ಸೈಟ್ ವಿವಾದದಲ್ಲಿ ಮಹಿಳೆ ಹತ್ಯೆ ಪ್ರಕರಣ: ಕೊಲೆಗಾರನಿಗೆ ಕಠಿಣ ಜೀವಾವಧಿ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂ. ದಂಡ ವಿಧಿಸಿದ ಕೋರ್ಟ್

ಸೈಟ್ ವಿವಾದದಲ್ಲಿ ಮಹಿಳೆ ಹತ್ಯೆ ಪ್ರಕರಣ: ಕೊಲೆಗಾರನಿಗೆ ಕಠಿಣ ಜೀವಾವಧಿ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂ.  ದಂಡ ವಿಧಿಸಿದ ಕೋರ್ಟ್

ಸೈಟ್ ವಿವಾದದಲ್ಲಿ ಮಹಿಳೆಯನ್ನು ಹತ್ಯೆ ಮಾಡಿದ್ದ ಆರೋಪಕ್ಕೆ ಗುರಿಯಾಗಿದ್ದ ವ್ಯಕ್ತಿಗೆ ಕಠಿಣ ಜೀವಾವಧಿ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂಗಳ ದಂಡವನ್ನು ವಿಧಿಸಿ ತೀರ್ಪನ್ನು ನೀಡಿ ಕೋರ್ಟ್ ಆದೇಶ ನೀಡಿದೆ.

2018 ಆಗಸ್ಟ್ 18 ರಂದು ದೊಡ್ಡಬಳ್ಳಾಪುರ ತಾಲೂಕಿನ ಗುಂಡಮಗೆರೆ ನಿವಾಸಿ ದಿನೇಶ್ ಎಂಬಾತ ಸೈಟ್ ವಿಚಾರವಾಗಿ ನಡೆದ ಗಲಾಟೆಯಲ್ಲಿ ಪುಟ್ಟಮ್ಮ ಎನ್ನುವವರನ್ನು ಹತ್ಯೆ ಮಾಡಿದ್ದರು ಎಂದು ಹೊಸಹಳ್ಳಿಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ಆರೋಪಿ ದಿನೇಶನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು.

ವಾದ ಪ್ರತಿವಾದ ಆಲಿಸಿದ ದೊಡ್ಡಬಳ್ಳಾಪುರದ 4 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ರಮೇಶ್ ದುರುಗಪ್ಪ ಏಕಬೋಟೆ ಅವರು ಆರೋಪಿ ದಿನೇಶ್‌ಗೆ ಕಠಿಣ ಜೀವಾವಧಿ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂ.ಗಳ ದಂಡವನ್ನು ವಿಧಿಸಿ ತೀರ್ಪನ್ನು ನೀಡಿದ್ದಾರೆ.

ಅಲ್ಲದೆ ಇದೇ ಪ್ರಕರಣದಲ್ಲಿ ಮತ್ತೊಂದು ಸೆಕ್ಷನ್ 1860ರ ಕಲಂ 324ರ ಅಪರಾಧಿ ದಿನೇಶ್ ಎರಡು ವರ್ಷ ಎರಡು ವರ್ಷ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ದಂಡವನ್ನು ಸಹ ವಿಧಿಸಲಾಗಿದೆ.

ಸರ್ಕಾರದ ಪರ ನ್ಯಾಯವಾದಿ ನಟರಾಜ್ ವಾದ ಮಂಡಿಸಿದ್ದು, ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ, ಡಿವೈಎಸ್ಪಿ ರವಿ.ಪಿ ಸೂಚನೆ ಅಡಿಯಲ್ಲಿ ಆಗಿನ ಇನ್ಸೆಕ್ಟ‌ರ್ ಸಿದ್ದರಾಜು, ಈಗಿನ ಇನ್ಸೆಕ್ಟ‌ರ್ ರಾವ್ ಗಣೇಶ್ ಜನಾರ್ಧನ್ ತನಿಖೆಯ ನೇತೃತ್ವ ವಹಿಸಿದ್ದರು.

ಕೋರ್ಟ್ ಮಾನಿಟರಿಂಗ್ ಸೆಲ್ ನ ಎಎಸ್‌ಐ ಸಿದ್ದಲಿಂಗಯ್ಯ, ನರಸಿಂಹ ಮೂರ್ತಿ, ಹರೀಶ್ ದಾಖಲೆಗಳನ್ನು ಸಲ್ಲಿಸಿದ್ದರು ಎಂದು ತಿಳಿದುಬಂದಿದೆ.

Ramesh Babu

Journalist

Recent Posts

ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳ ವಿವೇಚನೆ ಮತ್ತು ಜವಾಬ್ದಾರಿ‌……..

ರಾಜಕೀಯ ಪಕ್ಷಗಳ ಭಿನ್ನಮತದ ಸುತ್ತ, ಅಧಿಕಾರ ಕುರ್ಚಿಯ ಹಾವು ಏಣಿ ಆಟದ ಸುತ್ತ, ಸ್ವಾಮೀಜಿಗಳ ಪೀಠದ ಸುತ್ತ, ಧರ್ಮಸ್ಥಳದ ನಿಗೂಢ…

7 hours ago

ನಾಳೆ (ಜು.29) ರಂದು ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ: ಭಕ್ತರಿಗೆ ವಿಶೇಷ ಆಹ್ವಾನ: ವಿಶೇಷ ಪೂಜೆ, ಭಕ್ತರಿಗೆ ಭೋಜನೆ ವ್ಯವಸ್ಥೆ

ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…

19 hours ago

“ಉತ್ತರ ಕರ್ನಾಟಕದ ಗ್ರಾಮೀಣ ನಾಗರ ಪಂಚಮಿ: ಹೆಣ್ಮಕ್ಕಳ ಜೋಕಾಲಿ ಸಂಭ್ರಮ”

ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…

19 hours ago

ಗ್ರಾಪಂ ನೌಕರರ ಬೇಡಿಕೆಗಳ ಈಡೇರಿಕೆಗೆ ಜಿಪಂ ಮುಂದೆ ಪ್ರತಿಭಟನೆ

ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…

21 hours ago

RCB ಕಾಲ್ತುಳಿತ ಪ್ರಕರಣ: ಪೊಲಿಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ: ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾದ ಸರ್ಕಾರದ ನಡೆ

ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…

21 hours ago

ದೇವಸ್ಥಾನದಲ್ಲಿ ಕಳ್ಳನ ಕೈಚಳಕ: ಬೈಕ್ ಸಮೇತ ಕಳ್ಳನ ಬಂಧನ

ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…

24 hours ago