ಸೈಕಲ್ ಜಾಥಾ ನಡೆಸುವ ಮೂಲಕ ಮತದಾನ ಜಾಗೃತಿ: ಸ್ವಯಂಪ್ರೇರಿತವಾಗಿ ಯುವಕರಿಂದ ಮತದಾನ ಅರಿವು

ಮೇ.10ರಂದು ನಡೆಯಲಿರುವ 2023ರ ವಿಧಾನಸಭಾ ಚುನಾವಣೆಗೆ ಮತದಾರರಲ್ಲಿ ಮತದಾನ ಬಗ್ಗೆ ಅರಿವು ಮೂಡಿಸಲು ಸಲುವಾಗಿ ಸ್ವಯಂಪ್ರೇರಿತವಾಗಿ ಯುವಕರು ಸೈಕಲ್‌ ಜಾಥಾ ಹಮ್ಮಿಕೊಂಡಿದ್ದರು.

ನಗರದ ತಾಲ್ಲೂಕು ಕಚೇರಿ ವೃತ್ತದಿಂದ ಆರಂಭವಾದ ಸೈಕಲ್ ಜಾಥಾ ಗಣಪತಿ ದೇವಾಲಯ, ಚೌಕದ ಸರ್ಕಲ್, ಸೌಂದರ್ಯ ಮಹಲ್ ಚಿತ್ರ ಮಂದಿರ, ಹಳೆ ಸರ್ಕಾರಿ ಆಸ್ಪತ್ರೆ ವೃತ್ತ, ಲಕ್ಷ್ಮೀ ಚಿತ್ರಮಂದಿರ, ತೇರಿನ ಬೀದಿ, ಕೆಸಿಪಿ ಕಲ್ಯಾಣ ಮಂಟಪ, ಕೊಂಗಾಡಿಯಪ್ಪ ಕಾಲೇಜು ರಸ್ತೆ ಸೇರಿದಂತೆ ಹಲವು ಮಾರ್ಗಗಳಲ್ಲಿ ‘ಮತದಾನ ತಪ್ಪದೇ ಮಾಡಿ’ ಎಂಬ ಜಾಗೃತಿ ಫಲಕಗಳನ್ನು ಹೊತ್ತು ನಗರದ ಪ್ರಮುಖ ಬೀದಿಗಳಲ್ಲಿ ಸೈಕಲ್ ಜಾಥ ನಡೆಸಿದರು.

ಈ ವೇಳೆ ಮಾತನಾಡಿದ ಸೈಕಲ್ ಜಾಥಾ ತಂಡದ ಕಾರ್ತಿಕ್, ನಮ್ಮ ತಂಡ ಯಾವುದೇ ರಾಜಕೀಯ ವ್ಯಕ್ತಿ ಪರವಾಗಿಯಾಗಲಿ , ಪಕ್ಷದ ಪರವಾಗಿಯಾಗಲಿ ಪ್ರಚಾರ ಮಾಡುತ್ತಿಲ್ಲ. ಬದಲಿಗೆ 2023ರ ಸಾರ್ವತ್ರಿಕ ಚುನಾವಣೆ ಮತದಾನಕ್ಕೆ ಇನ್ನು ಎರಡೇ ದಿನ ಬಾಕಿ ಇದ್ದೂ ತಾಲ್ಲೂಕಿನ ಅಭಿವೃದ್ದಿ ಮಾಡಲು ಯಾರು ಯೋಗ್ಯರೋ ಅಂಥವರನ್ನು ಗಮನದಲ್ಲಿರಿಸಿಕೊಂಡು ಮತದಾನ ಮಾಡುವಂತೆ ಮನವಿ ಮಾಡಿದರು.

ಶ್ರೀಕಾಂತ್ ಜನಾರ್ಧನ್ ಮಾತನಾಡಿ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಾಲ್ಲೂಕಿನ ಎಲ್ಲಾ ಜನತೆ ತಪ್ಪದೇ ಮತ ಹಾಕಿ, ರಾಜಕಾರಣಿಗಳ ಆಮಿಷಕ್ಕೆ ಒಳಗಾಗಬೇಡಿ, ನಿಮ್ಮ ಮತಗಳನ್ನು ಹಣಕ್ಕಾಗಿ ಮಾರಿಕೊಳ್ಳಬೇಡಿ, ತಾಲ್ಲೂಕಿನ ಅಭಿವೃದ್ದಿಯ ದೃಷ್ಟಿಯಿಂದ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವ ಸಲುವಾಗಿ ಮತದಾನ ತಪ್ಪದೇ ಮಾಡಿ ಎಂದು ಮನವಿ ಮಾಡಿದರು.

ಈ ವೇಳೆ ಅಭಿಷೇಕ್, ವಿಜಯ್ ಸಾಗರ್, ಗಿರೀಶ್, ಶಶಾಂಕ್ ಇದ್ದರು.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

5 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago