Categories: ರಾಜ್ಯ

ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಶೇ.65ರಷ್ಟು ಹಾಗೂ ಇತರರಿಗೆ ಶೇ.35ರಷ್ಟು ಸೀಟು ಹಂಚಿಕೆಗೆ ಕ್ರಮ-ಸಿಎಂ ಸಿದ್ದರಾಮಯ್ಯ

ಕರ್ನಾಟಕದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಲು ಮುಂದಾಗಿರುವ ಬಗ್ಗೆ ರಾಜ್ಯ ಸರ್ಕಾರವು ಅಗತ್ಯ ಕ್ರಮ ಕೈಗೊಂಡಿದೆ. ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು ಎಂದು ಮುಖ್ಯಕಾರ್ಯದರ್ಶಿಗಳು ಈಗಾಗಲೇ ಮಹಾರಾಷ್ಟ್ರದವರಿಗೆ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೈಲಹೊಂಗಲ ತಾಲ್ಲೂಕಿನಲ್ಲಿ ಸೈನಿಕ ಶಾಲೆ ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು ಅವರು, ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು ಶೇ.65 ರಷ್ಟು ಹಾಗೂ ಇತರರಿಗೆ ಶೇ.35 ರಷ್ಟು ಸೀಟುಗಳು ಹಂಚಿಕೆಯಾಗಬೇಕೆಂದು ಕ್ರಮ ಕೈಗೊಳ್ಳಲಾಗಿದೆ. ಗುಣಮಟ್ಟದ ಶಿಕ್ಷಣದೊಂದಿಗೆ ದೇಶಪ್ರೇಮವನ್ನು ಮಕ್ಕಳಲ್ಲಿ ಬೆಳೆಸಲಾಗುವುದು. ಇಲ್ಲಿ ಕಲಿತವರು ಸೇನೆಗೆ ಸೇರ್ಪಡೆಯಾಗುವ ಅವಕಾಶವಿದೆ ಎಂದರು.

ಸುಮಾರು 110 ಎಕರೆ ಜಮೀನನ್ನು ಸರ್ಕಾರದ ವತಿಯಿಂದ ರಾಕ್ ಗಾರ್ಡನ್ ಮತ್ತು ವಸ್ತುಸಂಗ್ರಹಾಲಯ ನಿರ್ಮಾಣಕ್ಕಾಗಿ ಅನುದಾನವನ್ನೂ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನೀಡಲಾಗಿತ್ತು. ಮುಖ್ಯಮಂತ್ರಿಯಾಗಿ ಶಂಕುಸ್ಥಾಪನೆ ಮಾಡಿ, ಉದ್ಘಾಟನೆಯನ್ನೂ ಮಾಡುತ್ತಿದ್ದೇನೆ. ಎಲ್ಲವೂ ಉತ್ತಮವಾಗಿ ಮೂಡಿಬಂದಿದೆ. ರಾಯಣ್ಣ ಅವರ ಜ್ಞಾಪಕಾರ್ಥವಾಗಿ ಇಲ್ಲಿ ರಾಕ್ ಗಾರ್ಡನ್ ಮತ್ತು ವಸ್ತು ಸಂಗ್ರಹಾಲಯ ನಿರ್ಮಾಣವಾಗಿದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

7 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

8 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

2 days ago