ಸೈಬರ್ ಹೂಡಿಕೆ ವಂಚನೆ ಪ್ರಕರಣ: ರಾಜಸ್ಥಾನದ 4 ಜನರನ್ನ ಬಂಧನ

ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆಯು ಸೈಬರ್ ಹೂಡಿಕೆ ವಂಚನೆ ಪ್ರಕರಣದಲ್ಲಿ ರಾಜಸ್ಥಾನದ 4 ಜನರನ್ನು ಬಂಧಿಸಿದ್ದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ್ ಮಾಹಿತಿ ನೀಡಿದರು.

ಈ ವ್ಯಕ್ತಿಗಳು ವಿದ್ಯಾರ್ಥಿಗಳನ್ನು ಮೋಸಗೊಳಿಸಿ, ಲಾಭದ ಹಂಚಿಕೆಯ ಭರವಸೆ ನೀಡಿ ಬ್ಯಾಂಕ್ ಖಾತೆಗಳನ್ನು ತೆರೆಯುವಂತೆ ಒತ್ತಾಯಿಸಿ, ನಂತರ ಈ ಖಾತೆಗಳು ವಿದೇಶಿ ವಿನಿಮಯಕ್ಕಾಗಿ ಅಗತ್ಯವಿದೆ ಎಂದು ಹೇಳಿದ್ದರು. ತನಿಖೆಯಲ್ಲಿ ಈ ಖಾತೆಗಳನ್ನು ವಂಚನೆಯ ಚಟುವಟಿಕೆಗಳಿಗಾಗಿ ದುರುಪಯೋಗಪಡಿಸಿರುವುದು ಬಯಲಾಗಿದೆ. ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಇತರ ಶಂಕಿತರ ಪತ್ತೆ ಕಾರ್ಯ ಮುಂದುವರೆದಿದೆ ಎಂದರು.

ಚಂದ್ರಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಮೊಬೈಲ್ ಫೋನ್‌ಗಳನ್ನು ಕದ್ದು ಇತರ ರಾಜ್ಯಗಳಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಒಟ್ಟು ₹10,50,000 ಮೌಲ್ಯದ ವಿವಿಧ ಕಂಪನಿಯ 52 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಪರಾರಿಯಾಗಿರುವ ಇತರ ಆರೋಪಿಗಳ ಶೋಧನಾ ಕಾರ್ಯ ಮುಂದುವರೆದಿವೆ ಎಂದು ಮಾಹಿತಿ ನೀಡಿದರು.

ನಗರದಲ್ಲಿ ದ್ವಿಚಕ್ರ ವಾಹನ ಕಳ್ಳತನವನ್ನು ನಿಗ್ರಹಿಸಲು ನಡೆಸಿದ ಇತ್ತೀಚಿನ ಕಾರ್ಯಾಚರಣೆಯಲ್ಲಿ, ವಿವಿಧ ಪೊಲೀಸ್ ಠಾಣೆಗಳು ಒಟ್ಟು 62 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದು, ಈ ಕಳ್ಳತನಗಳಿಗೆ ಸಂಬಂಧಿಸಿದಂತೆ 12 ಜನರನ್ನು ಬಂಧಿಸಲಾಗಿದೆ. ಈ ಮುಖೇನ, ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 37 ಪ್ರಕರಣಗಳನ್ನು ಬಯಲಿಗೆಳೆಯಲು ಸಹಾಯ ಮಾಡಿವೆ ಎಂದು ತಿಳಿಸಿದರು.

Ramesh Babu

Journalist

Recent Posts

ಇತಿಹಾಸ ಒಂದು ಪಾಠವಾಗಬೇಕೆ ಹೊರತು ರಾಜಕೀಯ ಅಸ್ತ್ರವಾಗಬಾರದು

ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…

1 hour ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…

14 hours ago

ಇಂದಿನಿಂದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

16 hours ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

18 hours ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

20 hours ago

ಬಾಗಲಕೋಟೆಯಲ್ಲಿ ಕಲ್ಲುತೂರಾಟ ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…

21 hours ago