Categories: ಮಂಡ್ಯ

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ… ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ ಪಾಂಡವಪುರದ ಡಿಂಕಾ ಗ್ರಾಮದಲ್ಲಿ ನಡೆದಿರೋ ಘಟನೆ.

ತಪ್ಪು ಮಾಡಿದ ಅನ್ನೋ ಕಾರಣಕ್ಕೆ ವ್ಯಕ್ತಿ ಬಟ್ಟೆ ಬಿಚ್ಚಿ ಕಾಲು ಮೇಲೆ ಸೈಜು ಕಲ್ಲು ಎತ್ತಾಕಿ ದೌರ್ಜನ್ಯ ನಡೆಸಲಾಗಿದೆ. ಮೂರ್ನಾಲ್ಕು ಜನರ ತಂಡದಿಂದ ವ್ಯಕ್ತಿಯೊಬ್ಬನ್ನ ಮೇಲೆ ಹಲ್ಲೆ ಮಾಡಲಾಗಿದೆ.

ತಾವೆಸಗಿದ ಕೌರ್ಯವನ್ನು ವಿಡಿಯೋ ಮಾಡಿರೋ ಕಿರಾತಕರು. ವ್ಯಕ್ತಿಯ ಎರಡು ಕಾಲುಗಳ ಮೇಲೆ ಸೈಜು ಕಲ್ಲು ಎತ್ತಾಕಿ ಕೌರ್ಯ ಮೆರದಿದ್ದಾರೆ.

ಕೈಮುಗಿದು ತಪ್ಪಾಯ್ತು ಎಂದರು ಬಿಡದೆ ಕಲ್ಲು ಎತ್ತಾಕಿ, ಕಲ್ಲಿನಿಂದ ದೇಹದ ಮೇಲೆ ಹಲ್ಲೆ ನಡೆಸಲಾಗಿದೆ. ವ್ಯಕ್ತಿಯ ಮೇಲೆ ಭೀಕರ ಹಲ್ಲೆ ನಡೆಸಿ ಕಾಲು ಮುರಿದಿರೋ ಕಿರಾತಕರು.

ಹುಡುಗಿ ವಿಚಾರವಾಗಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿರೋ ಮಾಹಿತಿ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹಲ್ಲೆಗೊಳಗಾದವನು ನವೀನ್. ಮೈಸೂರು ಮೂಲದ ನವೀನ್ ಹಾಗೂ ಈತನ ಭಾವನ ಮೇಲೆ ಹಲ್ಲೆ. ಕಲ್ಲಿನಿಂದ ಜಜ್ಜಿ ವಿಕೃತವಾಗಿ ಹಲ್ಲೆ. ಗಿರೀಶ್ ಹಾಗೂ ಗಣೇಶ್ ಎಂಬುವವರಿಂದ ಹಲ್ಲೆ. ಕೆಆರ್ ಪೇಟೆಯ ಬೊಮ್ಮಲಾಪುರದ ಗಿರೀಶ್ ಹಾಗೂ ಗಣೇಶ್.

ಹುಡುಗಿ ಮಿಸ್ಸಿಂಗ್ ವಿಚಾರಕ್ಕೆ ನಡೆದಿರುವ ಗಲಾಟೆ. ಕೆಆರ್ ಪೇಟೆಯ ಬೊಮ್ಮಲಾಪುರದ ನಿಂಗಣ್ಣ ಎಂಬುವವರ ಮಗಳು ಮಿಸ್ಸಿಂಗ್. ಈ ಮಿಸ್ಸಿಂಗ್ ವಿಚಾರಕ್ಕೆ ನವೀನ್ ಹಾಗೂ ಆತನ ಭಾವ ಸಹಕರಿಸಿದ ಆರೋಪ. ಮಿಸ್ಸಿಂಗ್ ಆದ ಹುಡುಗಿ ಸಹೋದರ ಸಂಜಯನಿಗೆ ನವೀನ್ ಗುಂಪಿನಿಂದ ಗಂಭೀರ ಹಲ್ಲೆ ಆರೋಪ. ಇದೆ ವಿಚಾರಕ್ಕೆ ನವೀನ್ ಮತ್ತು ಆತನ ಭಾವನನ್ನ ಹಿಡಿದು ಹಲ್ಲೆ. ಪಾಂಡವಪುರದ ಕನಗನಹಳ್ಳಿ ಬಳಿ ಕಲ್ಲಿನಿಂದ ಜಜ್ಜಿ ಹಲ್ಲೆ. ಸೈಜ್ ಗಲ್ಲಿನಿಂದ ಹಲ್ಲೆ ನಡೆಸಿದ್ದ ಗಿರೀಶ್ ಹಾಗೂ ಗಣೇಶ್.

ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ನವೀನನಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಬಳಿಕ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. ಹಲ್ಲೆ ಮಾಡಿದ ಗಿರೀಶ್ ನನ್ನ ವಶಕ್ಕೆ ಪಡೆದ ಪಾಂಡವಪುರ ಪೊಲೀಸರು.

Ramesh Babu

Journalist

Recent Posts

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಯುವಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ…

15 hours ago

ಪೊಲೀಸ್: ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ……

ದೇಶ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ ಕೆಲವೇ ವರ್ಷಗಳಲ್ಲಿ ದೇಶದ ಆಂತರಿಕ ವ್ಯವಸ್ಥೆ ಕುಸಿಯುವುದು. ನಿಶ್ಚಿತ…

17 hours ago

ಕಸ್ತೂರಿ ರಂಗನ್ ವರದಿ; ‘ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ’- ಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ  ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…

1 day ago

ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ರೈತ ಸಂಘ ಆಗ್ರಹ

ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…

1 day ago

ಶಿಷ್ಟಾಚಾರ ವಿವಾದಕ್ಕೆ ಮತ್ತಷ್ಟು ಕಾವು: ಶಾಸಕರಿಗೆ ಕಾನೂನು, ಶಿಷ್ಟಾಚಾರದ ಅರಿವಿಲ್ಲ- ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕ ವೆಂಕಟರಮಣಯ್ಯ ವಾಗ್ದಾಳಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…

1 day ago

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

1 day ago