Categories: ಮಂಡ್ಯ

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ… ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ ಪಾಂಡವಪುರದ ಡಿಂಕಾ ಗ್ರಾಮದಲ್ಲಿ ನಡೆದಿರೋ ಘಟನೆ.

ತಪ್ಪು ಮಾಡಿದ ಅನ್ನೋ ಕಾರಣಕ್ಕೆ ವ್ಯಕ್ತಿ ಬಟ್ಟೆ ಬಿಚ್ಚಿ ಕಾಲು ಮೇಲೆ ಸೈಜು ಕಲ್ಲು ಎತ್ತಾಕಿ ದೌರ್ಜನ್ಯ ನಡೆಸಲಾಗಿದೆ. ಮೂರ್ನಾಲ್ಕು ಜನರ ತಂಡದಿಂದ ವ್ಯಕ್ತಿಯೊಬ್ಬನ್ನ ಮೇಲೆ ಹಲ್ಲೆ ಮಾಡಲಾಗಿದೆ.

ತಾವೆಸಗಿದ ಕೌರ್ಯವನ್ನು ವಿಡಿಯೋ ಮಾಡಿರೋ ಕಿರಾತಕರು. ವ್ಯಕ್ತಿಯ ಎರಡು ಕಾಲುಗಳ ಮೇಲೆ ಸೈಜು ಕಲ್ಲು ಎತ್ತಾಕಿ ಕೌರ್ಯ ಮೆರದಿದ್ದಾರೆ.

ಕೈಮುಗಿದು ತಪ್ಪಾಯ್ತು ಎಂದರು ಬಿಡದೆ ಕಲ್ಲು ಎತ್ತಾಕಿ, ಕಲ್ಲಿನಿಂದ ದೇಹದ ಮೇಲೆ ಹಲ್ಲೆ ನಡೆಸಲಾಗಿದೆ. ವ್ಯಕ್ತಿಯ ಮೇಲೆ ಭೀಕರ ಹಲ್ಲೆ ನಡೆಸಿ ಕಾಲು ಮುರಿದಿರೋ ಕಿರಾತಕರು.

ಹುಡುಗಿ ವಿಚಾರವಾಗಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿರೋ ಮಾಹಿತಿ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹಲ್ಲೆಗೊಳಗಾದವನು ನವೀನ್. ಮೈಸೂರು ಮೂಲದ ನವೀನ್ ಹಾಗೂ ಈತನ ಭಾವನ ಮೇಲೆ ಹಲ್ಲೆ. ಕಲ್ಲಿನಿಂದ ಜಜ್ಜಿ ವಿಕೃತವಾಗಿ ಹಲ್ಲೆ. ಗಿರೀಶ್ ಹಾಗೂ ಗಣೇಶ್ ಎಂಬುವವರಿಂದ ಹಲ್ಲೆ. ಕೆಆರ್ ಪೇಟೆಯ ಬೊಮ್ಮಲಾಪುರದ ಗಿರೀಶ್ ಹಾಗೂ ಗಣೇಶ್.

ಹುಡುಗಿ ಮಿಸ್ಸಿಂಗ್ ವಿಚಾರಕ್ಕೆ ನಡೆದಿರುವ ಗಲಾಟೆ. ಕೆಆರ್ ಪೇಟೆಯ ಬೊಮ್ಮಲಾಪುರದ ನಿಂಗಣ್ಣ ಎಂಬುವವರ ಮಗಳು ಮಿಸ್ಸಿಂಗ್. ಈ ಮಿಸ್ಸಿಂಗ್ ವಿಚಾರಕ್ಕೆ ನವೀನ್ ಹಾಗೂ ಆತನ ಭಾವ ಸಹಕರಿಸಿದ ಆರೋಪ. ಮಿಸ್ಸಿಂಗ್ ಆದ ಹುಡುಗಿ ಸಹೋದರ ಸಂಜಯನಿಗೆ ನವೀನ್ ಗುಂಪಿನಿಂದ ಗಂಭೀರ ಹಲ್ಲೆ ಆರೋಪ. ಇದೆ ವಿಚಾರಕ್ಕೆ ನವೀನ್ ಮತ್ತು ಆತನ ಭಾವನನ್ನ ಹಿಡಿದು ಹಲ್ಲೆ. ಪಾಂಡವಪುರದ ಕನಗನಹಳ್ಳಿ ಬಳಿ ಕಲ್ಲಿನಿಂದ ಜಜ್ಜಿ ಹಲ್ಲೆ. ಸೈಜ್ ಗಲ್ಲಿನಿಂದ ಹಲ್ಲೆ ನಡೆಸಿದ್ದ ಗಿರೀಶ್ ಹಾಗೂ ಗಣೇಶ್.

ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ನವೀನನಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಬಳಿಕ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. ಹಲ್ಲೆ ಮಾಡಿದ ಗಿರೀಶ್ ನನ್ನ ವಶಕ್ಕೆ ಪಡೆದ ಪಾಂಡವಪುರ ಪೊಲೀಸರು.

Ramesh Babu

Journalist

Recent Posts

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

7 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

8 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

12 hours ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

19 hours ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

19 hours ago

ಲಕ್ಕೇನಹಳ್ಳಿ ಬಳಿ ಎತ್ತಿನಹೊಳೆ ಡ್ಯಾಂ ನಿರ್ಮಾಣಕ್ಕೆ ವಿರೋಧ: ಜಲಸಂಪನ್ಮೂಲ ಸಚಿವರಿಗೆ ರೈತರ ಮನವಿ

ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…

1 day ago