ಮೇ.10ರಂದು ನಡೆಯಲಿರುವ 2023ರ ವಿಧಾನಸಭಾ ಚುನಾವಣೆಗೆ ಮತದಾರರಲ್ಲಿ ಮತದಾನ ಬಗ್ಗೆ ಅರಿವು ಮೂಡಿಸಲು ಸಲುವಾಗಿ ಸ್ವಯಂಪ್ರೇರಿತವಾಗಿ ಯುವಕರು ಸೈಕಲ್ ಜಾಥಾ ಹಮ್ಮಿಕೊಂಡಿದ್ದರು.
ನಗರದ ತಾಲ್ಲೂಕು ಕಚೇರಿ ವೃತ್ತದಿಂದ ಆರಂಭವಾದ ಸೈಕಲ್ ಜಾಥಾ ಗಣಪತಿ ದೇವಾಲಯ, ಚೌಕದ ಸರ್ಕಲ್, ಸೌಂದರ್ಯ ಮಹಲ್ ಚಿತ್ರ ಮಂದಿರ, ಹಳೆ ಸರ್ಕಾರಿ ಆಸ್ಪತ್ರೆ ವೃತ್ತ, ಲಕ್ಷ್ಮೀ ಚಿತ್ರಮಂದಿರ, ತೇರಿನ ಬೀದಿ, ಕೆಸಿಪಿ ಕಲ್ಯಾಣ ಮಂಟಪ, ಕೊಂಗಾಡಿಯಪ್ಪ ಕಾಲೇಜು ರಸ್ತೆ ಸೇರಿದಂತೆ ಹಲವು ಮಾರ್ಗಗಳಲ್ಲಿ ‘ಮತದಾನ ತಪ್ಪದೇ ಮಾಡಿ’ ಎಂಬ ಜಾಗೃತಿ ಫಲಕಗಳನ್ನು ಹೊತ್ತು ನಗರದ ಪ್ರಮುಖ ಬೀದಿಗಳಲ್ಲಿ ಸೈಕಲ್ ಜಾಥ ನಡೆಸಿದರು.
ಈ ವೇಳೆ ಮಾತನಾಡಿದ ಸೈಕಲ್ ಜಾಥಾ ತಂಡದ ಕಾರ್ತಿಕ್, ನಮ್ಮ ತಂಡ ಯಾವುದೇ ರಾಜಕೀಯ ವ್ಯಕ್ತಿ ಪರವಾಗಿಯಾಗಲಿ , ಪಕ್ಷದ ಪರವಾಗಿಯಾಗಲಿ ಪ್ರಚಾರ ಮಾಡುತ್ತಿಲ್ಲ. ಬದಲಿಗೆ 2023ರ ಸಾರ್ವತ್ರಿಕ ಚುನಾವಣೆ ಮತದಾನಕ್ಕೆ ಇನ್ನು ಎರಡೇ ದಿನ ಬಾಕಿ ಇದ್ದೂ ತಾಲ್ಲೂಕಿನ ಅಭಿವೃದ್ದಿ ಮಾಡಲು ಯಾರು ಯೋಗ್ಯರೋ ಅಂಥವರನ್ನು ಗಮನದಲ್ಲಿರಿಸಿಕೊಂಡು ಮತದಾನ ಮಾಡುವಂತೆ ಮನವಿ ಮಾಡಿದರು.
ಶ್ರೀಕಾಂತ್ ಜನಾರ್ಧನ್ ಮಾತನಾಡಿ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಾಲ್ಲೂಕಿನ ಎಲ್ಲಾ ಜನತೆ ತಪ್ಪದೇ ಮತ ಹಾಕಿ, ರಾಜಕಾರಣಿಗಳ ಆಮಿಷಕ್ಕೆ ಒಳಗಾಗಬೇಡಿ, ನಿಮ್ಮ ಮತಗಳನ್ನು ಹಣಕ್ಕಾಗಿ ಮಾರಿಕೊಳ್ಳಬೇಡಿ, ತಾಲ್ಲೂಕಿನ ಅಭಿವೃದ್ದಿಯ ದೃಷ್ಟಿಯಿಂದ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವ ಸಲುವಾಗಿ ಮತದಾನ ತಪ್ಪದೇ ಮಾಡಿ ಎಂದು ಮನವಿ ಮಾಡಿದರು.
ಈ ವೇಳೆ ಅಭಿಷೇಕ್, ವಿಜಯ್ ಸಾಗರ್, ಗಿರೀಶ್, ಶಶಾಂಕ್ ಇದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…