ಸೈಬರ್ ಪೊಲೀಸರೆಂದು ಹೇಳಿಕೊಂಡು ವ್ಯಕ್ತಿಯೊಬ್ಬರಿಗೆ ಬ್ಲ್ಯಾಕ್ ಮೇಲ್ ಮಾಡಿ ಅಂದಾಜು ಏಳು ಲಕ್ಷ ವಸೂಲಿ ಮಾಡಿರುವ ನಕಲಿ ಪೊಲೀಸರ ತಂಡವೊಂದರ ಐವರು ಆರೋಪಿಗಳನ್ನು ಬಂಧಿಸಿ ಹೆಡೆಮುರಿ ಕಟ್ಟುವಲ್ಲಿ ಕುಶಾಲನಗರ ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಡಿಕೇರಿ ತಾಲ್ಲೂಕು ಹಾಲೇರಿ ಗ್ರಾಮದ ಇಬ್ರಾಹಿಂ ಬಾದುಷಾ (25), ಮೇಲುಕೋಟೆ ಬಳಿಘಟ್ಟ ಗ್ರಾಮದ ರಾಘವೇಂದ್ರ ಬಿ.ಎಂ. (19), ಬೆಂಗಳೂರು ಬನಶಂಕರಿಯ ಸಂಗೀತ ಗಂಡ : ಇಬ್ರಾಹಿಂ ಬಾದುಷಾ (30), ಕುಶಾಲನಗರ ಆದರ್ಶ ದ್ರಾವಿಡ ಕಾಲೋನಿಯ ಚರಣ್ ಸಿ.ಕೆ. (19) ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಬಂಧಿತರಾಗಿದ್ದಾರೆ.
*ಏನಿದು ಬ್ಲ್ಯಾಕ್ ಮೇಲ್?*
ಕುಶಾಲನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಪಟ್ಟಣ ನಿವಾಸಿಯಾದ ಪರಶಿವಮೂರ್ತಿ ಎಂಬುವವರು 2024ನೇ ಅಕ್ಟೊಬರ್ ತಿಂಗಳಿನಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ನಲ್ಲಿ ಯಾರೋ ಒಬ್ಬರಿಗೆ ಮೆಸೇಜ್ /ಕಮೆಂಟ್ ಮಾಡಿದ್ದಾರೆ. ಇದಾದ ನಂತರ ಅಪರಿಚಿತ ವ್ಯಕ್ತಿ ದಿನಾಂಕ 02-11-2024 ರಂದು ಪರಶಿವಮೂರ್ತಿರವರ ಮೊಬೈಲ್ ಗೆ ಕರೆ ಮಾಡಿ ತಾನು ಪಿರಿಯಾಪಟ್ಟಣ ಸೈಬರ್ ಪೊಲೀಸ್ ಎಂದು ಪರಿಚಯಿಸಿಕೊಂಡು “ನೀವು ಹುಡುಗಿಯರಿಗೆ ಸಾಮಾಜಿಕ ಜಾಲತಾಣದಲ್ಲಿ ಮೆಸೇಜ್ / ಕಮೆಂಟ್ ಮಾಡಿ ಟಾರ್ಚರ್ ನೀಡಿರುವ ಕುರಿತು ದೂರು ದಾಖಲಾಗಿರುತ್ತದೆ. ನೀವು ಹಣವನ್ನು ನೀಡಿದರೆ ಸರಿ ಮಾಡುತ್ತೇನೆ ಇಲ್ಲವಾದಲ್ಲಿ ಮನೆಯ ಬಳಿ ಬಂದು ನಿನ್ನನ್ನು ಕರೆದುಕೊಂಡು ಹೋಗಿ ಜೈಲಿಗೆ ಹಾಕುತ್ತೇನೆ ಹಾಗೂ ಅಕ್ಕ ಪಕ್ಕ ದವರ ಮನೆಯ ಮುಂದೆ ನಿನ್ನ ಮಾನ ಮರ್ಯಾದೆ ಹೋಗುವಂತೆ ಮಾಡುತ್ತೇನೆ ಎಂದು ಬ್ಲ್ಯಾಕ್ ಮೇಲ್ ಮಾಡಿದ್ದ. ಹೀಗೆ ಪರಶಿವಮೂರ್ತಿರವರ ಮೊಬೈಲ್ ಗೆ ಹಲವು ಬಾರಿ ಕರೆ ಮಾಡಿ ಹೆದರಿಸಿ ಸುಮಾರು ಏಳು ಲಕ್ಷ ರೂ. ಹಣವನ್ನು ಪಡೆದಿದ್ದ. ಇದರಿಂದ ರೋಸಿಹೋದ ಪರಶಿವಮೂರ್ತಿರವರು, ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದಿನಾಂಕ 11-01-2025 ರಂದು ದೂರು ದೂರು ನೀಡಿದ ಮೇರೆಗೆ ಕುಶಾಲನಗರ ಟೌನ್ ಪೊಲೀಸ್ ಠಾಣೆಯಲ್ಲಿ ಕಲಂ 318(2), 319(1), 308(2)ರ ಬಿಎನ್ ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.
ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಲು ಸೋಮವಾರಪೇಟೆ ಉಪವಿಭಾಗ ಡಿಎಸ್ಪಿ ಚಂದ್ರಶೇಖರ್, ಕುಶಾಲನಗರ ವೃತ್ತ ನಿರೀಕ್ಷಕರಾದ ಬಿ.ಜಿ. ಪ್ರಕಾಶ್, ಸಬ್ ಇನ್ಸ್ ಪೆಕ್ಟರ್ ಗೀತಾ ಹಾಗೂ ಸಿಬ್ಬಂದಿಗಳ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಈ ತಂಡ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿನಾಂಕ 24-06-2025 ರಂದು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
*ಎಸ್ಪಿ ಶ್ಲಾಘನೆ :*
ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿರುವ ಪೊಲೀಸ್ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ. ರಾಮ ರಾಜನ್ ಅವರು ಶ್ಲಾಘಿಸಿದ್ದಾರೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…