ಸೈಕಲ್ ಜಾಥಾ ನಡೆಸುವ ಮೂಲಕ ಮತದಾನ ಜಾಗೃತಿ: ಸ್ವಯಂಪ್ರೇರಿತವಾಗಿ ಯುವಕರಿಂದ ಮತದಾನ ಅರಿವು

ಮೇ.10ರಂದು ನಡೆಯಲಿರುವ 2023ರ ವಿಧಾನಸಭಾ ಚುನಾವಣೆಗೆ ಮತದಾರರಲ್ಲಿ ಮತದಾನ ಬಗ್ಗೆ ಅರಿವು ಮೂಡಿಸಲು ಸಲುವಾಗಿ ಸ್ವಯಂಪ್ರೇರಿತವಾಗಿ ಯುವಕರು ಸೈಕಲ್‌ ಜಾಥಾ ಹಮ್ಮಿಕೊಂಡಿದ್ದರು.

ನಗರದ ತಾಲ್ಲೂಕು ಕಚೇರಿ ವೃತ್ತದಿಂದ ಆರಂಭವಾದ ಸೈಕಲ್ ಜಾಥಾ ಗಣಪತಿ ದೇವಾಲಯ, ಚೌಕದ ಸರ್ಕಲ್, ಸೌಂದರ್ಯ ಮಹಲ್ ಚಿತ್ರ ಮಂದಿರ, ಹಳೆ ಸರ್ಕಾರಿ ಆಸ್ಪತ್ರೆ ವೃತ್ತ, ಲಕ್ಷ್ಮೀ ಚಿತ್ರಮಂದಿರ, ತೇರಿನ ಬೀದಿ, ಕೆಸಿಪಿ ಕಲ್ಯಾಣ ಮಂಟಪ, ಕೊಂಗಾಡಿಯಪ್ಪ ಕಾಲೇಜು ರಸ್ತೆ ಸೇರಿದಂತೆ ಹಲವು ಮಾರ್ಗಗಳಲ್ಲಿ ‘ಮತದಾನ ತಪ್ಪದೇ ಮಾಡಿ’ ಎಂಬ ಜಾಗೃತಿ ಫಲಕಗಳನ್ನು ಹೊತ್ತು ನಗರದ ಪ್ರಮುಖ ಬೀದಿಗಳಲ್ಲಿ ಸೈಕಲ್ ಜಾಥ ನಡೆಸಿದರು.

ಈ ವೇಳೆ ಮಾತನಾಡಿದ ಸೈಕಲ್ ಜಾಥಾ ತಂಡದ ಕಾರ್ತಿಕ್, ನಮ್ಮ ತಂಡ ಯಾವುದೇ ರಾಜಕೀಯ ವ್ಯಕ್ತಿ ಪರವಾಗಿಯಾಗಲಿ , ಪಕ್ಷದ ಪರವಾಗಿಯಾಗಲಿ ಪ್ರಚಾರ ಮಾಡುತ್ತಿಲ್ಲ. ಬದಲಿಗೆ 2023ರ ಸಾರ್ವತ್ರಿಕ ಚುನಾವಣೆ ಮತದಾನಕ್ಕೆ ಇನ್ನು ಎರಡೇ ದಿನ ಬಾಕಿ ಇದ್ದೂ ತಾಲ್ಲೂಕಿನ ಅಭಿವೃದ್ದಿ ಮಾಡಲು ಯಾರು ಯೋಗ್ಯರೋ ಅಂಥವರನ್ನು ಗಮನದಲ್ಲಿರಿಸಿಕೊಂಡು ಮತದಾನ ಮಾಡುವಂತೆ ಮನವಿ ಮಾಡಿದರು.

ಶ್ರೀಕಾಂತ್ ಜನಾರ್ಧನ್ ಮಾತನಾಡಿ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಾಲ್ಲೂಕಿನ ಎಲ್ಲಾ ಜನತೆ ತಪ್ಪದೇ ಮತ ಹಾಕಿ, ರಾಜಕಾರಣಿಗಳ ಆಮಿಷಕ್ಕೆ ಒಳಗಾಗಬೇಡಿ, ನಿಮ್ಮ ಮತಗಳನ್ನು ಹಣಕ್ಕಾಗಿ ಮಾರಿಕೊಳ್ಳಬೇಡಿ, ತಾಲ್ಲೂಕಿನ ಅಭಿವೃದ್ದಿಯ ದೃಷ್ಟಿಯಿಂದ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವ ಸಲುವಾಗಿ ಮತದಾನ ತಪ್ಪದೇ ಮಾಡಿ ಎಂದು ಮನವಿ ಮಾಡಿದರು.

ಈ ವೇಳೆ ಅಭಿಷೇಕ್, ವಿಜಯ್ ಸಾಗರ್, ಗಿರೀಶ್, ಶಶಾಂಕ್ ಇದ್ದರು.

Ramesh Babu

Journalist

Recent Posts

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

6 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

8 hours ago

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

20 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

21 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

23 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

24 hours ago