ಸೈಬರ್ ಹೂಡಿಕೆ ವಂಚನೆ ಪ್ರಕರಣ: ರಾಜಸ್ಥಾನದ 4 ಜನರನ್ನ ಬಂಧನ

ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆಯು ಸೈಬರ್ ಹೂಡಿಕೆ ವಂಚನೆ ಪ್ರಕರಣದಲ್ಲಿ ರಾಜಸ್ಥಾನದ 4 ಜನರನ್ನು ಬಂಧಿಸಿದ್ದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ್ ಮಾಹಿತಿ ನೀಡಿದರು.

ಈ ವ್ಯಕ್ತಿಗಳು ವಿದ್ಯಾರ್ಥಿಗಳನ್ನು ಮೋಸಗೊಳಿಸಿ, ಲಾಭದ ಹಂಚಿಕೆಯ ಭರವಸೆ ನೀಡಿ ಬ್ಯಾಂಕ್ ಖಾತೆಗಳನ್ನು ತೆರೆಯುವಂತೆ ಒತ್ತಾಯಿಸಿ, ನಂತರ ಈ ಖಾತೆಗಳು ವಿದೇಶಿ ವಿನಿಮಯಕ್ಕಾಗಿ ಅಗತ್ಯವಿದೆ ಎಂದು ಹೇಳಿದ್ದರು. ತನಿಖೆಯಲ್ಲಿ ಈ ಖಾತೆಗಳನ್ನು ವಂಚನೆಯ ಚಟುವಟಿಕೆಗಳಿಗಾಗಿ ದುರುಪಯೋಗಪಡಿಸಿರುವುದು ಬಯಲಾಗಿದೆ. ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಇತರ ಶಂಕಿತರ ಪತ್ತೆ ಕಾರ್ಯ ಮುಂದುವರೆದಿದೆ ಎಂದರು.

ಚಂದ್ರಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಮೊಬೈಲ್ ಫೋನ್‌ಗಳನ್ನು ಕದ್ದು ಇತರ ರಾಜ್ಯಗಳಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಒಟ್ಟು ₹10,50,000 ಮೌಲ್ಯದ ವಿವಿಧ ಕಂಪನಿಯ 52 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಪರಾರಿಯಾಗಿರುವ ಇತರ ಆರೋಪಿಗಳ ಶೋಧನಾ ಕಾರ್ಯ ಮುಂದುವರೆದಿವೆ ಎಂದು ಮಾಹಿತಿ ನೀಡಿದರು.

ನಗರದಲ್ಲಿ ದ್ವಿಚಕ್ರ ವಾಹನ ಕಳ್ಳತನವನ್ನು ನಿಗ್ರಹಿಸಲು ನಡೆಸಿದ ಇತ್ತೀಚಿನ ಕಾರ್ಯಾಚರಣೆಯಲ್ಲಿ, ವಿವಿಧ ಪೊಲೀಸ್ ಠಾಣೆಗಳು ಒಟ್ಟು 62 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದು, ಈ ಕಳ್ಳತನಗಳಿಗೆ ಸಂಬಂಧಿಸಿದಂತೆ 12 ಜನರನ್ನು ಬಂಧಿಸಲಾಗಿದೆ. ಈ ಮುಖೇನ, ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 37 ಪ್ರಕರಣಗಳನ್ನು ಬಯಲಿಗೆಳೆಯಲು ಸಹಾಯ ಮಾಡಿವೆ ಎಂದು ತಿಳಿಸಿದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

1 hour ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

13 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

14 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

15 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

15 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

22 hours ago