ಸೈಕಲ್ ಜಾಥಾ ಮೂಲಕ ಸಂವಿಧಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್

ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಸೈಕಲ್ ಜಾಥಾ ಮೂಲಕ ವಿನೂತನವಾಗಿ ಸಾರ್ವಜನಿಕರಿಗೆ ಸಂವಿಧಾನ ಜಾಗೃತಿ ಮೂಡಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಸಮಾಜಕಲ್ಯಾಣ ಇಲಾಖೆ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೆಹಳ್ಳಿ ಗ್ರಾಮಪಂಚಾಯಿತಿಯಲ್ಲಿ ಇಂದು ನಡೆದ ಸಂವಿಧಾನ ಜಾಗೃತಿ ಜಾಥದಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಾತನಾಡಿ, ಭಾರತ ಸಂವಿಧಾನ ಅಂಗೀಕಾರವಾಗಿ 75 ವರ್ಷ ಪೂರೈಸಿದ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥಾವನ್ನು ಪ್ರತಿಯೊಂದು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಸಂವಿಧಾನ ರಚನೆಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಕೊಡುಗೆ ಅಪಾರವಾದದ್ದು, ಪ್ರತಿಯೊಂದು ಕಾಯ್ದೆಯ ಮೂಲ ಸಂವಿಧಾನ. ಸಂವಿಧಾನ ಅಡಿಯಲ್ಲಿ ದೇಶದ ಕಾನೂನು ನಡೆಯುತ್ತಿದೆ. ಯಾವುದನ್ನ ಮಾತನಾಡಬೇಕು ಯಾವುದನ್ನ ಮಾತನಾಡಬಾರದು ಎಂದು ವಾಕ್ ಸ್ವಾತಂತ್ರ್ಯ ಹೇಳುತ್ತದೆ. ಪ್ರತಿಯೊಬ್ಬ ಪ್ರಜೆಗೂ ಅಂತಹ ವಾಕ್ ಸ್ವಾತಂತ್ರ್ಯವನ್ನು ಸಂವಿಧಾನ ನೀಡಿದೆ. ಸಮಾನತೆ, ಸ್ವಾತಂತ್ರ್ಯ ಕಲ್ಪಿಸುವ ಸಂವಿಧಾನ ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.

ಸಂವಿಧಾನ ಜಾಗೃತಿ ಜಾಥಾ ದೇವನಹಳ್ಳಿ, ಹೊಸಕೋಟೆ ತಾಲ್ಲೂಕುಗಳಲ್ಲಿ ಯಶಸ್ವಿಯಾಗಿ ನಡೆದಿದ್ದು, ದೊಡ್ಡಬಳ್ಳಾಪುರದಲ್ಲಿ ಯಶಸ್ವಿಯಾಗಿ ಜಾಥಾ ನಡೆಯುತ್ತಿದೆ, ಜಾಥಾ ಹೋಗುವ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಕೊಡಿಗೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಸಾರ್ವಜನಿಕರಿಗೆ ಸಂವಿಧಾನ ಪೀಠಿಕೆ ಬೋಧಿಸಿ, ಸಂವಿಧಾನ ಮಹತ್ವ ಹೇಳಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು, ಮುಖಂಡರು, ವಿವಿಧ ಸಂಘಟನೆಗಳು ಸಂವಿಧಾನ ಜಾಗೃತಿ ಜಾಥಾ ರಥವನ್ನು ಅದ್ಧೂರಿಯಾಗಿ ಸ್ವಾಗತಿಸಿ, ಸಂವಿಧಾನ ರಥಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.

ವಿವಿಧ ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಮಹಿಳೆಯರು ಕಳಶ ಹೊರುವ ಮೂಲಕ ಬರಮಾಡಿಕೊಂಡರು, ಸೈಕಲ್ ಜಾಥಾ, ಎತ್ತಿನ ಗಾಡಿ ಜಾಥಾ, ಬೈಕ್ ರ್ಯಾಲಿಯೊಂದಿಗೆ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಸಂವಿಧಾನ ಜಾಗೃತಿ ಜಾಥಾದಲ್ಲಿ ಭಾಗಿಯಾದರು.

ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್ ಅನುರಾಧ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಟಿ.ಎಲ್.ಎಸ್ ಪ್ರೇಮ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕವಿತಾ, ದೊಡ್ಡಬಳ್ಳಾಪುರ ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು, ದೊಡ್ಡಬಳ್ಳಾಪುರ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಉಮಾಪತಿ, ಕೊಡಿಗೆಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಆಶಾರಾಣಿ, ಉಪಾಧ್ಯಕ್ಷರಾದ ಸೌಭಾಗ್ಯ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೌಮ್ಯ, ನೋಡೆಲ್ ಅಧಿಕಾರಿ ರಾಜೇಶ್ವರಿ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಆಯಾ ಗ್ರಾಮಪಂಚಾಯಿತಿ ವ್ಯಾಪ್ತಿಯ ಸದಸ್ಯರು, ಮುಖಂಡರು, ವಿವಿಧ ಸಂಘಟನೆಗಳು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

4 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

1 day ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago