ಆಂಧ್ರಪ್ರದೇಶದ ಕಡಪಾ ಬಳಿ ಇರುವ ಅಂತಾರಾಷ್ಟ್ರೀಯ ಕಲ್ಯಾಣ ಮಂಟಪದ ಬಳಿಯ ಅಗಡಿ ಬೀದಿಯಲ್ಲಿ ಬುಧವಾರ ಬೆಳಗ್ಗೆ ಶಾಲೆಗೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ನೇತಾಡುತ್ತಿದ್ದ ಲೈವ್ ವಿದ್ಯುತ್ ತಂತಿ ಸ್ಪರ್ಶಿಸಿದ ಹಿನ್ನೆಲೆ ಸ್ಥಳದಲ್ಲೇ ಒಬ್ಬ ಬಾಲಕ ಸಾವನ್ನಪ್ಪಿದ್ದು, ಮತ್ತೋರ್ವ ಬಾಲಕನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
10 ಮತ್ತು 8ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳು ವಿದ್ಯಾಸಾಗರ್ ಶಾಲೆಗೆ ಸೈಕಲ್ ನಲ್ಲಿ ಹೋಗುತ್ತಿದ್ದಾಗ ಆಕಸ್ಮಿಕವಾಗಿ ಹೈಟೆನ್ಷನ್ ತಂತಿ ತಗುಲಿದೆ.
ವರದಿಗಳ ಪ್ರಕಾರ, ತನ್ವೀರ್ ಎಂದು ಗುರುತಿಸಲಾದ ವಿದ್ಯಾರ್ಥಿಗಳಲ್ಲಿ ಒಬ್ಬರು ತೀವ್ರ ಸುಟ್ಟಗಾಯಗಳಿಂದ ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನೊಬ್ಬ ವಿದ್ಯಾರ್ಥಿ ತೀವ್ರವಾಗಿ ಗಾಯಗೊಂಡಿದ್ದು, ತಕ್ಷಣ ಸ್ಥಳೀಯರು ಹತ್ತಿರದ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಇಬ್ಬರು ಬಾಲಕರು ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ ಕ್ಷಣದಲ್ಲಿ ಬೈಸಿಕಲ್ನಿಂದ ಬಿದ್ದಿದ್ದಾರೆ. ಸ್ವಲ್ಪ ಸಮಯದ ನಂತರ, ವಿದ್ಯಾರ್ಥಿಗಳಲ್ಲಿ ಒಬ್ಬನ ದೇಹಕ್ಕೆ ಬೆಂಕಿ ಹೊತ್ತಿಕೊಂಡಿದೆ. ಇನ್ನೊಬ್ಬ ಹುಡುಗನಿಗೂ ವಿದ್ಯುತ್ ತಗುಲಿ ಚಲನರಹಿತನಾಗಿ ಮಲಗಿದ್ದನು.
ಸ್ಥಳೀಯರು ಶೀಘ್ರವಾಗಿ ತಂತಿಗಳನ್ನು ತೆಗೆದಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿಸಿದರೂ, ತನ್ವೀರ್ ಅದಾಗಲೇ ಸಾವನ್ನಪ್ಪಿದ್ದ.
ಈ ಘಟನೆಗೆ ವಿದ್ಯುತ್ ಇಲಾಖೆ ಅಧಿಕಾರಿಗಳ ನಿರ್ಲಕ್ಷವೇ ಕಾರಣವೆಂದು ಪೋಷಕರು, ಸಾರ್ವಜನಿಕರು ಆರೋಪಿಸಿದ್ದಾರೆ.
ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಮತ್ತು ಪ್ರಸ್ತುತ ಘಟನೆಯ ಸುತ್ತಲಿನ ಸಂದರ್ಭಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಇದೇ ವೇಳೆ ಕಡಪಾ ಶಾಸಕಿ ಮಾಧವಿ ರೆಡ್ಡಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.
ಸಚಿವ ನಾರಾ ಲೋಕೇಶ್ ಕೂಡ ಘಟನೆಯ ಬಗ್ಗೆ ತೀವ್ರ ಆಘಾತ ಮತ್ತು ದುಃಖ ವ್ಯಕ್ತಪಡಿಸಿದ್ದಾರೆ. ಗಾಯಾಳು ವಿದ್ಯಾರ್ಥಿಗೆ ಸರಕಾರ ಅತ್ಯುತ್ತಮ ವೈದ್ಯಕೀಯ ಸೇವೆ ನೀಡಲಿದೆ ಎಂದು ಭರವಸೆ ನೀಡಿದ ಅವರು, ಮುಂದೆ ಇಂತಹ ಅನಾಹುತಗಳು ನಡೆಯದಂತೆ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…