ಸೈಬರ್ ಪೊಲೀಸರೆಂದು ಹೇಳಿಕೊಂಡು ವ್ಯಕ್ತಿಯೊಬ್ಬರಿಗೆ ಬ್ಲ್ಯಾಕ್ ಮೇಲ್ ಮಾಡಿ ಅಂದಾಜು ಏಳು ಲಕ್ಷ ವಸೂಲಿ ಮಾಡಿರುವ ನಕಲಿ ಪೊಲೀಸರ ತಂಡವೊಂದರ ಐವರು ಆರೋಪಿಗಳನ್ನು ಬಂಧಿಸಿ ಹೆಡೆಮುರಿ ಕಟ್ಟುವಲ್ಲಿ ಕುಶಾಲನಗರ ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಡಿಕೇರಿ ತಾಲ್ಲೂಕು ಹಾಲೇರಿ ಗ್ರಾಮದ ಇಬ್ರಾಹಿಂ ಬಾದುಷಾ (25), ಮೇಲುಕೋಟೆ ಬಳಿಘಟ್ಟ ಗ್ರಾಮದ ರಾಘವೇಂದ್ರ ಬಿ.ಎಂ. (19), ಬೆಂಗಳೂರು ಬನಶಂಕರಿಯ ಸಂಗೀತ ಗಂಡ : ಇಬ್ರಾಹಿಂ ಬಾದುಷಾ (30), ಕುಶಾಲನಗರ ಆದರ್ಶ ದ್ರಾವಿಡ ಕಾಲೋನಿಯ ಚರಣ್ ಸಿ.ಕೆ. (19) ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಬಂಧಿತರಾಗಿದ್ದಾರೆ.
*ಏನಿದು ಬ್ಲ್ಯಾಕ್ ಮೇಲ್?*
ಕುಶಾಲನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಪಟ್ಟಣ ನಿವಾಸಿಯಾದ ಪರಶಿವಮೂರ್ತಿ ಎಂಬುವವರು 2024ನೇ ಅಕ್ಟೊಬರ್ ತಿಂಗಳಿನಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ನಲ್ಲಿ ಯಾರೋ ಒಬ್ಬರಿಗೆ ಮೆಸೇಜ್ /ಕಮೆಂಟ್ ಮಾಡಿದ್ದಾರೆ. ಇದಾದ ನಂತರ ಅಪರಿಚಿತ ವ್ಯಕ್ತಿ ದಿನಾಂಕ 02-11-2024 ರಂದು ಪರಶಿವಮೂರ್ತಿರವರ ಮೊಬೈಲ್ ಗೆ ಕರೆ ಮಾಡಿ ತಾನು ಪಿರಿಯಾಪಟ್ಟಣ ಸೈಬರ್ ಪೊಲೀಸ್ ಎಂದು ಪರಿಚಯಿಸಿಕೊಂಡು “ನೀವು ಹುಡುಗಿಯರಿಗೆ ಸಾಮಾಜಿಕ ಜಾಲತಾಣದಲ್ಲಿ ಮೆಸೇಜ್ / ಕಮೆಂಟ್ ಮಾಡಿ ಟಾರ್ಚರ್ ನೀಡಿರುವ ಕುರಿತು ದೂರು ದಾಖಲಾಗಿರುತ್ತದೆ. ನೀವು ಹಣವನ್ನು ನೀಡಿದರೆ ಸರಿ ಮಾಡುತ್ತೇನೆ ಇಲ್ಲವಾದಲ್ಲಿ ಮನೆಯ ಬಳಿ ಬಂದು ನಿನ್ನನ್ನು ಕರೆದುಕೊಂಡು ಹೋಗಿ ಜೈಲಿಗೆ ಹಾಕುತ್ತೇನೆ ಹಾಗೂ ಅಕ್ಕ ಪಕ್ಕ ದವರ ಮನೆಯ ಮುಂದೆ ನಿನ್ನ ಮಾನ ಮರ್ಯಾದೆ ಹೋಗುವಂತೆ ಮಾಡುತ್ತೇನೆ ಎಂದು ಬ್ಲ್ಯಾಕ್ ಮೇಲ್ ಮಾಡಿದ್ದ. ಹೀಗೆ ಪರಶಿವಮೂರ್ತಿರವರ ಮೊಬೈಲ್ ಗೆ ಹಲವು ಬಾರಿ ಕರೆ ಮಾಡಿ ಹೆದರಿಸಿ ಸುಮಾರು ಏಳು ಲಕ್ಷ ರೂ. ಹಣವನ್ನು ಪಡೆದಿದ್ದ. ಇದರಿಂದ ರೋಸಿಹೋದ ಪರಶಿವಮೂರ್ತಿರವರು, ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದಿನಾಂಕ 11-01-2025 ರಂದು ದೂರು ದೂರು ನೀಡಿದ ಮೇರೆಗೆ ಕುಶಾಲನಗರ ಟೌನ್ ಪೊಲೀಸ್ ಠಾಣೆಯಲ್ಲಿ ಕಲಂ 318(2), 319(1), 308(2)ರ ಬಿಎನ್ ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.
ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಲು ಸೋಮವಾರಪೇಟೆ ಉಪವಿಭಾಗ ಡಿಎಸ್ಪಿ ಚಂದ್ರಶೇಖರ್, ಕುಶಾಲನಗರ ವೃತ್ತ ನಿರೀಕ್ಷಕರಾದ ಬಿ.ಜಿ. ಪ್ರಕಾಶ್, ಸಬ್ ಇನ್ಸ್ ಪೆಕ್ಟರ್ ಗೀತಾ ಹಾಗೂ ಸಿಬ್ಬಂದಿಗಳ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಈ ತಂಡ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿನಾಂಕ 24-06-2025 ರಂದು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
*ಎಸ್ಪಿ ಶ್ಲಾಘನೆ :*
ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿರುವ ಪೊಲೀಸ್ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ. ರಾಮ ರಾಜನ್ ಅವರು ಶ್ಲಾಘಿಸಿದ್ದಾರೆ.
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…