Categories: ಕೋಲಾರ

ಸೊಸೈಟಿಯಿಂದ ರೈತರಿಗೆ ಸಾಲದ ರೂಪದಲ್ಲಿಯೇ ಲಾಭದಾಯಕ ಸಸಿಗಳನ್ನು ನೀಡಲು ಡಿಸಿಪಿ ದೇವರಾಜ್ ಸಲಹೆ

ಕೋಲಾರ: ರೈತರು ಅಭಿವೃದ್ಧಿಯಾಗಲು ಲಾಭದಾಯಕ ಸಸಿಗಳನ್ನು ಸೊಸೈಟಿ ಮೂಲಕವೇ ಸಾಲದ ರೂಪದಲ್ಲಿ ನೀಡುವ ಮೂಲಕ ಹೊಸ ಬದಲಾವಣೆಗೆ ಮುಂದಾಗಬೇಕು ಬೆಂಗಳೂರು ಪೂರ್ವ ವಲಯ ಡಿಸಿಪಿ ಡಿ.ದೇವರಾಜ್ ಸಲಹೆ ನೀಡಿದರು,

ಭಾನುವಾರ ತಾಲೂಕಿನ ವಕ್ಕಲೇರಿ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ನೂತನ ಕಟ್ಟಡ ಉದ್ವಾಟನೆ ಹಾಗೂ 2023-24 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಸಹಕಾರಿ ಸಂಘಗಳು ಎಂದರೆ ಕೇವಲ ಸಾಲ ಕೊಡುವುದು ಸಾಲವನ್ನು ಕಟ್ಟಿಸಿಕೊಳ್ಳುವುದಕ್ಕೆ ಅಷ್ಟೇ ಸೀಮಿತಗೊಳಿಸದೇ ರೈತರಿಗೆ ಉಪಯುಕ್ತ ಮಾಹಿತಿ ನೀಡಬೇಕು ರೈತರು ಪ್ರತಿ ಬಾರಿ ಟಮೋಟ, ಆಲೂಗಡ್ಡೆ ಯಂತಹ ತರಕಾರಿ ಬೆಳೆಗಳಿಂದ ಸಾಲದ ಸುಳಿಯಲ್ಲಿ ಸಿಕ್ಕಿ ಜೀವನ ನಿರ್ವಹಣೆ ಕಷ್ಟವಾಗುತ್ತದೆ ಹೊಸ ಹೊಸ ಬಗೆಯ ಹಣ್ಣಿನ ಗಿಡಗಳನ್ನು ಸೊಸೈಟಿ ಮೂಲಕವೇ ಲಾಭ ಪಡೆಯುವುದು ಹೇಗೆ ಎಂಬುದನ್ನು ತೋರಿಸಿಕೊಡಬೇಕು ಎಂದರು.

