ಸೈಬರ್ ಪೊಲೀಸರೆಂದು ಹೇಳಿಕೊಂಡು ವ್ಯಕ್ತಿಯೊಬ್ಬರಿಗೆ ಬ್ಲ್ಯಾಕ್ ಮೇಲ್ ಮಾಡಿ ಅಂದಾಜು ಏಳು ಲಕ್ಷ ವಸೂಲಿ ಮಾಡಿರುವ ನಕಲಿ ಪೊಲೀಸರ ತಂಡವೊಂದರ ಐವರು ಆರೋಪಿಗಳನ್ನು ಬಂಧಿಸಿ ಹೆಡೆಮುರಿ ಕಟ್ಟುವಲ್ಲಿ ಕುಶಾಲನಗರ ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಡಿಕೇರಿ ತಾಲ್ಲೂಕು ಹಾಲೇರಿ ಗ್ರಾಮದ ಇಬ್ರಾಹಿಂ ಬಾದುಷಾ (25), ಮೇಲುಕೋಟೆ ಬಳಿಘಟ್ಟ ಗ್ರಾಮದ ರಾಘವೇಂದ್ರ ಬಿ.ಎಂ. (19), ಬೆಂಗಳೂರು ಬನಶಂಕರಿಯ ಸಂಗೀತ ಗಂಡ : ಇಬ್ರಾಹಿಂ ಬಾದುಷಾ (30), ಕುಶಾಲನಗರ ಆದರ್ಶ ದ್ರಾವಿಡ ಕಾಲೋನಿಯ ಚರಣ್ ಸಿ.ಕೆ. (19) ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಬಂಧಿತರಾಗಿದ್ದಾರೆ.
*ಏನಿದು ಬ್ಲ್ಯಾಕ್ ಮೇಲ್?*
ಕುಶಾಲನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಪಟ್ಟಣ ನಿವಾಸಿಯಾದ ಪರಶಿವಮೂರ್ತಿ ಎಂಬುವವರು 2024ನೇ ಅಕ್ಟೊಬರ್ ತಿಂಗಳಿನಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ನಲ್ಲಿ ಯಾರೋ ಒಬ್ಬರಿಗೆ ಮೆಸೇಜ್ /ಕಮೆಂಟ್ ಮಾಡಿದ್ದಾರೆ. ಇದಾದ ನಂತರ ಅಪರಿಚಿತ ವ್ಯಕ್ತಿ ದಿನಾಂಕ 02-11-2024 ರಂದು ಪರಶಿವಮೂರ್ತಿರವರ ಮೊಬೈಲ್ ಗೆ ಕರೆ ಮಾಡಿ ತಾನು ಪಿರಿಯಾಪಟ್ಟಣ ಸೈಬರ್ ಪೊಲೀಸ್ ಎಂದು ಪರಿಚಯಿಸಿಕೊಂಡು “ನೀವು ಹುಡುಗಿಯರಿಗೆ ಸಾಮಾಜಿಕ ಜಾಲತಾಣದಲ್ಲಿ ಮೆಸೇಜ್ / ಕಮೆಂಟ್ ಮಾಡಿ ಟಾರ್ಚರ್ ನೀಡಿರುವ ಕುರಿತು ದೂರು ದಾಖಲಾಗಿರುತ್ತದೆ. ನೀವು ಹಣವನ್ನು ನೀಡಿದರೆ ಸರಿ ಮಾಡುತ್ತೇನೆ ಇಲ್ಲವಾದಲ್ಲಿ ಮನೆಯ ಬಳಿ ಬಂದು ನಿನ್ನನ್ನು ಕರೆದುಕೊಂಡು ಹೋಗಿ ಜೈಲಿಗೆ ಹಾಕುತ್ತೇನೆ ಹಾಗೂ ಅಕ್ಕ ಪಕ್ಕ ದವರ ಮನೆಯ ಮುಂದೆ ನಿನ್ನ ಮಾನ ಮರ್ಯಾದೆ ಹೋಗುವಂತೆ ಮಾಡುತ್ತೇನೆ ಎಂದು ಬ್ಲ್ಯಾಕ್ ಮೇಲ್ ಮಾಡಿದ್ದ. ಹೀಗೆ ಪರಶಿವಮೂರ್ತಿರವರ ಮೊಬೈಲ್ ಗೆ ಹಲವು ಬಾರಿ ಕರೆ ಮಾಡಿ ಹೆದರಿಸಿ ಸುಮಾರು ಏಳು ಲಕ್ಷ ರೂ. ಹಣವನ್ನು ಪಡೆದಿದ್ದ. ಇದರಿಂದ ರೋಸಿಹೋದ ಪರಶಿವಮೂರ್ತಿರವರು, ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದಿನಾಂಕ 11-01-2025 ರಂದು ದೂರು ದೂರು ನೀಡಿದ ಮೇರೆಗೆ ಕುಶಾಲನಗರ ಟೌನ್ ಪೊಲೀಸ್ ಠಾಣೆಯಲ್ಲಿ ಕಲಂ 318(2), 319(1), 308(2)ರ ಬಿಎನ್ ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.
ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಲು ಸೋಮವಾರಪೇಟೆ ಉಪವಿಭಾಗ ಡಿಎಸ್ಪಿ ಚಂದ್ರಶೇಖರ್, ಕುಶಾಲನಗರ ವೃತ್ತ ನಿರೀಕ್ಷಕರಾದ ಬಿ.ಜಿ. ಪ್ರಕಾಶ್, ಸಬ್ ಇನ್ಸ್ ಪೆಕ್ಟರ್ ಗೀತಾ ಹಾಗೂ ಸಿಬ್ಬಂದಿಗಳ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಈ ತಂಡ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿನಾಂಕ 24-06-2025 ರಂದು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
*ಎಸ್ಪಿ ಶ್ಲಾಘನೆ :*
ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿರುವ ಪೊಲೀಸ್ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ. ರಾಮ ರಾಜನ್ ಅವರು ಶ್ಲಾಘಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…