ಸೈಬರ್, ಆರ್ಥಿಕ ಅಪರಾಧಗಳು ವ್ಯಾಪಕವಾಗಿವೆ- ಸಿಎಂ ಸಿದ್ದರಾಮಯ್ಯ ಕಳವಳ

ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಸಮಾನತೆ, ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೆಇಬಿ ಇಂಜಿನಿಯರ್ ಅಸೋಸಿಯೇಷನ್‌ನ ರಜತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಹಾಗೂ 17ನೇ ರಾಜ್ಯ ಮಟ್ಟದ ಸಮ್ಮೇಳನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಭಿಯೋಜಕರು, ನ್ಯಾಯ ಸಂರಕ್ಷಕರು, ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಇವೆಲ್ಲವೂ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿರಾಜ್ಯ ಸ್ಥಾಪನೆ ಸಾಧ್ಯ. ಸಮಾಜದ ಜನರ ಹಿತ ಕಾಪಾಡುವುದು ನಮ್ಮೆಲ್ಲರ ಕೆಲಸ. ನಾಗರಿಕ ಸುರಕ್ಷಾ ಸಂಹಿತೆಯನ್ನು ಕೇಂದ್ರ ಸರ್ಕಾರ ಜಾರಿ ಮಾಡಿದೆ. ಕಾಯ್ದೆಯ ಸೆಕ್ಷನ್ 8 ಮತ್ತು 9ರ ಪ್ರಕಾರ ಅಭಿಯೋಜಕರನ್ನು ವಿಂಗಡಿಸಿ, ಕರ್ತವ್ಯಗಳನ್ನು ಹೇಳಿದ್ದಾರೆ. ಆರೋಪಿಗಳ ಹಕ್ಕುಗಳನ್ನು ಸಂರಕ್ಷಿಸಬೇಕೆಂದು ನಿಯಮ ರೂಪಿಸಿದೆ. ನೂರು ಅಪರಾಧಿಗಳು ಶಿಕ್ಷೆಯಿಂದ ತಪ್ಪಿಸಿಕೊಂಡರೂ, ಒಬ್ಬ ನಿರಪರಾಧಿಗೆ ಶಿಕ್ಷೆಯಾಗಬಾರದು ಎಂದರು.

ಆರೋಪಿಗಳ ಪರವಾಗಿರುವ ಸಾಕ್ಷ್ಯಾಧಾರಗಳನ್ನೂ ನ್ಯಾಯಾಲಯದ ಗಮನಕ್ಕೆ ತರುವುದು ಅಭಿಯೋಜಕರ ಆದ್ಯ ಕರ್ತವ್ಯ. ತನಿಖಾಧಿಕಾರಿಗಳ ಜೊತೆ ಮಾತನಾಡುವುದು, ಸಾಕ್ಷಿಗಳ ವಿಚಾರಣೆ, ಪಾಟಿ ಸವಾಲು ಮಾಡುವಾಗ ಎಚ್ಚರಿಕೆಯಿಂದ ಮಾಡಿದರೆ ಶಿಕ್ಷೆ ಪ್ರಮಾಣ ಹೆಚ್ಚಾಗಲು ಸಾಧ್ಯ ಎಂದು ಹೇಳಿದರು.

ಎನ್.ಸಿ.ಆರ್.ಬಿ ವರದಿ ಪ್ರಕಾರ ಶಿಕ್ಷೆ ಪ್ರಮಾಣ ದರದಲ್ಲಿ ಕರ್ನಾಟಕ, ಬಿಹಾರ ಮತ್ತು ರಾಜಸ್ಥಾನ 22ನೇ ಸ್ಥಾನದಲ್ಲಿವೆ. ಇಲ್ಲಿ ಶಿಕ್ಷೆ ಪ್ರಮಾಣ 52%. ಕೇರಳದಲ್ಲಿ 87% ರಷ್ಟಿದೆ, ಮಿಜೋರಾಂ 92%, ಗುಜರಾತ್ ಮತ್ತು ತೆಲಂಗಾಣ 57%, ಉತ್ತರ ಪ್ರದೇಶದಲ್ಲಿ 72%, ದೆಹಲಿ 89% ರಷ್ಟಿದೆ. ನಾವು ಕೇರಳ ರಾಜ್ಯದೊಂದಿಗೆ ಹೋಲಿಸಿಕೊಳ್ಳಬೇಕು, ಆಗ ಬದಲಾವಣೆ ಸಾಧ್ಯ ಎಂದು ತಿಳಿಸಿದರು.

ಸಮಸ್ಯೆಗಳ ಹೊರತಾಗಿಯೂ ನ್ಯಾಯ ಒದಗಿಸಬೇಕು. ಸೈಬರ್ ಅಪರಾಧಗಳು, ಆರ್ಥಿಕ ಅಪರಾಧಗಳು ವ್ಯಾಪಕವಾಗಿವೆ, ಇದನ್ನು ಮಟ್ಟಹಾಕಲು ತರಬೇತಿ ಕೂಡ ಅತ್ಯಂತ ಅವಶ್ಯಕ. ಅಭಿಯೋಜಕರು ನಿರಂತರ ಅಧ್ಯಯನ ಮಾಡಬೇಕು ಎಂದರು.

ಪ್ರತಿ ವರ್ಷವೂ ಸಮ್ಮೇಳನಗಳ ಜರುಗಬೇಕು. ಅಭಿಯೋಜಕರ ಅಕಾಡೆಮಿ ಸ್ಥಾಪಿಸಿ ಅನುದಾನವನ್ನೂ ನೀಡಲು ಕ್ರಮ ವಹಿಸುತ್ತೇವೆ, ಜೊತೆಗೆ ಬೇಡಿಕೆಗಳನ್ನು ಸಹ ಪರಿಶೀಲಿಸಲಾಗುವುದು ಎಂದು ಹೇಳಿದರು.

Ramesh Babu

Journalist

Recent Posts

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 hour ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

8 hours ago

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

18 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

20 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

1 day ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

1 day ago