ಸೈಟ್ ವಿವಾದದಲ್ಲಿ ಮಹಿಳೆ ಹತ್ಯೆ ಪ್ರಕರಣ: ಕೊಲೆಗಾರನಿಗೆ ಕಠಿಣ ಜೀವಾವಧಿ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂ. ದಂಡ ವಿಧಿಸಿದ ಕೋರ್ಟ್
ಸೈಟ್ ವಿವಾದದಲ್ಲಿ ಮಹಿಳೆಯನ್ನು ಹತ್ಯೆ ಮಾಡಿದ್ದ ಆರೋಪಕ್ಕೆ ಗುರಿಯಾಗಿದ್ದ ವ್ಯಕ್ತಿಗೆ ಕಠಿಣ ಜೀವಾವಧಿ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂಗಳ ದಂಡವನ್ನು ವಿಧಿಸಿ ತೀರ್ಪನ್ನು ನೀಡಿ ಕೋರ್ಟ್ ಆದೇಶ ನೀಡಿದೆ.
2018 ಆಗಸ್ಟ್ 18 ರಂದು ದೊಡ್ಡಬಳ್ಳಾಪುರ ತಾಲೂಕಿನ ಗುಂಡಮಗೆರೆ ನಿವಾಸಿ ದಿನೇಶ್ ಎಂಬಾತ ಸೈಟ್ ವಿಚಾರವಾಗಿ ನಡೆದ ಗಲಾಟೆಯಲ್ಲಿ ಪುಟ್ಟಮ್ಮ ಎನ್ನುವವರನ್ನು ಹತ್ಯೆ ಮಾಡಿದ್ದರು ಎಂದು ಹೊಸಹಳ್ಳಿಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ಆರೋಪಿ ದಿನೇಶನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು.
ವಾದ ಪ್ರತಿವಾದ ಆಲಿಸಿದ ದೊಡ್ಡಬಳ್ಳಾಪುರದ 4 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ರಮೇಶ್ ದುರುಗಪ್ಪ ಏಕಬೋಟೆ ಅವರು ಆರೋಪಿ ದಿನೇಶ್ಗೆ ಕಠಿಣ ಜೀವಾವಧಿ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂ.ಗಳ ದಂಡವನ್ನು ವಿಧಿಸಿ ತೀರ್ಪನ್ನು ನೀಡಿದ್ದಾರೆ.
ಅಲ್ಲದೆ ಇದೇ ಪ್ರಕರಣದಲ್ಲಿ ಮತ್ತೊಂದು ಸೆಕ್ಷನ್ 1860ರ ಕಲಂ 324ರ ಅಪರಾಧಿ ದಿನೇಶ್ ಎರಡು ವರ್ಷ ಎರಡು ವರ್ಷ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ದಂಡವನ್ನು ಸಹ ವಿಧಿಸಲಾಗಿದೆ.
ಸರ್ಕಾರದ ಪರ ನ್ಯಾಯವಾದಿ ನಟರಾಜ್ ವಾದ ಮಂಡಿಸಿದ್ದು, ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ, ಡಿವೈಎಸ್ಪಿ ರವಿ.ಪಿ ಸೂಚನೆ ಅಡಿಯಲ್ಲಿ ಆಗಿನ ಇನ್ಸೆಕ್ಟರ್ ಸಿದ್ದರಾಜು, ಈಗಿನ ಇನ್ಸೆಕ್ಟರ್ ರಾವ್ ಗಣೇಶ್ ಜನಾರ್ಧನ್ ತನಿಖೆಯ ನೇತೃತ್ವ ವಹಿಸಿದ್ದರು.
ಕೋರ್ಟ್ ಮಾನಿಟರಿಂಗ್ ಸೆಲ್ ನ ಎಎಸ್ಐ ಸಿದ್ದಲಿಂಗಯ್ಯ, ನರಸಿಂಹ ಮೂರ್ತಿ, ಹರೀಶ್ ದಾಖಲೆಗಳನ್ನು ಸಲ್ಲಿಸಿದ್ದರು ಎಂದು ತಿಳಿದುಬಂದಿದೆ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…