ಸೈಬರ್ ಹೂಡಿಕೆ ವಂಚನೆ ಪ್ರಕರಣ: ರಾಜಸ್ಥಾನದ 4 ಜನರನ್ನ ಬಂಧನ

ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆಯು ಸೈಬರ್ ಹೂಡಿಕೆ ವಂಚನೆ ಪ್ರಕರಣದಲ್ಲಿ ರಾಜಸ್ಥಾನದ 4 ಜನರನ್ನು ಬಂಧಿಸಿದ್ದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ್ ಮಾಹಿತಿ ನೀಡಿದರು.

ಈ ವ್ಯಕ್ತಿಗಳು ವಿದ್ಯಾರ್ಥಿಗಳನ್ನು ಮೋಸಗೊಳಿಸಿ, ಲಾಭದ ಹಂಚಿಕೆಯ ಭರವಸೆ ನೀಡಿ ಬ್ಯಾಂಕ್ ಖಾತೆಗಳನ್ನು ತೆರೆಯುವಂತೆ ಒತ್ತಾಯಿಸಿ, ನಂತರ ಈ ಖಾತೆಗಳು ವಿದೇಶಿ ವಿನಿಮಯಕ್ಕಾಗಿ ಅಗತ್ಯವಿದೆ ಎಂದು ಹೇಳಿದ್ದರು. ತನಿಖೆಯಲ್ಲಿ ಈ ಖಾತೆಗಳನ್ನು ವಂಚನೆಯ ಚಟುವಟಿಕೆಗಳಿಗಾಗಿ ದುರುಪಯೋಗಪಡಿಸಿರುವುದು ಬಯಲಾಗಿದೆ. ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಇತರ ಶಂಕಿತರ ಪತ್ತೆ ಕಾರ್ಯ ಮುಂದುವರೆದಿದೆ ಎಂದರು.

ಚಂದ್ರಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಮೊಬೈಲ್ ಫೋನ್‌ಗಳನ್ನು ಕದ್ದು ಇತರ ರಾಜ್ಯಗಳಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಒಟ್ಟು ₹10,50,000 ಮೌಲ್ಯದ ವಿವಿಧ ಕಂಪನಿಯ 52 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಪರಾರಿಯಾಗಿರುವ ಇತರ ಆರೋಪಿಗಳ ಶೋಧನಾ ಕಾರ್ಯ ಮುಂದುವರೆದಿವೆ ಎಂದು ಮಾಹಿತಿ ನೀಡಿದರು.

ನಗರದಲ್ಲಿ ದ್ವಿಚಕ್ರ ವಾಹನ ಕಳ್ಳತನವನ್ನು ನಿಗ್ರಹಿಸಲು ನಡೆಸಿದ ಇತ್ತೀಚಿನ ಕಾರ್ಯಾಚರಣೆಯಲ್ಲಿ, ವಿವಿಧ ಪೊಲೀಸ್ ಠಾಣೆಗಳು ಒಟ್ಟು 62 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದು, ಈ ಕಳ್ಳತನಗಳಿಗೆ ಸಂಬಂಧಿಸಿದಂತೆ 12 ಜನರನ್ನು ಬಂಧಿಸಲಾಗಿದೆ. ಈ ಮುಖೇನ, ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 37 ಪ್ರಕರಣಗಳನ್ನು ಬಯಲಿಗೆಳೆಯಲು ಸಹಾಯ ಮಾಡಿವೆ ಎಂದು ತಿಳಿಸಿದರು.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

24 minutes ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

14 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

15 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

16 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

16 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

20 hours ago