Categories: ರಾಜ್ಯ

ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಶೇ.65ರಷ್ಟು ಹಾಗೂ ಇತರರಿಗೆ ಶೇ.35ರಷ್ಟು ಸೀಟು ಹಂಚಿಕೆಗೆ ಕ್ರಮ-ಸಿಎಂ ಸಿದ್ದರಾಮಯ್ಯ

ಕರ್ನಾಟಕದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಲು ಮುಂದಾಗಿರುವ ಬಗ್ಗೆ ರಾಜ್ಯ ಸರ್ಕಾರವು ಅಗತ್ಯ ಕ್ರಮ ಕೈಗೊಂಡಿದೆ. ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು ಎಂದು ಮುಖ್ಯಕಾರ್ಯದರ್ಶಿಗಳು ಈಗಾಗಲೇ ಮಹಾರಾಷ್ಟ್ರದವರಿಗೆ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೈಲಹೊಂಗಲ ತಾಲ್ಲೂಕಿನಲ್ಲಿ ಸೈನಿಕ ಶಾಲೆ ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು ಅವರು, ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು ಶೇ.65 ರಷ್ಟು ಹಾಗೂ ಇತರರಿಗೆ ಶೇ.35 ರಷ್ಟು ಸೀಟುಗಳು ಹಂಚಿಕೆಯಾಗಬೇಕೆಂದು ಕ್ರಮ ಕೈಗೊಳ್ಳಲಾಗಿದೆ. ಗುಣಮಟ್ಟದ ಶಿಕ್ಷಣದೊಂದಿಗೆ ದೇಶಪ್ರೇಮವನ್ನು ಮಕ್ಕಳಲ್ಲಿ ಬೆಳೆಸಲಾಗುವುದು. ಇಲ್ಲಿ ಕಲಿತವರು ಸೇನೆಗೆ ಸೇರ್ಪಡೆಯಾಗುವ ಅವಕಾಶವಿದೆ ಎಂದರು.

ಸುಮಾರು 110 ಎಕರೆ ಜಮೀನನ್ನು ಸರ್ಕಾರದ ವತಿಯಿಂದ ರಾಕ್ ಗಾರ್ಡನ್ ಮತ್ತು ವಸ್ತುಸಂಗ್ರಹಾಲಯ ನಿರ್ಮಾಣಕ್ಕಾಗಿ ಅನುದಾನವನ್ನೂ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನೀಡಲಾಗಿತ್ತು. ಮುಖ್ಯಮಂತ್ರಿಯಾಗಿ ಶಂಕುಸ್ಥಾಪನೆ ಮಾಡಿ, ಉದ್ಘಾಟನೆಯನ್ನೂ ಮಾಡುತ್ತಿದ್ದೇನೆ. ಎಲ್ಲವೂ ಉತ್ತಮವಾಗಿ ಮೂಡಿಬಂದಿದೆ. ರಾಯಣ್ಣ ಅವರ ಜ್ಞಾಪಕಾರ್ಥವಾಗಿ ಇಲ್ಲಿ ರಾಕ್ ಗಾರ್ಡನ್ ಮತ್ತು ವಸ್ತು ಸಂಗ್ರಹಾಲಯ ನಿರ್ಮಾಣವಾಗಿದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

9 hours ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

1 day ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

2 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

2 days ago