ಸೈಕಲ್ ಗೋಡಾನ್ ಗೆ ಆಕಸ್ಮಿಕ ಬೆಂಕಿ; ಬೆಲೆಬಾಳುವ ಸೈಕಲ್‌ಗಳು ಸುಟ್ಟು ಕರಕಲು

ದೊಡ್ಡಬಳ್ಳಾಪುರ: ನಗರದ ಸೈಕಲ್ ಗೋಡೌನ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಗೋಡೌನ್‌ನಲ್ಲಿದ್ದ ಅಪಾರ ಪ್ರಮಾಣದ ಬೆಲೆಬಾಳುವ ಸೈಕಲ್‌ಗಳು ಸುಟ್ಟು ಕರಕಲಾದ ಘಟನೆ ನಗರದ ಹಳೇ ಬಸ್ ನಿಲ್ದಾಣ ಸಮೀಪದ ಚೌಕದ ರಸ್ತೆಯಲ್ಲಿ ನಡೆದಿದೆ.

ತಳ ಮಹಡಿಯಲ್ಲಿ ಸೈಕಲ್ ಗೋಡೌನ್ ಇದ್ದು, ಅದರ ಮೇಲಿನ ಮಹಡಿಯಲ್ಲಿ ಬ್ಯಾಂಕ್ ಕಾರ್ಯನಿರ್ವಹಿಸುತ್ತಿದೆ. ಗೋಡೌನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೇಲ್ಮಹಡಿಯಲ್ಲಿದ್ದ ಬ್ಯಾಂಕ್ ಸಿಬ್ಬಂದಿ ಆತಂಕಕ್ಕೊಳಗಾದರು. ಬೆಂಕಿ ಮೇಲ್ಮಹಡಿಗೂ ವ್ಯಾಪಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿಬ್ಬಂದಿ ಹಾಗೂ ಸ್ಥಳೀಯರಲ್ಲಿ ಕೆಲಕಾಲ ಭಯದ ವಾತಾವರಣ ನಿರ್ಮಾಣವಾಗಿತ್ತು.

ಬೆಂಕಿಯ ತೀವ್ರತೆ ಹೆಚ್ಚಾಗಿದ್ದು, ನಾಲ್ಕು ನೀರಿನ ಟ್ಯಾಂಕ್‌ಗಳ ನೀರು ಖಾಲಿಯಾದರೂ ಬೆಂಕಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿಲ್ಲ ಎನ್ನಲಾಗಿದೆ. ಇದರಿಂದ ಗೋಡೌನ್ ಸುತ್ತಮುತ್ತಲಿನ ಅಂಗಡಿಗಳು ಹಾಗೂ ಮನೆಗಳಿಗೂ ಬೆಂಕಿ ಹಬ್ಬುವ ಆತಂಕ ಎದುರಾಗಿದೆ.

ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ನಗರ ಠಾಣೆ ಇನ್ಸ್‌ಪೆಕ್ಟರ್ ಮುತ್ತುರಾಜ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಹೆಚ್ಚಿನ ಅನಾಹುತ ಸಂಭವಿಸದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ಘಟನೆಯಿಂದ ಗೋಡೌನ್‌ನಲ್ಲಿದ್ದ ಸೈಕಲ್‌ಗಳಿಗೆ ಭಾರೀ ಹಾನಿಯಾಗಿದ್ದು, ಒಟ್ಟಾರೆ ನಷ್ಟದ ಪ್ರಮಾಣ ಇನ್ನಷ್ಟೇ ತಿಳಿದುಬರಬೇಕಿದೆ.

Ramesh Babu

Journalist

Recent Posts

ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಿಸಿ ಅರ್ಜುನ್ ವಿರಾಟ್ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಯುವ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಅರ್ಜುನ್ ವಿರಾಟ್ ಅವರ ಜನ್ಮದಿನದ ಹಿನ್ನೆಲೆ, ಅವರ ಸ್ನೇಹಿತರು ಹಾಗೂ ಒಡನಾಡಿಗಳು…

1 hour ago

ಲಾರಿ–ಕಾರು ನಡುವೆ ಅಪಘಾತ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಮಧುರೆ ಹೋಬಳಿಯ ಚೆನ್ನದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಬಳಿ ಲಾರಿ ಹಾಗೂ ಕಾರು ನಡುವೆ…

10 hours ago

ಮಳೆಗಾಗಿ ಕಾದ ರೈತರಿಗೆ ಹೊಸ ಸಂಕಷ್ಟ: ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದ ಬಿತ್ತನೆ ಸ್ಥಗಿತ: ಬರದ ಭೀತಿ ಬಳಿಕ ಅತಿವೃಷ್ಟಿ ಕಾಟ: ಹೊಲಗಳಲ್ಲಿ ನೀರು ನಿಂತು ಕೃಷಿ ಚಟುವಟಿಕೆ ಅಸ್ತವ್ಯಸ್ತ

ತಿಂಗಳುಗಳ ಕಾಲ ಮಳೆಗಾಗಿ ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ರೈತರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಇಷ್ಟು ದಿನ ಸಮರ್ಪಕ…

1 day ago

ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ

ಬೆಂಗಳೂರು: ಸ್ವಚ್ಚ, ಸುರಕ್ಷಿತ ಬೆಂಗಳೂರಿಗಾಗಿ ಜಿಬಿಎ ಜತೆ ಕೈಜೋಡಿಸಿರುವ ಬೆಸ್ಕಾಂ,ನಗರದ ಜನರಿಗೆ ಸುರಕ್ಷಿತ ನಡಿಗೆಯ ಗ್ಯಾರಂಟಿ ನೀಡುವ ಉದ್ದೇಶದಿಂದ ನಿಗಮದ…

2 days ago

ಬೈಕ್‌–ಕ್ಯಾಂಟರ್ ನಡುವೆ ಭೀಕರ ಅಪಘಾತ: ಓರ್ವ ಸಾವು, ಇಬ್ಬರಿಗೆ ಗಾಯ

ದೊಡ್ಡಬಳ್ಳಾಪುರ: ತ್ರಿಬಲ್‌ ರೈಡಿಂಗ್‌ನಲ್ಲಿ ತೆರಳುತ್ತಿದ್ದ ಬೈಕ್‌ ಹಾಗೂ ಹಾಲಿನ ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…

2 days ago

ಓದು, ಪ್ರವಾಸ ಮತ್ತು ಧ್ಯಾನಸ್ಥ ಮನಸ್ಥಿತಿ……..

ಪ್ರವಾಸ ಕಥನಗಳ ಬಗ್ಗೆ ಬಹಳ ಹಿಂದಿನಿಂದಲೂ ಸಾಕಷ್ಟು ಲೇಖನಗಳನ್ನು ಓದುತ್ತಲೇ ಇರುತ್ತೇನೆ. ಅದು ಪ್ರವಾಸೋದ್ಯಮಕ್ಕಾಗಿಯಲ್ಲ. ಏಕೆಂದರೆ ಪ್ರವಾಸ ವ್ಯಾಪಾರಿಗಳಿಗೆ ಒಂದು…

2 days ago