Categories: ಕೊಡಗು

ಸೈಬರ್ ಪೊಲೀಸರ ಹೆಸರಿನಲ್ಲಿ ಬ್ಲ್ಯಾಕ್ ಮೇಲ್- 7 ಲಕ್ಷ ರೂ. ಸುಲಿಗೆ ಮಾಡಿದ ಐವರು ಆರೋಪಿಗಳು ಅಂದರ್

ಸೈಬರ್ ಪೊಲೀಸರೆಂದು ಹೇಳಿಕೊಂಡು ವ್ಯಕ್ತಿಯೊಬ್ಬರಿಗೆ ಬ್ಲ್ಯಾಕ್ ಮೇಲ್ ಮಾಡಿ ಅಂದಾಜು ಏಳು ಲಕ್ಷ ವಸೂಲಿ ಮಾಡಿರುವ ನಕಲಿ ಪೊಲೀಸರ ತಂಡವೊಂದರ ಐವರು ಆರೋಪಿಗಳನ್ನು ಬಂಧಿಸಿ ಹೆಡೆಮುರಿ ಕಟ್ಟುವಲ್ಲಿ ಕುಶಾಲನಗರ ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಡಿಕೇರಿ ತಾಲ್ಲೂಕು ಹಾಲೇರಿ ಗ್ರಾಮದ ಇಬ್ರಾಹಿಂ ಬಾದುಷಾ (25), ಮೇಲುಕೋಟೆ ಬಳಿಘಟ್ಟ ಗ್ರಾಮದ ರಾಘವೇಂದ್ರ ಬಿ.ಎಂ. (19), ಬೆಂಗಳೂರು ಬನಶಂಕರಿಯ ಸಂಗೀತ ಗಂಡ : ಇಬ್ರಾಹಿಂ ಬಾದುಷಾ (30), ಕುಶಾಲನಗರ ಆದರ್ಶ ದ್ರಾವಿಡ ಕಾಲೋನಿಯ ಚರಣ್ ಸಿ.ಕೆ. (19) ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಬಂಧಿತರಾಗಿದ್ದಾರೆ.

*ಏನಿದು ಬ್ಲ್ಯಾಕ್ ಮೇಲ್?*

ಕುಶಾಲನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಪಟ್ಟಣ ನಿವಾಸಿಯಾದ ಪರಶಿವಮೂರ್ತಿ ಎಂಬುವವರು 2024ನೇ ಅಕ್ಟೊಬರ್ ತಿಂಗಳಿನಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ನಲ್ಲಿ ಯಾರೋ ಒಬ್ಬರಿಗೆ ಮೆಸೇಜ್ /ಕಮೆಂಟ್ ಮಾಡಿದ್ದಾರೆ. ಇದಾದ ನಂತರ ಅಪರಿಚಿತ ವ್ಯಕ್ತಿ ದಿನಾಂಕ 02-11-2024 ರಂದು ಪರಶಿವಮೂರ್ತಿರವರ ಮೊಬೈಲ್ ಗೆ ಕರೆ ಮಾಡಿ ತಾನು ಪಿರಿಯಾಪಟ್ಟಣ ಸೈಬರ್ ಪೊಲೀಸ್ ಎಂದು ಪರಿಚಯಿಸಿಕೊಂಡು “ನೀವು ಹುಡುಗಿಯರಿಗೆ ಸಾಮಾಜಿಕ ಜಾಲತಾಣದಲ್ಲಿ ಮೆಸೇಜ್ / ಕಮೆಂಟ್ ಮಾಡಿ ಟಾರ್ಚರ್ ನೀಡಿರುವ ಕುರಿತು ದೂರು ದಾಖಲಾಗಿರುತ್ತದೆ. ನೀವು ಹಣವನ್ನು ನೀಡಿದರೆ ಸರಿ ಮಾಡುತ್ತೇನೆ ಇಲ್ಲವಾದಲ್ಲಿ ಮನೆಯ ಬಳಿ ಬಂದು ನಿನ್ನನ್ನು ಕರೆದುಕೊಂಡು ಹೋಗಿ ಜೈಲಿಗೆ ಹಾಕುತ್ತೇನೆ ಹಾಗೂ ಅಕ್ಕ ಪಕ್ಕ ದವರ ಮನೆಯ ಮುಂದೆ ನಿನ್ನ ಮಾನ ಮರ್ಯಾದೆ ಹೋಗುವಂತೆ ಮಾಡುತ್ತೇನೆ ಎಂದು ಬ್ಲ್ಯಾಕ್ ಮೇಲ್ ಮಾಡಿದ್ದ. ಹೀಗೆ ಪರಶಿವಮೂರ್ತಿರವರ ಮೊಬೈಲ್ ಗೆ ಹಲವು ಬಾರಿ ಕರೆ ಮಾಡಿ ಹೆದರಿಸಿ ಸುಮಾರು ಏಳು ಲಕ್ಷ ರೂ. ಹಣವನ್ನು ಪಡೆದಿದ್ದ. ಇದರಿಂದ ರೋಸಿಹೋದ ಪರಶಿವಮೂರ್ತಿರವರು, ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದಿನಾಂಕ 11-01-2025 ರಂದು ದೂರು ದೂರು ನೀಡಿದ ಮೇರೆಗೆ ಕುಶಾಲನಗರ ಟೌನ್ ಪೊಲೀಸ್ ಠಾಣೆಯಲ್ಲಿ ಕಲಂ 318(2), 319(1), 308(2)ರ ಬಿಎನ್ ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.

ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಲು ಸೋಮವಾರಪೇಟೆ ಉಪವಿಭಾಗ ಡಿಎಸ್ಪಿ ಚಂದ್ರಶೇಖರ್, ಕುಶಾಲನಗರ ವೃತ್ತ ನಿರೀಕ್ಷಕರಾದ ಬಿ.ಜಿ. ಪ್ರಕಾಶ್, ಸಬ್ ಇನ್ಸ್ ಪೆಕ್ಟರ್ ಗೀತಾ ಹಾಗೂ ಸಿಬ್ಬಂದಿಗಳ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಈ ತಂಡ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿನಾಂಕ 24-06-2025 ರಂದು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

*ಎಸ್ಪಿ ಶ್ಲಾಘನೆ :*

ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿರುವ ಪೊಲೀಸ್ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ. ರಾಮ ರಾಜನ್ ಅವರು ಶ್ಲಾಘಿಸಿದ್ದಾರೆ.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

11 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

15 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

15 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

23 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

2 days ago