Categories: ಕೊಡಗು

ಸೈಬರ್ ಪೊಲೀಸರ ಹೆಸರಿನಲ್ಲಿ ಬ್ಲ್ಯಾಕ್ ಮೇಲ್- 7 ಲಕ್ಷ ರೂ. ಸುಲಿಗೆ ಮಾಡಿದ ಐವರು ಆರೋಪಿಗಳು ಅಂದರ್

ಸೈಬರ್ ಪೊಲೀಸರೆಂದು ಹೇಳಿಕೊಂಡು ವ್ಯಕ್ತಿಯೊಬ್ಬರಿಗೆ ಬ್ಲ್ಯಾಕ್ ಮೇಲ್ ಮಾಡಿ ಅಂದಾಜು ಏಳು ಲಕ್ಷ ವಸೂಲಿ ಮಾಡಿರುವ ನಕಲಿ ಪೊಲೀಸರ ತಂಡವೊಂದರ ಐವರು ಆರೋಪಿಗಳನ್ನು ಬಂಧಿಸಿ ಹೆಡೆಮುರಿ ಕಟ್ಟುವಲ್ಲಿ ಕುಶಾಲನಗರ ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಡಿಕೇರಿ ತಾಲ್ಲೂಕು ಹಾಲೇರಿ ಗ್ರಾಮದ ಇಬ್ರಾಹಿಂ ಬಾದುಷಾ (25), ಮೇಲುಕೋಟೆ ಬಳಿಘಟ್ಟ ಗ್ರಾಮದ ರಾಘವೇಂದ್ರ ಬಿ.ಎಂ. (19), ಬೆಂಗಳೂರು ಬನಶಂಕರಿಯ ಸಂಗೀತ ಗಂಡ : ಇಬ್ರಾಹಿಂ ಬಾದುಷಾ (30), ಕುಶಾಲನಗರ ಆದರ್ಶ ದ್ರಾವಿಡ ಕಾಲೋನಿಯ ಚರಣ್ ಸಿ.ಕೆ. (19) ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಬಂಧಿತರಾಗಿದ್ದಾರೆ.

*ಏನಿದು ಬ್ಲ್ಯಾಕ್ ಮೇಲ್?*

ಕುಶಾಲನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಪಟ್ಟಣ ನಿವಾಸಿಯಾದ ಪರಶಿವಮೂರ್ತಿ ಎಂಬುವವರು 2024ನೇ ಅಕ್ಟೊಬರ್ ತಿಂಗಳಿನಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ನಲ್ಲಿ ಯಾರೋ ಒಬ್ಬರಿಗೆ ಮೆಸೇಜ್ /ಕಮೆಂಟ್ ಮಾಡಿದ್ದಾರೆ. ಇದಾದ ನಂತರ ಅಪರಿಚಿತ ವ್ಯಕ್ತಿ ದಿನಾಂಕ 02-11-2024 ರಂದು ಪರಶಿವಮೂರ್ತಿರವರ ಮೊಬೈಲ್ ಗೆ ಕರೆ ಮಾಡಿ ತಾನು ಪಿರಿಯಾಪಟ್ಟಣ ಸೈಬರ್ ಪೊಲೀಸ್ ಎಂದು ಪರಿಚಯಿಸಿಕೊಂಡು “ನೀವು ಹುಡುಗಿಯರಿಗೆ ಸಾಮಾಜಿಕ ಜಾಲತಾಣದಲ್ಲಿ ಮೆಸೇಜ್ / ಕಮೆಂಟ್ ಮಾಡಿ ಟಾರ್ಚರ್ ನೀಡಿರುವ ಕುರಿತು ದೂರು ದಾಖಲಾಗಿರುತ್ತದೆ. ನೀವು ಹಣವನ್ನು ನೀಡಿದರೆ ಸರಿ ಮಾಡುತ್ತೇನೆ ಇಲ್ಲವಾದಲ್ಲಿ ಮನೆಯ ಬಳಿ ಬಂದು ನಿನ್ನನ್ನು ಕರೆದುಕೊಂಡು ಹೋಗಿ ಜೈಲಿಗೆ ಹಾಕುತ್ತೇನೆ ಹಾಗೂ ಅಕ್ಕ ಪಕ್ಕ ದವರ ಮನೆಯ ಮುಂದೆ ನಿನ್ನ ಮಾನ ಮರ್ಯಾದೆ ಹೋಗುವಂತೆ ಮಾಡುತ್ತೇನೆ ಎಂದು ಬ್ಲ್ಯಾಕ್ ಮೇಲ್ ಮಾಡಿದ್ದ. ಹೀಗೆ ಪರಶಿವಮೂರ್ತಿರವರ ಮೊಬೈಲ್ ಗೆ ಹಲವು ಬಾರಿ ಕರೆ ಮಾಡಿ ಹೆದರಿಸಿ ಸುಮಾರು ಏಳು ಲಕ್ಷ ರೂ. ಹಣವನ್ನು ಪಡೆದಿದ್ದ. ಇದರಿಂದ ರೋಸಿಹೋದ ಪರಶಿವಮೂರ್ತಿರವರು, ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದಿನಾಂಕ 11-01-2025 ರಂದು ದೂರು ದೂರು ನೀಡಿದ ಮೇರೆಗೆ ಕುಶಾಲನಗರ ಟೌನ್ ಪೊಲೀಸ್ ಠಾಣೆಯಲ್ಲಿ ಕಲಂ 318(2), 319(1), 308(2)ರ ಬಿಎನ್ ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.

ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಲು ಸೋಮವಾರಪೇಟೆ ಉಪವಿಭಾಗ ಡಿಎಸ್ಪಿ ಚಂದ್ರಶೇಖರ್, ಕುಶಾಲನಗರ ವೃತ್ತ ನಿರೀಕ್ಷಕರಾದ ಬಿ.ಜಿ. ಪ್ರಕಾಶ್, ಸಬ್ ಇನ್ಸ್ ಪೆಕ್ಟರ್ ಗೀತಾ ಹಾಗೂ ಸಿಬ್ಬಂದಿಗಳ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಈ ತಂಡ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿನಾಂಕ 24-06-2025 ರಂದು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

*ಎಸ್ಪಿ ಶ್ಲಾಘನೆ :*

ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿರುವ ಪೊಲೀಸ್ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ. ರಾಮ ರಾಜನ್ ಅವರು ಶ್ಲಾಘಿಸಿದ್ದಾರೆ.

Ramesh Babu

Journalist

Recent Posts

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

4 hours ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

5 hours ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

8 hours ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

15 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

1 day ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

1 day ago