Categories: ಮಂಡ್ಯ

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ… ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ ಪಾಂಡವಪುರದ ಡಿಂಕಾ ಗ್ರಾಮದಲ್ಲಿ ನಡೆದಿರೋ ಘಟನೆ.

ತಪ್ಪು ಮಾಡಿದ ಅನ್ನೋ ಕಾರಣಕ್ಕೆ ವ್ಯಕ್ತಿ ಬಟ್ಟೆ ಬಿಚ್ಚಿ ಕಾಲು ಮೇಲೆ ಸೈಜು ಕಲ್ಲು ಎತ್ತಾಕಿ ದೌರ್ಜನ್ಯ ನಡೆಸಲಾಗಿದೆ. ಮೂರ್ನಾಲ್ಕು ಜನರ ತಂಡದಿಂದ ವ್ಯಕ್ತಿಯೊಬ್ಬನ್ನ ಮೇಲೆ ಹಲ್ಲೆ ಮಾಡಲಾಗಿದೆ.

ತಾವೆಸಗಿದ ಕೌರ್ಯವನ್ನು ವಿಡಿಯೋ ಮಾಡಿರೋ ಕಿರಾತಕರು. ವ್ಯಕ್ತಿಯ ಎರಡು ಕಾಲುಗಳ ಮೇಲೆ ಸೈಜು ಕಲ್ಲು ಎತ್ತಾಕಿ ಕೌರ್ಯ ಮೆರದಿದ್ದಾರೆ.

ಕೈಮುಗಿದು ತಪ್ಪಾಯ್ತು ಎಂದರು ಬಿಡದೆ ಕಲ್ಲು ಎತ್ತಾಕಿ, ಕಲ್ಲಿನಿಂದ ದೇಹದ ಮೇಲೆ ಹಲ್ಲೆ ನಡೆಸಲಾಗಿದೆ. ವ್ಯಕ್ತಿಯ ಮೇಲೆ ಭೀಕರ ಹಲ್ಲೆ ನಡೆಸಿ ಕಾಲು ಮುರಿದಿರೋ ಕಿರಾತಕರು.

ಹುಡುಗಿ ವಿಚಾರವಾಗಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿರೋ ಮಾಹಿತಿ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹಲ್ಲೆಗೊಳಗಾದವನು ನವೀನ್. ಮೈಸೂರು ಮೂಲದ ನವೀನ್ ಹಾಗೂ ಈತನ ಭಾವನ ಮೇಲೆ ಹಲ್ಲೆ. ಕಲ್ಲಿನಿಂದ ಜಜ್ಜಿ ವಿಕೃತವಾಗಿ ಹಲ್ಲೆ. ಗಿರೀಶ್ ಹಾಗೂ ಗಣೇಶ್ ಎಂಬುವವರಿಂದ ಹಲ್ಲೆ. ಕೆಆರ್ ಪೇಟೆಯ ಬೊಮ್ಮಲಾಪುರದ ಗಿರೀಶ್ ಹಾಗೂ ಗಣೇಶ್.

ಹುಡುಗಿ ಮಿಸ್ಸಿಂಗ್ ವಿಚಾರಕ್ಕೆ ನಡೆದಿರುವ ಗಲಾಟೆ. ಕೆಆರ್ ಪೇಟೆಯ ಬೊಮ್ಮಲಾಪುರದ ನಿಂಗಣ್ಣ ಎಂಬುವವರ ಮಗಳು ಮಿಸ್ಸಿಂಗ್. ಈ ಮಿಸ್ಸಿಂಗ್ ವಿಚಾರಕ್ಕೆ ನವೀನ್ ಹಾಗೂ ಆತನ ಭಾವ ಸಹಕರಿಸಿದ ಆರೋಪ. ಮಿಸ್ಸಿಂಗ್ ಆದ ಹುಡುಗಿ ಸಹೋದರ ಸಂಜಯನಿಗೆ ನವೀನ್ ಗುಂಪಿನಿಂದ ಗಂಭೀರ ಹಲ್ಲೆ ಆರೋಪ. ಇದೆ ವಿಚಾರಕ್ಕೆ ನವೀನ್ ಮತ್ತು ಆತನ ಭಾವನನ್ನ ಹಿಡಿದು ಹಲ್ಲೆ. ಪಾಂಡವಪುರದ ಕನಗನಹಳ್ಳಿ ಬಳಿ ಕಲ್ಲಿನಿಂದ ಜಜ್ಜಿ ಹಲ್ಲೆ. ಸೈಜ್ ಗಲ್ಲಿನಿಂದ ಹಲ್ಲೆ ನಡೆಸಿದ್ದ ಗಿರೀಶ್ ಹಾಗೂ ಗಣೇಶ್.

ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ನವೀನನಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಬಳಿಕ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. ಹಲ್ಲೆ ಮಾಡಿದ ಗಿರೀಶ್ ನನ್ನ ವಶಕ್ಕೆ ಪಡೆದ ಪಾಂಡವಪುರ ಪೊಲೀಸರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಕಾರ್ಮಿಕ–ರೈತರ ಆಕ್ರೋಶ; ಎಸಿ ಕಚೇರಿಗೆ ಮುತ್ತಿಗೆ: ನಾಲ್ಕು ಕಾರ್ಮಿಕ ಸಂಹಿತೆ ರದ್ದು, ವಿದ್ಯುತ್ ಖಾಸಗೀಕರಣ ಕೈಬಿಡಲು ಆಗ್ರಹ

ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು ಹಾಗೂ ವಿದ್ಯುತ್ ಖಾಸಗೀಕರಣ ಕೈಬಿಡಬೇಕು ಸೇರಿದಂತೆ ವಿವಿಧ…

54 minutes ago

ಕಾರು–ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸಾವು

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ದಾಬಸ್‌ಪೇಟೆ–ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ…

59 minutes ago

ಕೆಐಎಎಲ್ ಏರ್‌ಪೋರ್ಟ್ ಬಳಿಯ ಖಾಸಗಿ ಹೋಟೆಲ್‌ನಲ್ಲಿ ಬೆಚ್ಚಿಬೀಳಿಸುವ ಘಟನೆ:

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಖಾಸಗಿ ಹೋಟೆಲ್‌ನಲ್ಲಿ ಇಬ್ಬರು ಬಾಲಕಿಯರು ಶಂಕಾಸ್ಪದವಾಗಿ ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ…

13 hours ago

ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಿಸಿ ಅರ್ಜುನ್ ವಿರಾಟ್ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಯುವ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಅರ್ಜುನ್ ವಿರಾಟ್ ಅವರ ಜನ್ಮದಿನದ ಹಿನ್ನೆಲೆ, ಅವರ ಸ್ನೇಹಿತರು ಹಾಗೂ ಒಡನಾಡಿಗಳು…

18 hours ago

ಸೈಕಲ್ ಗೋಡಾನ್ ಗೆ ಆಕಸ್ಮಿಕ ಬೆಂಕಿ; ಬೆಲೆಬಾಳುವ ಸೈಕಲ್‌ಗಳು ಸುಟ್ಟು ಕರಕಲು

ದೊಡ್ಡಬಳ್ಳಾಪುರ: ನಗರದ ಸೈಕಲ್ ಗೋಡೌನ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಗೋಡೌನ್‌ನಲ್ಲಿದ್ದ ಅಪಾರ ಪ್ರಮಾಣದ ಬೆಲೆಬಾಳುವ ಸೈಕಲ್‌ಗಳು ಸುಟ್ಟು ಕರಕಲಾದ…

18 hours ago

ಲಾರಿ–ಕಾರು ನಡುವೆ ಅಪಘಾತ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಮಧುರೆ ಹೋಬಳಿಯ ಚೆನ್ನದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಬಳಿ ಲಾರಿ ಹಾಗೂ ಕಾರು ನಡುವೆ…

1 day ago