ಸೈಬರ್ ಹೂಡಿಕೆ ವಂಚನೆ ಪ್ರಕರಣ: ರಾಜಸ್ಥಾನದ 4 ಜನರನ್ನ ಬಂಧನ

ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆಯು ಸೈಬರ್ ಹೂಡಿಕೆ ವಂಚನೆ ಪ್ರಕರಣದಲ್ಲಿ ರಾಜಸ್ಥಾನದ 4 ಜನರನ್ನು ಬಂಧಿಸಿದ್ದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ್ ಮಾಹಿತಿ ನೀಡಿದರು.

ಈ ವ್ಯಕ್ತಿಗಳು ವಿದ್ಯಾರ್ಥಿಗಳನ್ನು ಮೋಸಗೊಳಿಸಿ, ಲಾಭದ ಹಂಚಿಕೆಯ ಭರವಸೆ ನೀಡಿ ಬ್ಯಾಂಕ್ ಖಾತೆಗಳನ್ನು ತೆರೆಯುವಂತೆ ಒತ್ತಾಯಿಸಿ, ನಂತರ ಈ ಖಾತೆಗಳು ವಿದೇಶಿ ವಿನಿಮಯಕ್ಕಾಗಿ ಅಗತ್ಯವಿದೆ ಎಂದು ಹೇಳಿದ್ದರು. ತನಿಖೆಯಲ್ಲಿ ಈ ಖಾತೆಗಳನ್ನು ವಂಚನೆಯ ಚಟುವಟಿಕೆಗಳಿಗಾಗಿ ದುರುಪಯೋಗಪಡಿಸಿರುವುದು ಬಯಲಾಗಿದೆ. ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಇತರ ಶಂಕಿತರ ಪತ್ತೆ ಕಾರ್ಯ ಮುಂದುವರೆದಿದೆ ಎಂದರು.

ಚಂದ್ರಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಮೊಬೈಲ್ ಫೋನ್‌ಗಳನ್ನು ಕದ್ದು ಇತರ ರಾಜ್ಯಗಳಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಒಟ್ಟು ₹10,50,000 ಮೌಲ್ಯದ ವಿವಿಧ ಕಂಪನಿಯ 52 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಪರಾರಿಯಾಗಿರುವ ಇತರ ಆರೋಪಿಗಳ ಶೋಧನಾ ಕಾರ್ಯ ಮುಂದುವರೆದಿವೆ ಎಂದು ಮಾಹಿತಿ ನೀಡಿದರು.

ನಗರದಲ್ಲಿ ದ್ವಿಚಕ್ರ ವಾಹನ ಕಳ್ಳತನವನ್ನು ನಿಗ್ರಹಿಸಲು ನಡೆಸಿದ ಇತ್ತೀಚಿನ ಕಾರ್ಯಾಚರಣೆಯಲ್ಲಿ, ವಿವಿಧ ಪೊಲೀಸ್ ಠಾಣೆಗಳು ಒಟ್ಟು 62 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದು, ಈ ಕಳ್ಳತನಗಳಿಗೆ ಸಂಬಂಧಿಸಿದಂತೆ 12 ಜನರನ್ನು ಬಂಧಿಸಲಾಗಿದೆ. ಈ ಮುಖೇನ, ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 37 ಪ್ರಕರಣಗಳನ್ನು ಬಯಲಿಗೆಳೆಯಲು ಸಹಾಯ ಮಾಡಿವೆ ಎಂದು ತಿಳಿಸಿದರು.

Ramesh Babu

Journalist

Recent Posts

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

3 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

8 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

9 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

11 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

1 day ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

1 day ago