ಸೈಕಲ್ ಜಾಥಾ ನಡೆಸುವ ಮೂಲಕ ಮತದಾನ ಜಾಗೃತಿ: ಸ್ವಯಂಪ್ರೇರಿತವಾಗಿ ಯುವಕರಿಂದ ಮತದಾನ ಅರಿವು

ಮೇ.10ರಂದು ನಡೆಯಲಿರುವ 2023ರ ವಿಧಾನಸಭಾ ಚುನಾವಣೆಗೆ ಮತದಾರರಲ್ಲಿ ಮತದಾನ ಬಗ್ಗೆ ಅರಿವು ಮೂಡಿಸಲು ಸಲುವಾಗಿ ಸ್ವಯಂಪ್ರೇರಿತವಾಗಿ ಯುವಕರು ಸೈಕಲ್‌ ಜಾಥಾ ಹಮ್ಮಿಕೊಂಡಿದ್ದರು.

ನಗರದ ತಾಲ್ಲೂಕು ಕಚೇರಿ ವೃತ್ತದಿಂದ ಆರಂಭವಾದ ಸೈಕಲ್ ಜಾಥಾ ಗಣಪತಿ ದೇವಾಲಯ, ಚೌಕದ ಸರ್ಕಲ್, ಸೌಂದರ್ಯ ಮಹಲ್ ಚಿತ್ರ ಮಂದಿರ, ಹಳೆ ಸರ್ಕಾರಿ ಆಸ್ಪತ್ರೆ ವೃತ್ತ, ಲಕ್ಷ್ಮೀ ಚಿತ್ರಮಂದಿರ, ತೇರಿನ ಬೀದಿ, ಕೆಸಿಪಿ ಕಲ್ಯಾಣ ಮಂಟಪ, ಕೊಂಗಾಡಿಯಪ್ಪ ಕಾಲೇಜು ರಸ್ತೆ ಸೇರಿದಂತೆ ಹಲವು ಮಾರ್ಗಗಳಲ್ಲಿ ‘ಮತದಾನ ತಪ್ಪದೇ ಮಾಡಿ’ ಎಂಬ ಜಾಗೃತಿ ಫಲಕಗಳನ್ನು ಹೊತ್ತು ನಗರದ ಪ್ರಮುಖ ಬೀದಿಗಳಲ್ಲಿ ಸೈಕಲ್ ಜಾಥ ನಡೆಸಿದರು.

ಈ ವೇಳೆ ಮಾತನಾಡಿದ ಸೈಕಲ್ ಜಾಥಾ ತಂಡದ ಕಾರ್ತಿಕ್, ನಮ್ಮ ತಂಡ ಯಾವುದೇ ರಾಜಕೀಯ ವ್ಯಕ್ತಿ ಪರವಾಗಿಯಾಗಲಿ , ಪಕ್ಷದ ಪರವಾಗಿಯಾಗಲಿ ಪ್ರಚಾರ ಮಾಡುತ್ತಿಲ್ಲ. ಬದಲಿಗೆ 2023ರ ಸಾರ್ವತ್ರಿಕ ಚುನಾವಣೆ ಮತದಾನಕ್ಕೆ ಇನ್ನು ಎರಡೇ ದಿನ ಬಾಕಿ ಇದ್ದೂ ತಾಲ್ಲೂಕಿನ ಅಭಿವೃದ್ದಿ ಮಾಡಲು ಯಾರು ಯೋಗ್ಯರೋ ಅಂಥವರನ್ನು ಗಮನದಲ್ಲಿರಿಸಿಕೊಂಡು ಮತದಾನ ಮಾಡುವಂತೆ ಮನವಿ ಮಾಡಿದರು.

ಶ್ರೀಕಾಂತ್ ಜನಾರ್ಧನ್ ಮಾತನಾಡಿ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಾಲ್ಲೂಕಿನ ಎಲ್ಲಾ ಜನತೆ ತಪ್ಪದೇ ಮತ ಹಾಕಿ, ರಾಜಕಾರಣಿಗಳ ಆಮಿಷಕ್ಕೆ ಒಳಗಾಗಬೇಡಿ, ನಿಮ್ಮ ಮತಗಳನ್ನು ಹಣಕ್ಕಾಗಿ ಮಾರಿಕೊಳ್ಳಬೇಡಿ, ತಾಲ್ಲೂಕಿನ ಅಭಿವೃದ್ದಿಯ ದೃಷ್ಟಿಯಿಂದ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವ ಸಲುವಾಗಿ ಮತದಾನ ತಪ್ಪದೇ ಮಾಡಿ ಎಂದು ಮನವಿ ಮಾಡಿದರು.

ಈ ವೇಳೆ ಅಭಿಷೇಕ್, ವಿಜಯ್ ಸಾಗರ್, ಗಿರೀಶ್, ಶಶಾಂಕ್ ಇದ್ದರು.

Ramesh Babu

Journalist

Recent Posts

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…

2 hours ago

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

5 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

7 hours ago

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

19 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

22 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

22 hours ago