ಯಾರಿಗೆ ಆಗಲಿ ಅಧಿಕಾರ ಎಂಬುದು ಶಾಶ್ವತವಲ್ಲ ತಮಗೆ ಅಧಿಕಾರ ಸಿಕ್ಕಾಗ ಬದಲಾವಣೆ ಮಾಡುವುದು ಅವರ ಜವಾಬ್ದಾರಿಯಾಗಬೇಕು ಸೊಸೈಟಿ ಕಟ್ಟಡವು ರೈತರ ಸ್ವತ್ತು ಆಗಿದ್ದು ಇಲ್ಲಿಂದ ಹೋಬಳಿಯ ರೈತರಿಗೆ ಮಾಹಿತಿ, ಮಾರ್ಗದರ್ಶನ ನಿರಂತರವಾಗಿ ನೀಡಬೇಕು ಸೊಸೈಟಿಗೆ ಸ್ವಂತ ಜಾಗವನ್ನು ಮಂಜೂರು ಮಾಡಿದ್ದರು ಕಾರಣಾಂತರಗಳಿಂದ ಸಮಸ್ಯೆಯಾಗಿತ್ತು ಕೂಡಲೇ ಜಿಲ್ಲಾಧಿಕಾರಿಯೊಂದಿಗೆ ಮಾತಾಡಿ ಆದಷ್ಟು ಬೇಗ ಸಮಸ್ಯೆ ಇತ್ಯರ್ಥ ಪಡಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಕ್ಕಲೇರಿ ರೇಷ್ಮೆ ಬೆಳಗಾರರ ಹಾಗೂ ರೈತರ ಸಹಕಾರ ಸಂಘದ‌ ಅಧ್ಯಕ್ಷ ಎಂ.ಪಾಲಾಕ್ಷಗೌಡ ಮಾತನಾಡಿ, ಸೊಸೈಟಿಯಲ್ಲಿ ಈ ಸಾಲಿನಲ್ಲಿ 23.39 ಲಕ್ಷದಷ್ಟು ಲಾಭವನ್ನು ಗಳಿಸಿದೆ ಈ ವರ್ಷವು ಸಹ ರೈತರಿಗೆ ಮಹಿಳಾ ಸಂಘಗಳಿಗೆ ಹಾಗೂ ರೇಷ್ಮೆ ಬೆಳೆಗಾರರಿಗೆ ಹೆಚ್ಚಿನ ಸಾಲ ನೀಡುವ ಮೂಲಕ ಜಿಲ್ಲೆಗೆ ಮಾದರಿ ಸೊಸೈಟಿಯಾಗಿ ಮಾಡಿದ್ದೇವೆ ರೈತ ಭವನದ ನಿರ್ಮಾಣಕ್ಕೆ 37.50 ಲಕ್ಷದಷ್ಟು ದಾನಿಗಳ ಮೂಲಕವೇ ಪಡೆದಿದ್ದು ಇದರಲ್ಲಿ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ 15 ಲಕ್ಷವನ್ನು ಅಪೆಕ್ಸ್ ಬ್ಯಾಂಕ್ ಮೂಲಕ ಮತ್ತು ಮಾಜಿ‌ ಕೆ.ಶ್ರೀನಿವಾಸಗೌಡ 4 ಲಕ್ಷ ಸೇರಿದ್ದು ಉಳಿದ ಹಣವನ್ನು ದಾನಿಗಳಿಂದ ಪಡೆದಿದ್ದು ಎಂಎಲ್ಸಿ ಅನಿಲ್ ಕುಮಾರ್ ಅವರು 10 ಲಕ್ಷ ಕೊಡತ್ತೇವೆ ಎಂದು ಹೇಳಿದ್ದು ಇದುವರೆಗೂ ಕೊಟ್ಟಿಲ್ಲ ಎಂದರು,

ಈ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಶ್ರೀನಿವಾಸಗೌಡ, ಜೆಡಿಎಸ್ ಮುಖಂಡ ವಕ್ಕಲೇರಿ ರಾಮು, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಅಂಬರೀಶ್, ಕ್ರಿಯಾಜಿನ್ ಸಂಸ್ಥೆಯ ಮಂಜುನಾಥ್ ಯಾದವ್, ನಾರಾಯಣಸ್ವಾಮಿ, ಶ್ರೀಕಾಂತ್, ಸತೀಶ್, ವಕ್ಕಲೇರಿ ಗ್ರಾಪಂ ಅಧ್ಯಕ್ಷೆ ರಾಧಿಕಾ ಮಂಜುನಾಥ್, ಮುದವತ್ತಿ ಗ್ರಾಪಂ ಅಧ್ಯಕ್ಷೆ ರತ್ನಮ್ಮ, ಸೊಸೈಟಿ ಉಪಾಧ್ಯಕ್ಷ ವಿ.ಮಂಜುನಾಥ್, ನಿರ್ದೇಶಕರಾದ ಎಂ.ಆನಂದ್ ಕುಮಾರ್, ಆರ್.ಚಂದ್ರೇಗೌಡ, ವೆಂಕಟಗಿರಿಯಪ್ಪ, ಟಿ.ಮುನಿಯಪ್ಪ, ಜಿ.ಎಸ್ ಸದಾಶಿವಯ್ಯ, ಎಸ್.ಕೃಷ್ಣಪ್ಪ, ಬಿ.ಎನ್ ಚಿದಾನಂದ, ಎಂ ರಮೇಶ್, ಚೌಡಮ್ಮ, ಶಾಂತಕುಮಾರಿ ಕಾರ್ಯದರ್ಶಿ ಎಂ.ಮಂಜುನಾಥ್ ಮುಂತಾದವರು ಇದ್ದರು

Ramesh Babu

Journalist

Recent Posts

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

4 minutes ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

3 hours ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

10 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

20 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

1 day ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

1 day ago