ಸೈಟ್ ವಿವಾದದಲ್ಲಿ ಮಹಿಳೆ ಹತ್ಯೆ ಪ್ರಕರಣ: ಕೊಲೆಗಾರನಿಗೆ ಕಠಿಣ ಜೀವಾವಧಿ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂ. ದಂಡ ವಿಧಿಸಿದ ಕೋರ್ಟ್
ಸೈಟ್ ವಿವಾದದಲ್ಲಿ ಮಹಿಳೆಯನ್ನು ಹತ್ಯೆ ಮಾಡಿದ್ದ ಆರೋಪಕ್ಕೆ ಗುರಿಯಾಗಿದ್ದ ವ್ಯಕ್ತಿಗೆ ಕಠಿಣ ಜೀವಾವಧಿ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂಗಳ ದಂಡವನ್ನು ವಿಧಿಸಿ ತೀರ್ಪನ್ನು ನೀಡಿ ಕೋರ್ಟ್ ಆದೇಶ ನೀಡಿದೆ.
2018 ಆಗಸ್ಟ್ 18 ರಂದು ದೊಡ್ಡಬಳ್ಳಾಪುರ ತಾಲೂಕಿನ ಗುಂಡಮಗೆರೆ ನಿವಾಸಿ ದಿನೇಶ್ ಎಂಬಾತ ಸೈಟ್ ವಿಚಾರವಾಗಿ ನಡೆದ ಗಲಾಟೆಯಲ್ಲಿ ಪುಟ್ಟಮ್ಮ ಎನ್ನುವವರನ್ನು ಹತ್ಯೆ ಮಾಡಿದ್ದರು ಎಂದು ಹೊಸಹಳ್ಳಿಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ಆರೋಪಿ ದಿನೇಶನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು.
ವಾದ ಪ್ರತಿವಾದ ಆಲಿಸಿದ ದೊಡ್ಡಬಳ್ಳಾಪುರದ 4 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ರಮೇಶ್ ದುರುಗಪ್ಪ ಏಕಬೋಟೆ ಅವರು ಆರೋಪಿ ದಿನೇಶ್ಗೆ ಕಠಿಣ ಜೀವಾವಧಿ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂ.ಗಳ ದಂಡವನ್ನು ವಿಧಿಸಿ ತೀರ್ಪನ್ನು ನೀಡಿದ್ದಾರೆ.
ಅಲ್ಲದೆ ಇದೇ ಪ್ರಕರಣದಲ್ಲಿ ಮತ್ತೊಂದು ಸೆಕ್ಷನ್ 1860ರ ಕಲಂ 324ರ ಅಪರಾಧಿ ದಿನೇಶ್ ಎರಡು ವರ್ಷ ಎರಡು ವರ್ಷ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ದಂಡವನ್ನು ಸಹ ವಿಧಿಸಲಾಗಿದೆ.
ಸರ್ಕಾರದ ಪರ ನ್ಯಾಯವಾದಿ ನಟರಾಜ್ ವಾದ ಮಂಡಿಸಿದ್ದು, ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ, ಡಿವೈಎಸ್ಪಿ ರವಿ.ಪಿ ಸೂಚನೆ ಅಡಿಯಲ್ಲಿ ಆಗಿನ ಇನ್ಸೆಕ್ಟರ್ ಸಿದ್ದರಾಜು, ಈಗಿನ ಇನ್ಸೆಕ್ಟರ್ ರಾವ್ ಗಣೇಶ್ ಜನಾರ್ಧನ್ ತನಿಖೆಯ ನೇತೃತ್ವ ವಹಿಸಿದ್ದರು.
ಕೋರ್ಟ್ ಮಾನಿಟರಿಂಗ್ ಸೆಲ್ ನ ಎಎಸ್ಐ ಸಿದ್ದಲಿಂಗಯ್ಯ, ನರಸಿಂಹ ಮೂರ್ತಿ, ಹರೀಶ್ ದಾಖಲೆಗಳನ್ನು ಸಲ್ಲಿಸಿದ್ದರು ಎಂದು ತಿಳಿದುಬಂದಿದೆ.
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…