ಸೈಕಲ್ ನಲ್ಲಿ ಶಾಲೆಗೆ ತೆರಳುತ್ತಿದ್ದ ಇಬ್ಬರು ಬಾಲಕರಿಗೆ ವಿದ್ಯುತ್ ಸ್ಪರ್ಶ: ಸ್ಥಳದಲ್ಲೇ ಓರ್ವ ವಿದ್ಯಾರ್ಥಿ ಸಾವು: ಮತ್ತೋರ್ವ ಬಾಲಕನ‌ ಸ್ಥಿತಿ ಗಂಭೀರ: ವಿದ್ಯುತ್ ಇಲಾಖೆ ಅಧಿಕಾರಿಗಳ ನಿರ್ಲಕ್ಷಕ್ಕೆ ಸಾರ್ವಜನಿಕರ ಆಕ್ರೋಶ

ಆಂಧ್ರಪ್ರದೇಶದ ಕಡಪಾ ಬಳಿ ಇರುವ ಅಂತಾರಾಷ್ಟ್ರೀಯ ಕಲ್ಯಾಣ ಮಂಟಪದ ಬಳಿಯ ಅಗಡಿ ಬೀದಿಯಲ್ಲಿ ಬುಧವಾರ ಬೆಳಗ್ಗೆ ಶಾಲೆಗೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ನೇತಾಡುತ್ತಿದ್ದ ಲೈವ್ ವಿದ್ಯುತ್ ತಂತಿ ಸ್ಪರ್ಶಿಸಿದ ಹಿನ್ನೆಲೆ ಸ್ಥಳದಲ್ಲೇ ಒಬ್ಬ ಬಾಲಕ ಸಾವನ್ನಪ್ಪಿದ್ದು, ಮತ್ತೋರ್ವ ಬಾಲಕನ‌ ಸ್ಥಿತಿ ಗಂಭೀರವಾಗಿದೆ‌ ಎನ್ನಲಾಗಿದೆ.

10 ಮತ್ತು 8ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳು ವಿದ್ಯಾಸಾಗರ್ ಶಾಲೆಗೆ ಸೈಕಲ್ ನಲ್ಲಿ ಹೋಗುತ್ತಿದ್ದಾಗ ಆಕಸ್ಮಿಕವಾಗಿ ಹೈಟೆನ್ಷನ್ ತಂತಿ ತಗುಲಿದೆ.

ವರದಿಗಳ ಪ್ರಕಾರ, ತನ್ವೀರ್ ಎಂದು ಗುರುತಿಸಲಾದ ವಿದ್ಯಾರ್ಥಿಗಳಲ್ಲಿ ಒಬ್ಬರು ತೀವ್ರ ಸುಟ್ಟಗಾಯಗಳಿಂದ ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನೊಬ್ಬ ವಿದ್ಯಾರ್ಥಿ ತೀವ್ರವಾಗಿ ಗಾಯಗೊಂಡಿದ್ದು, ತಕ್ಷಣ ಸ್ಥಳೀಯರು ಹತ್ತಿರದ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಇಬ್ಬರು ಬಾಲಕರು ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ ಕ್ಷಣದಲ್ಲಿ ಬೈಸಿಕಲ್‌ನಿಂದ ಬಿದ್ದಿದ್ದಾರೆ. ಸ್ವಲ್ಪ ಸಮಯದ ನಂತರ, ವಿದ್ಯಾರ್ಥಿಗಳಲ್ಲಿ ಒಬ್ಬನ ದೇಹಕ್ಕೆ ಬೆಂಕಿ ಹೊತ್ತಿಕೊಂಡಿದೆ. ಇನ್ನೊಬ್ಬ ಹುಡುಗನಿಗೂ ವಿದ್ಯುತ್ ತಗುಲಿ ಚಲನರಹಿತನಾಗಿ ಮಲಗಿದ್ದನು.

ಸ್ಥಳೀಯರು ಶೀಘ್ರವಾಗಿ ತಂತಿಗಳನ್ನು ತೆಗೆದಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿಸಿದರೂ, ತನ್ವೀರ್‌ ಅದಾಗಲೇ ಸಾವನ್ನಪ್ಪಿದ್ದ.

ಈ ಘಟನೆಗೆ ವಿದ್ಯುತ್ ಇಲಾಖೆ ಅಧಿಕಾರಿಗಳ ನಿರ್ಲಕ್ಷವೇ ಕಾರಣವೆಂದು ಪೋಷಕರು, ಸಾರ್ವಜನಿಕರು ಆರೋಪಿಸಿದ್ದಾರೆ.

ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಮತ್ತು ಪ್ರಸ್ತುತ ಘಟನೆಯ ಸುತ್ತಲಿನ ಸಂದರ್ಭಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಇದೇ ವೇಳೆ ಕಡಪಾ ಶಾಸಕಿ ಮಾಧವಿ ರೆಡ್ಡಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.

ಸಚಿವ ನಾರಾ ಲೋಕೇಶ್ ಕೂಡ ಘಟನೆಯ ಬಗ್ಗೆ ತೀವ್ರ ಆಘಾತ ಮತ್ತು ದುಃಖ ವ್ಯಕ್ತಪಡಿಸಿದ್ದಾರೆ. ಗಾಯಾಳು ವಿದ್ಯಾರ್ಥಿಗೆ ಸರಕಾರ ಅತ್ಯುತ್ತಮ ವೈದ್ಯಕೀಯ ಸೇವೆ ನೀಡಲಿದೆ ಎಂದು ಭರವಸೆ ನೀಡಿದ ಅವರು, ಮುಂದೆ ಇಂತಹ ಅನಾಹುತಗಳು ನಡೆಯದಂತೆ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

Ramesh Babu

Journalist

Recent Posts

ಅಬಕಾರಿ ಡಿಸಿ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣ : ಅಕ್ರಮ ಆಸ್ತಿ ಕಂಡು ಬೆಚ್ಚಿದ ಅಧಿಕಾರಿಗಳು.!

ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ…

2 hours ago

ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ.!

ಬೆಂಗಳೂರು: ಸಿಲಿಕಾನ್ ಸಿಟಿಯ ವರ್ತೂರಿನಲ್ಲಿ ಭಯಾನಕ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಮದುವೆಯ ಸತ್ಯವನ್ನು ಮುಚ್ಚಿಟ್ಟು, ಲಿವ್-ಇನ್…

2 hours ago

ಎ.ಬಿ.ಬಸವರಾಜುಗೆ ಸಿಕ್ತು ಪೋಸ್ಟಿಂಗ್: ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ನೇಮಕ

ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ಅವರು ನೇಮಕಗೊಂಡಿದ್ದಾರೆ... ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ…

7 hours ago

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

19 hours ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

20 hours ago