ಸೈಕಲ್ ಜಾಥಾ ನಡೆಸುವ ಮೂಲಕ ಮತದಾನ ಜಾಗೃತಿ: ಸ್ವಯಂಪ್ರೇರಿತವಾಗಿ ಯುವಕರಿಂದ ಮತದಾನ ಅರಿವು

ಮೇ.10ರಂದು ನಡೆಯಲಿರುವ 2023ರ ವಿಧಾನಸಭಾ ಚುನಾವಣೆಗೆ ಮತದಾರರಲ್ಲಿ ಮತದಾನ ಬಗ್ಗೆ ಅರಿವು ಮೂಡಿಸಲು ಸಲುವಾಗಿ ಸ್ವಯಂಪ್ರೇರಿತವಾಗಿ ಯುವಕರು ಸೈಕಲ್‌ ಜಾಥಾ ಹಮ್ಮಿಕೊಂಡಿದ್ದರು.

ನಗರದ ತಾಲ್ಲೂಕು ಕಚೇರಿ ವೃತ್ತದಿಂದ ಆರಂಭವಾದ ಸೈಕಲ್ ಜಾಥಾ ಗಣಪತಿ ದೇವಾಲಯ, ಚೌಕದ ಸರ್ಕಲ್, ಸೌಂದರ್ಯ ಮಹಲ್ ಚಿತ್ರ ಮಂದಿರ, ಹಳೆ ಸರ್ಕಾರಿ ಆಸ್ಪತ್ರೆ ವೃತ್ತ, ಲಕ್ಷ್ಮೀ ಚಿತ್ರಮಂದಿರ, ತೇರಿನ ಬೀದಿ, ಕೆಸಿಪಿ ಕಲ್ಯಾಣ ಮಂಟಪ, ಕೊಂಗಾಡಿಯಪ್ಪ ಕಾಲೇಜು ರಸ್ತೆ ಸೇರಿದಂತೆ ಹಲವು ಮಾರ್ಗಗಳಲ್ಲಿ ‘ಮತದಾನ ತಪ್ಪದೇ ಮಾಡಿ’ ಎಂಬ ಜಾಗೃತಿ ಫಲಕಗಳನ್ನು ಹೊತ್ತು ನಗರದ ಪ್ರಮುಖ ಬೀದಿಗಳಲ್ಲಿ ಸೈಕಲ್ ಜಾಥ ನಡೆಸಿದರು.

ಈ ವೇಳೆ ಮಾತನಾಡಿದ ಸೈಕಲ್ ಜಾಥಾ ತಂಡದ ಕಾರ್ತಿಕ್, ನಮ್ಮ ತಂಡ ಯಾವುದೇ ರಾಜಕೀಯ ವ್ಯಕ್ತಿ ಪರವಾಗಿಯಾಗಲಿ , ಪಕ್ಷದ ಪರವಾಗಿಯಾಗಲಿ ಪ್ರಚಾರ ಮಾಡುತ್ತಿಲ್ಲ. ಬದಲಿಗೆ 2023ರ ಸಾರ್ವತ್ರಿಕ ಚುನಾವಣೆ ಮತದಾನಕ್ಕೆ ಇನ್ನು ಎರಡೇ ದಿನ ಬಾಕಿ ಇದ್ದೂ ತಾಲ್ಲೂಕಿನ ಅಭಿವೃದ್ದಿ ಮಾಡಲು ಯಾರು ಯೋಗ್ಯರೋ ಅಂಥವರನ್ನು ಗಮನದಲ್ಲಿರಿಸಿಕೊಂಡು ಮತದಾನ ಮಾಡುವಂತೆ ಮನವಿ ಮಾಡಿದರು.

ಶ್ರೀಕಾಂತ್ ಜನಾರ್ಧನ್ ಮಾತನಾಡಿ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಾಲ್ಲೂಕಿನ ಎಲ್ಲಾ ಜನತೆ ತಪ್ಪದೇ ಮತ ಹಾಕಿ, ರಾಜಕಾರಣಿಗಳ ಆಮಿಷಕ್ಕೆ ಒಳಗಾಗಬೇಡಿ, ನಿಮ್ಮ ಮತಗಳನ್ನು ಹಣಕ್ಕಾಗಿ ಮಾರಿಕೊಳ್ಳಬೇಡಿ, ತಾಲ್ಲೂಕಿನ ಅಭಿವೃದ್ದಿಯ ದೃಷ್ಟಿಯಿಂದ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವ ಸಲುವಾಗಿ ಮತದಾನ ತಪ್ಪದೇ ಮಾಡಿ ಎಂದು ಮನವಿ ಮಾಡಿದರು.

ಈ ವೇಳೆ ಅಭಿಷೇಕ್, ವಿಜಯ್ ಸಾಗರ್, ಗಿರೀಶ್, ಶಶಾಂಕ್ ಇದ್ದರು.

Ramesh Babu

Journalist

Recent Posts

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

9 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

1 day ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

1 day ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

1 day ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

2 days ago