ಸೈಕಲ್ ಜಾಥಾ ನಡೆಸುವ ಮೂಲಕ ಮತದಾನ ಜಾಗೃತಿ: ಸ್ವಯಂಪ್ರೇರಿತವಾಗಿ ಯುವಕರಿಂದ ಮತದಾನ ಅರಿವು

ಮೇ.10ರಂದು ನಡೆಯಲಿರುವ 2023ರ ವಿಧಾನಸಭಾ ಚುನಾವಣೆಗೆ ಮತದಾರರಲ್ಲಿ ಮತದಾನ ಬಗ್ಗೆ ಅರಿವು ಮೂಡಿಸಲು ಸಲುವಾಗಿ ಸ್ವಯಂಪ್ರೇರಿತವಾಗಿ ಯುವಕರು ಸೈಕಲ್‌ ಜಾಥಾ ಹಮ್ಮಿಕೊಂಡಿದ್ದರು.

ನಗರದ ತಾಲ್ಲೂಕು ಕಚೇರಿ ವೃತ್ತದಿಂದ ಆರಂಭವಾದ ಸೈಕಲ್ ಜಾಥಾ ಗಣಪತಿ ದೇವಾಲಯ, ಚೌಕದ ಸರ್ಕಲ್, ಸೌಂದರ್ಯ ಮಹಲ್ ಚಿತ್ರ ಮಂದಿರ, ಹಳೆ ಸರ್ಕಾರಿ ಆಸ್ಪತ್ರೆ ವೃತ್ತ, ಲಕ್ಷ್ಮೀ ಚಿತ್ರಮಂದಿರ, ತೇರಿನ ಬೀದಿ, ಕೆಸಿಪಿ ಕಲ್ಯಾಣ ಮಂಟಪ, ಕೊಂಗಾಡಿಯಪ್ಪ ಕಾಲೇಜು ರಸ್ತೆ ಸೇರಿದಂತೆ ಹಲವು ಮಾರ್ಗಗಳಲ್ಲಿ ‘ಮತದಾನ ತಪ್ಪದೇ ಮಾಡಿ’ ಎಂಬ ಜಾಗೃತಿ ಫಲಕಗಳನ್ನು ಹೊತ್ತು ನಗರದ ಪ್ರಮುಖ ಬೀದಿಗಳಲ್ಲಿ ಸೈಕಲ್ ಜಾಥ ನಡೆಸಿದರು.

ಈ ವೇಳೆ ಮಾತನಾಡಿದ ಸೈಕಲ್ ಜಾಥಾ ತಂಡದ ಕಾರ್ತಿಕ್, ನಮ್ಮ ತಂಡ ಯಾವುದೇ ರಾಜಕೀಯ ವ್ಯಕ್ತಿ ಪರವಾಗಿಯಾಗಲಿ , ಪಕ್ಷದ ಪರವಾಗಿಯಾಗಲಿ ಪ್ರಚಾರ ಮಾಡುತ್ತಿಲ್ಲ. ಬದಲಿಗೆ 2023ರ ಸಾರ್ವತ್ರಿಕ ಚುನಾವಣೆ ಮತದಾನಕ್ಕೆ ಇನ್ನು ಎರಡೇ ದಿನ ಬಾಕಿ ಇದ್ದೂ ತಾಲ್ಲೂಕಿನ ಅಭಿವೃದ್ದಿ ಮಾಡಲು ಯಾರು ಯೋಗ್ಯರೋ ಅಂಥವರನ್ನು ಗಮನದಲ್ಲಿರಿಸಿಕೊಂಡು ಮತದಾನ ಮಾಡುವಂತೆ ಮನವಿ ಮಾಡಿದರು.

ಶ್ರೀಕಾಂತ್ ಜನಾರ್ಧನ್ ಮಾತನಾಡಿ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಾಲ್ಲೂಕಿನ ಎಲ್ಲಾ ಜನತೆ ತಪ್ಪದೇ ಮತ ಹಾಕಿ, ರಾಜಕಾರಣಿಗಳ ಆಮಿಷಕ್ಕೆ ಒಳಗಾಗಬೇಡಿ, ನಿಮ್ಮ ಮತಗಳನ್ನು ಹಣಕ್ಕಾಗಿ ಮಾರಿಕೊಳ್ಳಬೇಡಿ, ತಾಲ್ಲೂಕಿನ ಅಭಿವೃದ್ದಿಯ ದೃಷ್ಟಿಯಿಂದ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವ ಸಲುವಾಗಿ ಮತದಾನ ತಪ್ಪದೇ ಮಾಡಿ ಎಂದು ಮನವಿ ಮಾಡಿದರು.

ಈ ವೇಳೆ ಅಭಿಷೇಕ್, ವಿಜಯ್ ಸಾಗರ್, ಗಿರೀಶ್, ಶಶಾಂಕ್ ಇದ್ದರು.

Ramesh Babu

Journalist

Recent Posts

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

10 hours ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

11 hours ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

11 hours ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

11 hours ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

13 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

15 hours ago