭಾವದಿಂದ ಬದಲಾವಣೆ ಸಂಕಲ್ಪ ಸಾಕಾರ-ಎನ್‌ಸಿಸಿ ಅಧಿಕಾರಿ ಪ್ರವೀಣ್

ದೊಡ್ಡಬಳ್ಳಾಪುರ: ಸೇವಾ ಮನೋಭಾವವನ್ನು ಎಲ್ಲ ಹಂತಗಳಲ್ಲಿ ರೂಢಿಸಿಕೊಂಡಾಗ ಮಾತ್ರ ರಾಷ್ಟ್ರೀಯ ಸೇವಾ ಯೋಜನೆಯ ನೈಜ ಉದ್ದೇಶಗಳು ಸಾಕಾರಗೊಳ್ಳುತ್ತವೆ ಎಂದು ಕೊಂಗಾಡಿಯಪ್ಪ ಕಾಲೇಜಿನ ಎನ್‌ಸಿಸಿ ಅಧಿಕಾರಿ ಲೆಫ್ಟಿನೆಂಟ್ ಪ್ರವೀಣ್‌ ಹೇಳಿದರು.

ತಾಲೂಕಿನ ತಳಗವಾರ ಗ್ರಾಮದಲ್ಲಿ ಶ್ರೀ ದೇವರಾಜ್‌ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ನಡೆಯುತ್ತಿರುವ ವಿಶೇಷ ಯುವಜನ ಸೇವಾ ಶಿಬಿರದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಷ್ಟ್ರೀಯ ಐಕ್ಯತೆಯನ್ನು ಪ್ರಧಾನ ಆದ್ಯತೆಯಾಗಿಟ್ಟುಕೊಂಡು, ಜಾತಿ, ಮತ, ಧರ್ಮಗಳನ್ನು ಮೀರಿದ ಮನುಷ್ಯತ್ವದ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸುವುದು ಎಲ್ಲರ ಕರ್ತವ್ಯವಾಗಬೇಕು. ಸೇವೆ ಎಂಬುದು ಕೇವಲ ನೆಪಮಾತ್ರಕ್ಕೆ ಸೀಮಿತವಾಗದೆ ಶ್ರೇಷ್ಠ ಮೌಲ್ಯಗಳನ್ನು ಒಳಗೊಂಡಿರಬೇಕು. ಬದಲಾವಣೆಯನ್ನು ಬಯಸುವವರು ಮೊದಲ ಬದಲಾಗುವ ಸಂಕಲ್ಪ ಮಾಡಬೇಕು. ಆಗ ಮಾತ್ರ ಪರಿಪೂರ್ಣ ಪ್ರಗತಿ ಸಾಧ್ಯವಾಗುತ್ತದೆ ಎಂದರು.

ಆರ್.ಎಲ್.ಜಾಲಪ್ಪ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ನರಸಿಂಹರೆಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಗ್ರಾಮೀಣ ಜನಜೀವನದ ಒಳಹುಗಳನ್ನು ಅರಿತು, ಸುಧಾರಣೆಯ ಮಹತ್ವವನ್ನು ತಿಳಿದುಕೊಳ್ಳಬೇಕು. ಸಾಮಾಜಿಕ ಬದಲಾವಣೆಯಿಂದ ಮಾತ್ರ ಪ್ರಗತಿಯ ವೇಗ ಹೆಚ್ಚುತ್ತದೆ. ಧನಾತ್ಮಕ ಆಲೋಚನೆಗಳು ವ್ಯಕ್ತಿತ್ವವನ್ನು ರೂಪಿಸುತ್ತವೆ ಎಂದರು.

ಐಕ್ಯೂಎಸಿ ಸಂಯೋಜಕ ಪ್ರೊ.ಕೆ.ಆರ್.ರವಿಕಿರಣ್, ಕನ್ನಡ ವಿಭಾಗ ಮುಖ್ಯಸ್ಥ ಡಾ.ಎಂ.ಚಿಕ್ಕಣ್ಣ, ನಿರ್ವಹಣಾ ವಿಭಾಗ ಮುಖ್ಯಸ್ಥೆ ಪಿ.ಚೈತ್ರ, ಉದ್ಯೋಗಾಧಿಕಾರಿ ಬಾಬುಸಾಬಿ, ಎನ್‌ಎಸ್‌ಎಸ್‌ ಸಹಾಯಕ ಅಧಿಕಾರಿಗಳಾದ ವೆಂಕಟೇಶ್, ಪೂಜಾ, ಉಪನ್ಯಾಸಕರಾದ ಭಾನುಶ್ರೀ, ಮಧುಶ್ರೀ, ರಮ್ಯಶ್ರೀ, ಸಂಧ್ಯಾ, ದೀಪಾ, ನಯನ ಮತ್ತಿತರರು ಉಪನ್ಯಾಸ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮಧುಮೇಹ ತಪಾಸಣೆ:

ಇದೇ ವೇಳೆ ಗ್ರಾಮೀಣ ಜನರಿಗಾಗಿ ದೊಡ್ಡಬಳ್ಳಾಪುರದ ಲಯನ್ಸ್‌ ಕ್ಲಬ್‌ ಆಫ್‌ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌, ಲಯನ್ಸ್‌ ಕ್ಲಬ್‌ ಆಫ್ ಆರ್ಯಭಟ ಸಹಯೋಗದಲ್ಲಿ ಮಧುಮೇಹ, ರಕ್ತದೊತ್ತಡ ತಪಾಸಣೆ ಶಿಬಿರ ನಡೆಯಿತು. 100ಕ್ಕೂ ಹೆಚ್ಚು ಜನರಿಗೆ ತಪಾಸಣೆ ನಡೆಸಿ ವೈದ್ಯಕೀಯ ಸಲಹೆ ನೀಡಲಾಯಿತು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

13 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

15 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

15 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

15 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

20 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

21 hours ago