ಸೈಬರ್, ಆರ್ಥಿಕ ಅಪರಾಧಗಳು ವ್ಯಾಪಕವಾಗಿವೆ- ಸಿಎಂ ಸಿದ್ದರಾಮಯ್ಯ ಕಳವಳ

ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಸಮಾನತೆ, ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೆಇಬಿ ಇಂಜಿನಿಯರ್ ಅಸೋಸಿಯೇಷನ್‌ನ ರಜತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಹಾಗೂ 17ನೇ ರಾಜ್ಯ ಮಟ್ಟದ ಸಮ್ಮೇಳನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಭಿಯೋಜಕರು, ನ್ಯಾಯ ಸಂರಕ್ಷಕರು, ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಇವೆಲ್ಲವೂ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿರಾಜ್ಯ ಸ್ಥಾಪನೆ ಸಾಧ್ಯ. ಸಮಾಜದ ಜನರ ಹಿತ ಕಾಪಾಡುವುದು ನಮ್ಮೆಲ್ಲರ ಕೆಲಸ. ನಾಗರಿಕ ಸುರಕ್ಷಾ ಸಂಹಿತೆಯನ್ನು ಕೇಂದ್ರ ಸರ್ಕಾರ ಜಾರಿ ಮಾಡಿದೆ. ಕಾಯ್ದೆಯ ಸೆಕ್ಷನ್ 8 ಮತ್ತು 9ರ ಪ್ರಕಾರ ಅಭಿಯೋಜಕರನ್ನು ವಿಂಗಡಿಸಿ, ಕರ್ತವ್ಯಗಳನ್ನು ಹೇಳಿದ್ದಾರೆ. ಆರೋಪಿಗಳ ಹಕ್ಕುಗಳನ್ನು ಸಂರಕ್ಷಿಸಬೇಕೆಂದು ನಿಯಮ ರೂಪಿಸಿದೆ. ನೂರು ಅಪರಾಧಿಗಳು ಶಿಕ್ಷೆಯಿಂದ ತಪ್ಪಿಸಿಕೊಂಡರೂ, ಒಬ್ಬ ನಿರಪರಾಧಿಗೆ ಶಿಕ್ಷೆಯಾಗಬಾರದು ಎಂದರು.

ಆರೋಪಿಗಳ ಪರವಾಗಿರುವ ಸಾಕ್ಷ್ಯಾಧಾರಗಳನ್ನೂ ನ್ಯಾಯಾಲಯದ ಗಮನಕ್ಕೆ ತರುವುದು ಅಭಿಯೋಜಕರ ಆದ್ಯ ಕರ್ತವ್ಯ. ತನಿಖಾಧಿಕಾರಿಗಳ ಜೊತೆ ಮಾತನಾಡುವುದು, ಸಾಕ್ಷಿಗಳ ವಿಚಾರಣೆ, ಪಾಟಿ ಸವಾಲು ಮಾಡುವಾಗ ಎಚ್ಚರಿಕೆಯಿಂದ ಮಾಡಿದರೆ ಶಿಕ್ಷೆ ಪ್ರಮಾಣ ಹೆಚ್ಚಾಗಲು ಸಾಧ್ಯ ಎಂದು ಹೇಳಿದರು.

ಎನ್.ಸಿ.ಆರ್.ಬಿ ವರದಿ ಪ್ರಕಾರ ಶಿಕ್ಷೆ ಪ್ರಮಾಣ ದರದಲ್ಲಿ ಕರ್ನಾಟಕ, ಬಿಹಾರ ಮತ್ತು ರಾಜಸ್ಥಾನ 22ನೇ ಸ್ಥಾನದಲ್ಲಿವೆ. ಇಲ್ಲಿ ಶಿಕ್ಷೆ ಪ್ರಮಾಣ 52%. ಕೇರಳದಲ್ಲಿ 87% ರಷ್ಟಿದೆ, ಮಿಜೋರಾಂ 92%, ಗುಜರಾತ್ ಮತ್ತು ತೆಲಂಗಾಣ 57%, ಉತ್ತರ ಪ್ರದೇಶದಲ್ಲಿ 72%, ದೆಹಲಿ 89% ರಷ್ಟಿದೆ. ನಾವು ಕೇರಳ ರಾಜ್ಯದೊಂದಿಗೆ ಹೋಲಿಸಿಕೊಳ್ಳಬೇಕು, ಆಗ ಬದಲಾವಣೆ ಸಾಧ್ಯ ಎಂದು ತಿಳಿಸಿದರು.

ಸಮಸ್ಯೆಗಳ ಹೊರತಾಗಿಯೂ ನ್ಯಾಯ ಒದಗಿಸಬೇಕು. ಸೈಬರ್ ಅಪರಾಧಗಳು, ಆರ್ಥಿಕ ಅಪರಾಧಗಳು ವ್ಯಾಪಕವಾಗಿವೆ, ಇದನ್ನು ಮಟ್ಟಹಾಕಲು ತರಬೇತಿ ಕೂಡ ಅತ್ಯಂತ ಅವಶ್ಯಕ. ಅಭಿಯೋಜಕರು ನಿರಂತರ ಅಧ್ಯಯನ ಮಾಡಬೇಕು ಎಂದರು.

ಪ್ರತಿ ವರ್ಷವೂ ಸಮ್ಮೇಳನಗಳ ಜರುಗಬೇಕು. ಅಭಿಯೋಜಕರ ಅಕಾಡೆಮಿ ಸ್ಥಾಪಿಸಿ ಅನುದಾನವನ್ನೂ ನೀಡಲು ಕ್ರಮ ವಹಿಸುತ್ತೇವೆ, ಜೊತೆಗೆ ಬೇಡಿಕೆಗಳನ್ನು ಸಹ ಪರಿಶೀಲಿಸಲಾಗುವುದು ಎಂದು ಹೇಳಿದರು.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

3 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

10 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

12 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

1 day ago