ಸೈಕಲ್ ಜಾಥಾ ನಡೆಸುವ ಮೂಲಕ ಮತದಾನ ಜಾಗೃತಿ: ಸ್ವಯಂಪ್ರೇರಿತವಾಗಿ ಯುವಕರಿಂದ ಮತದಾನ ಅರಿವು

ಮೇ.10ರಂದು ನಡೆಯಲಿರುವ 2023ರ ವಿಧಾನಸಭಾ ಚುನಾವಣೆಗೆ ಮತದಾರರಲ್ಲಿ ಮತದಾನ ಬಗ್ಗೆ ಅರಿವು ಮೂಡಿಸಲು ಸಲುವಾಗಿ ಸ್ವಯಂಪ್ರೇರಿತವಾಗಿ ಯುವಕರು ಸೈಕಲ್‌ ಜಾಥಾ ಹಮ್ಮಿಕೊಂಡಿದ್ದರು.

ನಗರದ ತಾಲ್ಲೂಕು ಕಚೇರಿ ವೃತ್ತದಿಂದ ಆರಂಭವಾದ ಸೈಕಲ್ ಜಾಥಾ ಗಣಪತಿ ದೇವಾಲಯ, ಚೌಕದ ಸರ್ಕಲ್, ಸೌಂದರ್ಯ ಮಹಲ್ ಚಿತ್ರ ಮಂದಿರ, ಹಳೆ ಸರ್ಕಾರಿ ಆಸ್ಪತ್ರೆ ವೃತ್ತ, ಲಕ್ಷ್ಮೀ ಚಿತ್ರಮಂದಿರ, ತೇರಿನ ಬೀದಿ, ಕೆಸಿಪಿ ಕಲ್ಯಾಣ ಮಂಟಪ, ಕೊಂಗಾಡಿಯಪ್ಪ ಕಾಲೇಜು ರಸ್ತೆ ಸೇರಿದಂತೆ ಹಲವು ಮಾರ್ಗಗಳಲ್ಲಿ ‘ಮತದಾನ ತಪ್ಪದೇ ಮಾಡಿ’ ಎಂಬ ಜಾಗೃತಿ ಫಲಕಗಳನ್ನು ಹೊತ್ತು ನಗರದ ಪ್ರಮುಖ ಬೀದಿಗಳಲ್ಲಿ ಸೈಕಲ್ ಜಾಥ ನಡೆಸಿದರು.

ಈ ವೇಳೆ ಮಾತನಾಡಿದ ಸೈಕಲ್ ಜಾಥಾ ತಂಡದ ಕಾರ್ತಿಕ್, ನಮ್ಮ ತಂಡ ಯಾವುದೇ ರಾಜಕೀಯ ವ್ಯಕ್ತಿ ಪರವಾಗಿಯಾಗಲಿ , ಪಕ್ಷದ ಪರವಾಗಿಯಾಗಲಿ ಪ್ರಚಾರ ಮಾಡುತ್ತಿಲ್ಲ. ಬದಲಿಗೆ 2023ರ ಸಾರ್ವತ್ರಿಕ ಚುನಾವಣೆ ಮತದಾನಕ್ಕೆ ಇನ್ನು ಎರಡೇ ದಿನ ಬಾಕಿ ಇದ್ದೂ ತಾಲ್ಲೂಕಿನ ಅಭಿವೃದ್ದಿ ಮಾಡಲು ಯಾರು ಯೋಗ್ಯರೋ ಅಂಥವರನ್ನು ಗಮನದಲ್ಲಿರಿಸಿಕೊಂಡು ಮತದಾನ ಮಾಡುವಂತೆ ಮನವಿ ಮಾಡಿದರು.

ಶ್ರೀಕಾಂತ್ ಜನಾರ್ಧನ್ ಮಾತನಾಡಿ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಾಲ್ಲೂಕಿನ ಎಲ್ಲಾ ಜನತೆ ತಪ್ಪದೇ ಮತ ಹಾಕಿ, ರಾಜಕಾರಣಿಗಳ ಆಮಿಷಕ್ಕೆ ಒಳಗಾಗಬೇಡಿ, ನಿಮ್ಮ ಮತಗಳನ್ನು ಹಣಕ್ಕಾಗಿ ಮಾರಿಕೊಳ್ಳಬೇಡಿ, ತಾಲ್ಲೂಕಿನ ಅಭಿವೃದ್ದಿಯ ದೃಷ್ಟಿಯಿಂದ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವ ಸಲುವಾಗಿ ಮತದಾನ ತಪ್ಪದೇ ಮಾಡಿ ಎಂದು ಮನವಿ ಮಾಡಿದರು.

ಈ ವೇಳೆ ಅಭಿಷೇಕ್, ವಿಜಯ್ ಸಾಗರ್, ಗಿರೀಶ್, ಶಶಾಂಕ್ ಇದ್ದರು.

Ramesh Babu

Journalist

Recent Posts

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

1 hour ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

2 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

18 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

19 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 day ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

1 day ago