Categories: ಮಂಡ್ಯ

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ… ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ ಪಾಂಡವಪುರದ ಡಿಂಕಾ ಗ್ರಾಮದಲ್ಲಿ ನಡೆದಿರೋ ಘಟನೆ.

ತಪ್ಪು ಮಾಡಿದ ಅನ್ನೋ ಕಾರಣಕ್ಕೆ ವ್ಯಕ್ತಿ ಬಟ್ಟೆ ಬಿಚ್ಚಿ ಕಾಲು ಮೇಲೆ ಸೈಜು ಕಲ್ಲು ಎತ್ತಾಕಿ ದೌರ್ಜನ್ಯ ನಡೆಸಲಾಗಿದೆ. ಮೂರ್ನಾಲ್ಕು ಜನರ ತಂಡದಿಂದ ವ್ಯಕ್ತಿಯೊಬ್ಬನ್ನ ಮೇಲೆ ಹಲ್ಲೆ ಮಾಡಲಾಗಿದೆ.

ತಾವೆಸಗಿದ ಕೌರ್ಯವನ್ನು ವಿಡಿಯೋ ಮಾಡಿರೋ ಕಿರಾತಕರು. ವ್ಯಕ್ತಿಯ ಎರಡು ಕಾಲುಗಳ ಮೇಲೆ ಸೈಜು ಕಲ್ಲು ಎತ್ತಾಕಿ ಕೌರ್ಯ ಮೆರದಿದ್ದಾರೆ.

ಕೈಮುಗಿದು ತಪ್ಪಾಯ್ತು ಎಂದರು ಬಿಡದೆ ಕಲ್ಲು ಎತ್ತಾಕಿ, ಕಲ್ಲಿನಿಂದ ದೇಹದ ಮೇಲೆ ಹಲ್ಲೆ ನಡೆಸಲಾಗಿದೆ. ವ್ಯಕ್ತಿಯ ಮೇಲೆ ಭೀಕರ ಹಲ್ಲೆ ನಡೆಸಿ ಕಾಲು ಮುರಿದಿರೋ ಕಿರಾತಕರು.

ಹುಡುಗಿ ವಿಚಾರವಾಗಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿರೋ ಮಾಹಿತಿ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹಲ್ಲೆಗೊಳಗಾದವನು ನವೀನ್. ಮೈಸೂರು ಮೂಲದ ನವೀನ್ ಹಾಗೂ ಈತನ ಭಾವನ ಮೇಲೆ ಹಲ್ಲೆ. ಕಲ್ಲಿನಿಂದ ಜಜ್ಜಿ ವಿಕೃತವಾಗಿ ಹಲ್ಲೆ. ಗಿರೀಶ್ ಹಾಗೂ ಗಣೇಶ್ ಎಂಬುವವರಿಂದ ಹಲ್ಲೆ. ಕೆಆರ್ ಪೇಟೆಯ ಬೊಮ್ಮಲಾಪುರದ ಗಿರೀಶ್ ಹಾಗೂ ಗಣೇಶ್.

ಹುಡುಗಿ ಮಿಸ್ಸಿಂಗ್ ವಿಚಾರಕ್ಕೆ ನಡೆದಿರುವ ಗಲಾಟೆ. ಕೆಆರ್ ಪೇಟೆಯ ಬೊಮ್ಮಲಾಪುರದ ನಿಂಗಣ್ಣ ಎಂಬುವವರ ಮಗಳು ಮಿಸ್ಸಿಂಗ್. ಈ ಮಿಸ್ಸಿಂಗ್ ವಿಚಾರಕ್ಕೆ ನವೀನ್ ಹಾಗೂ ಆತನ ಭಾವ ಸಹಕರಿಸಿದ ಆರೋಪ. ಮಿಸ್ಸಿಂಗ್ ಆದ ಹುಡುಗಿ ಸಹೋದರ ಸಂಜಯನಿಗೆ ನವೀನ್ ಗುಂಪಿನಿಂದ ಗಂಭೀರ ಹಲ್ಲೆ ಆರೋಪ. ಇದೆ ವಿಚಾರಕ್ಕೆ ನವೀನ್ ಮತ್ತು ಆತನ ಭಾವನನ್ನ ಹಿಡಿದು ಹಲ್ಲೆ. ಪಾಂಡವಪುರದ ಕನಗನಹಳ್ಳಿ ಬಳಿ ಕಲ್ಲಿನಿಂದ ಜಜ್ಜಿ ಹಲ್ಲೆ. ಸೈಜ್ ಗಲ್ಲಿನಿಂದ ಹಲ್ಲೆ ನಡೆಸಿದ್ದ ಗಿರೀಶ್ ಹಾಗೂ ಗಣೇಶ್.

ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ನವೀನನಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಬಳಿಕ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. ಹಲ್ಲೆ ಮಾಡಿದ ಗಿರೀಶ್ ನನ್ನ ವಶಕ್ಕೆ ಪಡೆದ ಪಾಂಡವಪುರ ಪೊಲೀಸರು.

Ramesh Babu

Journalist

Recent Posts

ನೇಕಾರಿಕೆ ಪರಂಪರೆಗೆ ಆಧುನಿಕ ಸವಾಲುಗಳು: ಅಸ್ತಿತ್ವಕ್ಕಾಗಿ ದೊಡ್ಡಬಳ್ಳಾಪುರ ನೇಕಾರರ ಹೋರಾಟ: ಅವನತಿಯತ್ತ ಸಾಗುತ್ತಿದೆ ಸುವರ್ಣಯುಗದ ವೈಭವ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಎಂದರೆ ರೇಷ್ಮೆ ಸೀರೆ, ಹತ್ತಿ ಬಟ್ಟೆ ಮತ್ತು ನೇಕಾರಿಕೆಯ ಪರಂಪರೆಗೆ ಹೆಸರಾದ ನಗರ. ಒಂದು…

16 hours ago

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026: ಇಂದಿನಿಂದ ಬಿಎಲ್ಒ ಗಳು ಮನೆ ಮನೆ ಭೇಟಿ- ಡಿಸಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯಾದ್ಯಂತ ಮಂಗಳ‍ವಾರದಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ…

19 hours ago

ನಂದಿಬೆಟ್ಟದ ತಪ್ಪಲಿನಲ್ಲಿ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಜಿಂಕೆ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದೊಡ್ಡರಾಯಪ್ಪನಹಳ್ಳಿ ಸಮೀಪ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ…

1 day ago

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಚಾಲಕ

ದೊಡ್ಡಬಳ್ಳಾಪುರ: ತಾಲೂಕಿನ ಕೆಸ್ತೂರು ಗೇಟ್ ಸಮೀಪ ಹಾದುಹೋಗಿರುವ ದಾಬಸ್ ಪೇಟೆ - ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಕಾರೊಂದು ಚಾಲಕನ…

1 day ago

ನೀಟ್ ಅಕ್ರಮ, ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡಿದ ಕೇಂದ್ರ ಸರ್ಕಾರ- ಟಿ. ವೆಂಕಟರಮಣಯ್ಯ ಆರೋಪ

ದೊಡ್ಡಬಳ್ಳಾಪುರ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವತಿಯಿಂದ ದೊಡ್ಡಬಳ್ಳಾಪುರದಲ್ಲಿ…

1 day ago

ಅತಿ ಶೀಘ್ರದಲ್ಲಿ ಸಿಎಂ ಡಿಕೆಶಿ ಘಾಟಿಗೆ ಭೇಟಿ- ಆರ್.ವಿ ಮಹೇಶ್ ಕುಮಾರ್

ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಅವರು ಇಂದು ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ…

1 day ago